Sunday, November 12, 2023

ಸಾಮರ್ಥ್ಯ ವೃದ್ಧಿಗೆ ಡಿಜಿಟಲ್‌ ತಂತ್ರಜ್ಞಾನ ಬಳಕೆ ಹೇಗೆ?

 ಸಾಮರ್ಥ್ಯ ವೃದ್ಧಿಗೆ ಡಿಜಿಟಲ್‌ ತಂತ್ರಜ್ಞಾನ ಬಳಕೆ ಹೇಗೆ?

ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕಂತು 5

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಮತ್ತು ಪಂಚಾಯಿತಿ ಪ್ರತಿನಿಧಿಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುವುದು ಗ್ರಾಮಗಳ ಅಭಿವೃದ್ಧಿಗೆ ಅತ್ಯಂತ ಅಗತ್ಯ. ಅದಕ್ಕಾಗಿ ಸರ್ಕಾರ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗೆ ತರಬೇತಿ ಶಿಬಿರಗಳನ್ನು ನಡೆಸುತ್ತದೆ. ಆದರೆ ತರಬೇತಿ ಮುಗಿಸಿ ಬರುವಷ್ಟರಲ್ಲಿ ಬಹುಮಂದಿಗೆ ಅಲ್ಲಿ ಹೇಳಿ ಕೊಟ್ಟದ್ದು ಮರೆತೇ ಹೋಗಿರುತ್ತದೆ.

ಹಾಗಿದ್ದರೆ ಅದನ್ನು ಸದಾಕಾಲ ನೆನಪು ಮಾಡಿಕೊಳ್ಳುವ ವ್ಯವಸ್ಥೆ ಯಾವುದಾದರೂ ಇದೆಯೇ? ಹೌದು ಇದೆ ಎನ್ನುತ್ತಾರೆ ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಡಾ. ಶಂಕರ ಕೆ. ಪ್ರಸಾದ್.‌

ಶಿವಮೊಗ್ಗೆ ಬಾನುಲಿಯಲ್ಲಿ ಪ್ರತಿ ಭಾನುವಾರ 8 ಗಂಟೆಗೆ ಮೂಡಿ ಬರುತ್ತಿರುವ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ವಿಶಿಷ್ಟ ಕಾರ್ಯಕ್ರಮದ ಐದನೇ ಕಂತಿನಲ್ಲಿ ಗ್ರಾಮ ಪಂಚಾಯಿತಿಗಳು ಮತ್ತು ಪಂಚಾಯಿತಿ ಸದಸ್ಯರು ಸಾಮರ್ಥ್ಯ ವೃದ್ಧಿಸಿಕೊಳ್ಳಲು ಡಿಜಿಟಲ್‌ ತಂತ್ರಜ್ಞಾನವನ್ನು ಬಳಸುವ ಬಗ್ಗೆ ಮಾತನಾಡಿದ್ದಾರೆ.

ʼ21ನೇ ಶತಮಾನದ ಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಪುಸ್ತಕವನ್ನು ಆಧರಿಸಿ ಬರುತ್ತಿರುವ ಈ ಕಾರ್ಯಕ್ರಮದ ಐದನೇ ಕಂತು 2023 ನವೆಂಬರ್‌ 12ರ ಭಾನುವಾರ ಪ್ರಸಾರವಾಯಿತು.

ಇಂದಿನ ಬಾನುಲಿಯಲ್ಲಿ ಬಂದ ವಿಚಾರಗಳೇನು?

ಆಲಿಸಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ:  


ಇವುಗಳನ್ನೂ ಓದಿರಿ:

Sunday, November 5, 2023

ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕಂತು-2

 ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

ಕಂತು-2

ಬೆಂಗಳೂರು: ರೇಡಿಯೋ ಶಿವಮೊಗ್ಗದಲ್ಲಿ 2023 ನವೆಂಬರ್ 5ರ ಭಾನುವಾರ ಬೆಳಗ್ಗೆ 8 ಗಂಟೆಗೆ ʼಆತ್ಮ ನಿರ್ಭರ ಗ್ರಾಮ ಪಂಚಾಯ್ತಿʼ ವಿಶಿಷ್ಟ ಕಾರ್ಯಕ್ರಮದ ಎರಡನೇ ಕಂತು ಮೂಡಿಬಂತು.

ಅಕ್ಟೋಬರ್‌ 15ರ ಭಾನುವಾರದಿಂದ ಪ್ರತಿ ಭಾನುವಾರವೂ ಬೆಳಗ್ಗೆ 8 ಗಂಟೆಗೆ ರೇಡಿಯೋ ಶಿವಮೊಗ್ಗ 90.8 ಎಫ್‌ ಎಂ ನಲ್ಲಿ ಡಿಜಿಟಲ್‌ ತಂತ್ರಜ್ಞಾನ ಪರಿಣತ ಡಾ. ಶಂಕರ ಕೆ. ಪ್ರಸಾದ್‌ ಅವರು ರಚಿಸಿರುವ 21ನೆಯ ಶತಮಾನದ ಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕೃತಿಯನ್ನು ಆಧರಿಸಿದ ಬಾನುಲಿ ಕಾರ್ಯಕ್ರಮ ಪ್ರಸಾರ ಆರಂಭವಾಗಿದೆ.

ಈದಿನ ಕಾರ್ಯಕ್ರಮದ 2ನೇ ಕಂತಿನ ಮರುಪ್ರಸಾರವಾಯಿತು ಎಂದು ರೇಡಿಯೋ ಶಿವಮೊಗ್ಗ ಮತ್ತು ಬೆಂಗಳೂರಿನ ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಪತ್ರಿಕಾ ಪ್ರಕಟಣೆ ತಿಳಿಸಿದೆ.

 ಇಂದಿನ ಬಾನುಲಿಯಲ್ಲಿ ಬಂದ ವಿಚಾರಗಳೇನು?

ಆಲಿಸಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ: 


ಇದನ್ನೂ ನೋಡಿ:

ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

Thursday, November 2, 2023

ಶ್ರೀ ಬಾಲಾಜಿ ಕೃಪಾ ಬಡಾವಣೆ ರಾಜ್ಯೋತ್ಸವ ಸಂಭ್ರಮ

ಶ್ರೀ ಬಾಲಾಜಿ ಕೃಪಾ ಬಡಾವಣೆ ರಾಜ್ಯೋತ್ಸವ ಸಂಭ್ರಮ

ಬೆಂಗಳೂರು: ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವವನ್ನು ೨೦೨೩ ನವೆಂಬರ್‌ ೦೧ರ ಬುಧವಾರ ಆಚರಿಸಲಾಯಿತು.

 ಬಡಾವಣೆಯ ಹಿರಿಯ ಸದಸ್ಯ, ಕೆಜಿಎಫ್‌ ಗೋಲ್ಡನ್‌ ವ್ಯಾಲಿ ಎಜುಕೇಷನ್‌ ಟ್ರಸ್ಟ್‌ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಎಚ್.‌ ಆರ್.‌ ಸೇತೂರಾಂ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿದರು.

ಬೆಸ್ಕಾಂ ಅಸಿಸ್ಟೆಂಟ್‌ ಎಂಜಿನಿಯರ್‌ ಮೊಹಮ್ಮದ್‌ ಇರ್ಫಾನ್‌ ಅಲಿ ಅವರು ಈ ಸಂದರ್ಭದಲ್ಲಿ ಹಾಜರಿದ್ದು ಬಡಾವಣೆಯ ನಿವಾಸಿಗಳಿಗೆ ವಿದ್ಯುತ್‌ ಸರಬರಾಜಿಗೆ ಸಂಬಂಧಿಸಿದ ಮಾಹಿತಿ ಒದಗಿಸಿದರು.

ಸಂಘದ ಅಧ್ಯಕ್ಷ ರಾಜೇಶ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ನೆತ್ರಕೆರೆ ಉದಯಶಂಕರ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಬಿಎಲ್.‌ ಪ್ರಭಾವತಿ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ಪ್ರವೀಣ್‌ ಕುಮಾರ್ ವಂದನೆಗಳನ್ನು ಸಲ್ಲಿಸಿದರು.


ಬಡಾವಣೆಯ ಮಹಳೆಯರು, ಹಿರಿಯ ಸದಸ್ಯರು ಸೇರಿದಂತೆ ಬಡಾವಣೆಯ ನಿವಾಸಿಗಳು ಅತ್ಯುತ್ಸಾಹದೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಡಾವಣೆಯ ಹಿರಿಯ ಸದಸ್ಯ ನ್ಯಾಯವಾದಿ ಮುನಿರಾಜು ಅವರು ಉಪಾಹಾರದ ವ್ಯವಸ್ಥೆ ಮಾಡಿದ್ದರು.

ಧ್ವಜಾರೋಹಣ ಎಚ್.‌ ಆರ್.‌ ಸೇತೂರಾಂ ಅವರಿಂದ.


ಅಧ್ಯಕ್ಷೀಯ ಭಾಷಣ ರಾಜೇಶ ಕೆ. ಹೆಗಡೆ ಅವರಿಂದ.


ಬೆಸ್ಕಾಂ ಅಸಿಸ್ಟೆಂಟ್‌ ಎಂಜಿನಿಯರ್‌ ಮೊಹಮ್ಮದ್‌ ಇರ್ಫಾನ್‌ ಅಲಿ ಅವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಇರ್ಫಾನ್‌ ಅವರಿಂದ ಎರಡು ಮಾತು.

Monday, October 30, 2023

ಅಭಿನಂದನೆಗಳು ಮತ್ತೊಮ್ಮೆ ಬಾನಾಸು, ಕಿರಣ್‌ ರಾಜ್‌....

 ಅಭಿನಂದನೆಗಳು ಮತ್ತೊಮ್ಮೆ ಬಾನಾಸು, ಕಿರಣ್‌ ರಾಜ್‌..

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ʼಬಾನಾಸುʼ ಎಂಬ ಕಾವ್ಯನಾಮದೊಂದಿಗೆ ಸುಮಾರು ೪೩ಕ್ಕೂ ಹೆಚ್ಚು ವರ್ಷಗಳಿಂದ ನಿರಂತರವಾಗಿ ಕನ್ನಡ ಸಿನಿಮಾ ರಂಗದ ಅಂತರಂಗವನ್ನು ತೆರೆದು ಓದುಗರ ಮುಂದೆ ಇಟ್ಟ ಹಿರಿಯ ಚಲನಚಿತ್ರ ಪತ್ರಕರ್ತ ಬಾಡೂರು ನಾರಾಯಣ ಆಚಾರ್ಯ ಸುಬ್ರಹ್ಮಣ್ಯ (ಬಾನಾಸು) ಅವರು ಕನ್ನಡ ಚಲನಚಿತ್ರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ʼಶ್ರೇಷ್ಠ ಚಲನಚಿತ್ರ ವಿಮರ್ಶಕʼ ರಾಷ್ಟ್ರೀಯ ಪ್ರಶಸ್ತಿಯನ್ನು ೨೦೨೩ರ ಅಕ್ಟೋಬರ್‌ ೧೭ರಂದು ನವದೆಹಲಿಯಲ್ಲಿ ಸ್ವೀಕರಿಸಿದರು.

೬೯ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ನಡೆದಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ೨೦೨೩ನೇ ಸಾಲಿನ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಕನ್ನಡ ಪತ್ರಿಕೋದ್ಯಮ ರಂಗದಲ್ಲಿ ಸುಬ್ಬಣ್ಣ ಎಂದೇ ಆತ್ಮೀಯವಾಗಿ ಪರಿಚಿತರಾಗಿರುವ ಬಾನಾಸು ಮಹತ್ವದ ಸಿನಿಮಾ ಪತ್ರಕರ್ತ. ಕಾಸರಗೋಡು ಜಿಲ್ಲೆಯ ಬಾಡೂರು ಎಂಬ ಗ್ರಾಮದಲ್ಲಿರುವ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ಕರ್ಲ ಸತ್ಯನಾರಾಯಣ ಹೈಸ್ಕೂಲಿನಲ್ಲಿ ಪ್ರೌಢ ಶಿಕ್ಷಣವನ್ನು ಮುಗಿಸಿದವರು.

ನಂತರ ಕಾಸರಗೋಡಿನಲ್ಲಿ ಸರಕಾರಿ ಮಹಾ ವಿದ್ಯಾಲಯದಲ್ಲಿ ಕಾಲೇಜು ಶಿಕ್ಷಣ ಪಡೆದು ಕಲ್ಲಿಕೋಟೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕನ್ನಡ ಸ್ನಾತಕೋತ್ತರ (ಎಂಎ) ಪದವಿಯನ್ನು 1976ರಲ್ಲಿ ಮುಗಿಸಿದರು.
ಸಿನಿಮಾ ರಂಗದತ್ತ ಆಕರ್ಷಿತರಾದ ಸುಬ್ರಹ್ಮಣ್ಯ, ಸ್ಯಾಂಡಲ್ ವುಡ್ ವಿವರಗಳನ್ನು ಅನೇಕ ಸಿನಿಮಾ ಪತ್ರಿಕೆಗಳಿಗೆ ವರದಿ ಮಾಡುವ ಮೂಲಕ  ಪ್ರಾಮಾಣಿಕವಾಗಿ ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಅತ್ಯುತ್ತಮ ಚಲನಚಿತ್ರ ವಿಮರ್ಶಕ ರಾಷ್ಟ್ರೀಯ ಪ್ರಶಸ್ತಿಯು ಅವರ ಅಪ್ರತಿಮ ಕೊಡುಗೆಗಾಗಿ ಸಂದಿರುವ ರಾಷ್ಟ್ರೀಯ ಮಟ್ಟದ ಪುರಸ್ಕಾರವಾಗಿದೆ. ಅಭಿನಂದನೆಗಳು ಸುಬ್ಬಣ್ಣ.

ಸುಬ್ಬಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಂದರ್ಭದ ಚಿತ್ರ ಹಾಗೂ ವಿಡಿಯೋ ಇಲ್ಲಿದೆ:


ಬಾನಾಸು ಜೊತೆಗೇ ಅತ್ಯುತ್ತಮ ಕನ್ನಡ ಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದ ಇನ್ನೊಬ್ಬ ಕನ್ನಡಿಗ ಕಿರಣ್‌ ರಾಜ್.‌ ʼ೭೭೭ ಚಾರ್ಲಿʼ ಚಿತ್ರಕ್ಕಾಗಿ ಈ ಪ್ರಶಸ್ತಿಯನ್ನು ಪಡೆದ ಕಿರಣ್‌ ರಾಜ್‌ ಅವರು ಕೂಡಾ ಕಾಸರಗೋಡಿನವರೇ.

ಕಿರಣ್ ರಾಜ್ ಅವರು ಸಮೀಪದ ಮಲ್ಲಮೂಲೆಯ ದಿ.ಅಚ್ಚುತ ಮಣಿಯಾಣಿ ಯವರ ಸುಪುತ್ರನಾಗಿದ್ದು ಮಲ್ಲಮೂಲೆ ಹಾಗೂ ಅಗಲ್ಪಾಡಿ ಅನ್ನಪೂರ್ಣೇಶ್ವರಿ ಹೈಸ್ಕೂಲ್ ನಲ್ಲಿ ಶಿಕ್ಷಣ ಪಡೆದವರು. ನಂತರ ರಂಗಭೂಮಿಗೆ ಆಕರ್ಷಿತರಾಗಿ ಕಾಸರಗೋಡಿನ ರಂಗಭೂಮಿಯಲ್ಲಿ ಖ್ಯಾತ ರಂಗನಿರ್ದೇಶಕ ಕಾಸರಗೋಡು ಉಮೇಶ ಸಾಲಿಯಾನ ಅವರ ಜೊತೆ ರತ್ನಾಕರ ಮಲ್ಲಮೂಲೆ ಅವರು ಬರೆದ “ಮಳೆ ನಿಂತ ಮೇಲೆ” ನಾಟಕದಲ್ಲಿ ಅಭಿನಯಿಸಿ ರಂಗಭೂಮಿ ಪ್ರವೇಶಿಸಿದರು.

ಆನಂತರ ಬೆಂಗಳೂರಿನ ಆದರ್ಶ ಫಿಲಂ ಸಂಸ್ಥೆಯನ್ನು ಸೇರಿದರು.  ಇವರು “ಕಾವಳ” ಎಂಬ ಟೆಲಿ ಫಿಲಂ ಮಾಡಿ ಜನಪ್ರಿಯರಾದರು. ಆನಂತರ ರಿಷಭ್ ಶೆಟ್ಟಿ ಅವರ “ಕಿರಿಕ್ ಪಾರ್ಟಿ” ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿ ಅನುಭವ ಗಳಿಸಿಕೊಂಡರು. ಬಳಿಕ ‘777 ಚಾರ್ಲಿ’ ಸಿನಿಮಾ ಕಥೆ ಹಾಗೂ ನಿರ್ದೇಶಕನಾಗಿ ಮತ್ತು ಅದರಲ್ಲೇ ಮಿಂಚಿ ಇದೀಗ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದರು.

ರಂಗಭೂಮಿಯಿಂದ ಚಿತ್ರರಂಗತ್ತ ಹೊರಟು ಚಲನ ಚಿತ್ರ ತಯಾರಿಸಲು ಅವಕಾಶ ಸಿಕ್ಕಾಗ ಅವರು ಸ್ವತಃ ಬರೆದು ನಿರ್ದೇಶಿಸಿದ ಮೊತ್ತ ಮೊದಲ ಕಥೆಯೇ  ʼ೭೭೭ ಚಾರ್ಲಿʼ ಆಗಿತ್ತು ಎಂಬುದು ಇನ್ನೊಂದು ವಿಶೇಷ.

ರಕ್ಷಿತ್‌ ಶೆಟ್ಟಿ ಅವರು ಅಭಿನಯಿಸಿರುವ ಈ ಚಿತ್ರ ಇದಕ್ಕೂ ಮುನ್ನ ಇದೇ ವರ್ಷ ದೆಹಲಿಯಲ್ಲಿ ನಡೆದ ದಾದಾಸಾಹೇಬ್‌ ಫಾಲ್ಕೆ ಚಲನಚಿತ್ರೋತ್ಸಕ್ಕೆ ಆಯ್ಕೆಯಾಗಿತ್ತು..

Sunday, October 15, 2023

ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

 ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

ಬೆಂಗಳೂರು: ರೇಡಿಯೋ ಶಿವಮೊಗ್ಗದಲ್ಲಿ 2023 ಅಕ್ಟೋಬರ್‌ 15ರ ಭಾನುವಾರ ಬೆಳಗ್ಗೆ 8  ಗಂಟೆಗೆ  ʼಆತ್ಮ ನಿರ್ಭರ ಗ್ರಾಮ ಪಂಚಾಯ್ತಿʼ ವಿಶಿಷ್ಟ ಕಾರ್ಯಕ್ರಮ ಮೂಡಿಬಂತು.

ಅಕ್ಟೋಬರ್‌ 15ರ ಭಾನುವಾರದಿಂದ ಪ್ರತಿ ಭಾನುವಾರವೂ ಬೆಳಗ್ಗೆ 8 ಗಂಟೆಗೆ ರೇಡಿಯೋ ಶಿವಮೊಗ್ಗ 90.8 ಎಫ್‌ ಎಂ ನಲ್ಲಿ ಡಿಜಿಟಲ್‌ ತಂತ್ರಜ್ಞಾನ ಪರಿಣತ ಡಾ. ಶಂಕರ ಕೆ. ಪ್ರಸಾದ್‌ ಅವರು ರಚಿಸಿರುವ 21ನೆಯ ಶತಮಾನದ ಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕೃತಿಯನ್ನು ಆಧರಿಸಿದ ಬಾನುಲಿ ಕಾರ್ಯಕ್ರಮ ಬಿತ್ತರಗೊಳ್ಳಲಿದೆ ಎಂದು ರೇಡಿಯೋ ಶಿವಮೊಗ್ಗ ಮತ್ತು ಬೆಂಗಳೂರಿನ ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇಂದಿನ ಬಾನುಲಿಯಲ್ಲಿ ಬಂದ ವಿಚಾರಗಳೇನು?

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ನೋಡಿ:


ಇದನ್ನೂ ಓದಿರಿ:

ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

Saturday, October 14, 2023

ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

 ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ

ಬೆಂಗಳೂರು: ರೇಡಿಯೋ ಶಿವಮೊಗ್ಗದಲ್ಲಿ 2023 ಅಕ್ಟೋಬರ್‌ 15ರ ಭಾನುವಾರದಿಂದ ಪ್ರತಿ ಭಾನುವಾರ ʼಆತ್ಮ ನಿರ್ಭರ ಗ್ರಾಮ ಪಂಚಾಯ್ತಿʼ ವಿಶಿಷ್ಟ ಕಾರ್ಯಕ್ರಮ ಕೇಳಿಬರಲಿದೆ.

ಅಕ್ಟೋಬರ್‌ 15ರ ಭಾನುವಾರದಿಂದ ಪ್ರತಿ ಭಾನುವಾರವೂ ಬೆಳಗ್ಗೆ 8 ಗಂಟೆಗೆ ರೇಡಿಯೋ ಶಿವಮೊಗ್ಗ 90.8 ಎಫ್‌ ಎಂ ನಲ್ಲಿ ಡಿಜಿಟಲ್‌ ತಂತ್ರಜ್ಞಾನ ಪರಿಣತ ಡಾ. ಶಂಕರ ಕೆ. ಪ್ರಸಾದ್‌ ಅವರು ರಚಿಸಿರುವ 21ನೆಯ ಶತಮಾನದ ಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕೃತಿಯನ್ನು ಆಧರಿಸಿದ ಬಾನುಲಿ ಕಾರ್ಯಕ್ರಮ ಬಿತ್ತರಗೊಳ್ಳಲಿದೆ ಎಂದು ರೇಡಿಯೋ ಶಿವಮೊಗ್ಗ ಮತ್ತು ಬೆಂಗಳೂರಿನ ಸಂಪೂರ್ಣ ಸ್ವರಾಜ್‌ ಫೌಂಡೇಷನ್ನಿನ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರು, ಗ್ರಾಮ ಪಂಚಾಯಿತಿ ಅಧಿಕಾರಿ ಸಿಬ್ಬಂದಿವರ್ಗ ಡಿಜಿಟಲ್ ಯುಗದಲ್ಲಿ ವಿಕೇಂದ್ರೀಕರಣದ ಆಶಯಗಳನ್ನು ಅಳವಡಿಸಿಕೊಳ್ಳುವಲ್ಲಿ ತಂತ್ರಜ್ಞಾನವನ್ನು ಹೇಗೆ ಪರಿಣಾಮಕಾರಿಯಾಗಿ ಸಂಪರ್ಕ ಸೇತುವೆಯಾಗಿ ಅಳವಡಿಸಿಕೊಳ್ಳಬಹುದು? ಮೊಬೈಲಿನಿಂದಲೇ ಹೇಗೆ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ತಮ್ಮ ಕೆಲಸಗಳನ್ನು ಮಾಡಬಹುದು ಎಂಬ ಬಗ್ಗೆ ಈ ಕಾರ್ಯಕ್ರಮದಲ್ಲಿ ಮಾಹಿತಿ ಸಿಗಲಿದೆ.

ಈ ಸರಣಿಯು ಗ್ರಾಮಪಂಚಾಯ್ತಿ ಸದಸ್ಯರಿಗೆ ಮಾತ್ರವಲ್ಲ, ಜನಸಾಮಾನ್ಯರಿಗೆ, ಯುವ ಸಮೂಹಕ್ಕೆ ಡಿಜಿಟಲ್ ಯುಗದ ಅನಂತ ಸಾಧ್ಯತೆಗಳನ್ನು ತೆರೆದಿಡಲಿದೆ.

ಈ ವಿಶಿಷ್ಟ ಸರಣಿ ಕಾರ್ಯಕ್ರಮಕ್ಕೆ ಡಾ. ಶಂಕರ ಪ್ರಸಾದ್‌ ಅವರು ಮಾರ್ಗದರ್ಶನ ಮಾಡಲಿದ್ದಾರೆ ಎಂದೂ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮವನ್ನು ರೇಡಿಯೋ ಶಿವಮೊಗ್ಗದಲ್ಲಿ ಈ ಕೆಳಗಿನ ಲಿಂಕ್‌ ಬಳಸಿ ಕೇಳಬಹುದು :

ಆಂಡ್ರಾಯಿಡ್‌ ಫೋನುಗಳಲ್ಲಿ:

https://play.google.com/store/apps/details?id=com.atclabs.radioshivmogga

 ಆಪಲ್‌ ಫೋನುಗಳಲ್ಲಿ:

https://apps.apple.com/us/app/radio-shivamogga-fm-90-8-mhz/id1610322211?platform=iphone

ಆಲಿಸಲು  ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ:

Advertisement