My Blog List

Thursday, August 28, 2008

ಇಂದಿನ ಇತಿಹಾಸ History Today ಆಗಸ್ಟ್ 28

ಇಂದಿನ ಇತಿಹಾಸ

ಆಗಸ್ಟ್ 28

ಒರಿಸ್ಸಾ ರಾಜ್ಯದ ಅಂಗುಲ್ ಜಿಲ್ಲೆಯು ತಲ್ಚೇರಿನಲ್ಲಿ ಸ್ಥಾಪಿಸಲಾಗಿರುವ ದೇಶದ ಅತಿ ದೊಡ್ಡ ಉಷ್ಣವಿದ್ಯುತ್ ಸ್ಥಾವರವನ್ನು ಪ್ರಧಾನಿ ಮನಮೋಹನ್ ಸಿಂಗ್ ದೇಶಕ್ಕೆ ಸಮರ್ಪಿಸಿದರು. ಮಳೆಯ ಕಾರಣದಿಂದ ಸ್ಥಾವರ ಸ್ಥಳಕ್ಕೆ ತೆರಳಲು ಅಸಾಧ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರನ್ಸ್ ಮೂಲಕ ಈ ಕಾರ್ಯವನ್ನು ಅವರು ರಾಜಧಾನಿ ಭುವನೇಶ್ವರದಿಂದಲೇ ನೆರವೇರಿಸಿದರು.

2007: ಕ್ರೋಯೇಷಿಯಾದಲ್ಲಿ ನಡೆದ ವಿಶ್ವಕಪ್ ಶೂಟಿಂಗ್ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ಚಿನ್ನದ ಪದಕ ಗೆದ್ದ ಮಾನವ್ ಜಿತ್ ಸಿಂಗ್ ಸಂಧು ಅವರು ಪ್ರತಿಷ್ಠಿತ `ರಾಜೀವ್ ಗಾಂಧಿ ಖೇಲ್ ರತ್ನ' ಪ್ರಶಸ್ತಿಗೆ ಆಯ್ಕೆಯಾದರು. ಬೆಂಗಳೂರಿನ `ಟಾಟಾ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿ'ಯಲ್ಲಿ ತರಬೇತಿ ಪಡೆಯುತ್ತಿರುವ ಪಿಎಸ್ ಪಿಬಿ ಆಟಗಾರ ಚೇತನ್ ಆನಂದ್ ಅವರು ಬ್ಯಾಡ್ಮಿಂಟನ್ ರಂಗದಲ್ಲಿ ಈ ವರ್ಷ ತೋರಿದ ಸಾಧನೆಗಾಗಿ `ಅರ್ಜುನ' ಪ್ರಶಸ್ತಿಗೆ ಆಯ್ಕೆಯಾದರು.

2007: ಮಾತೆ ಮಹಾದೇವಿ ಅವರ `ಬಸವ ವಚನ ದೀಪ್ತಿ' ವಚನ ಸಂಗ್ರಹದ ಮೇಲೆ ರಾಜ್ಯ ಸರ್ಕಾರ ಹೇರಿದ ನಿಷೇಧವನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್ ವಚನಗಳ ಅಂಕಿತನಾಮ `ಕೂಡಲಸಂಗಮದೇವ' ವನ್ನು `ಲಿಂಗದೇವ' ಎಂದು ಬದಲಾಯಿಸುವ ಅಧಿಕಾರ ಲೇಖಕರಿಗಿಲ್ಲ ಎಂದು ಹೇಳಿತು. `ಬಸವಣ್ಣನವರು ಕನಸಿನಲ್ಲಿ ಬಂದು ವಚನಗಳ ಅಂಕಿತ ನಾಮವನ್ನು `ಲಿಂಗದೇವ' ಎಂದು ಬದಲಾಯಿಸುವಂತೆ ತಿಳಿಸಿದ್ದರು ಎಂಬ ಮಾತೆ ಮಹಾದೇವಿ ಅವರ ಹೇಳಿಕೆ ನಂಬಿಕೆಗೆ ಯೋಗ್ಯವಲ್ಲ' ಎಂದು ನ್ಯಾಯಮೂರ್ತಿಗಳಾದ ಸಿ.ಕೆ.ಠಕ್ಕರ್ ಮತ್ತು ಮಾರ್ಕಾಂಡೇಯ ಖಟ್ಜು ಅವರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿತು. ಮಾತೆಮಹಾದೇವಿ ಸಂಪಾದಿಸಿ 1995ರಲ್ಲಿ ಪ್ರಕಟಿಸಿದ್ದ ಪರಿಷ್ಕೃತ ವಚನಗಳ ಸಂಗ್ರಹವನ್ನು ರಾಜ್ಯ ಸರ್ಕಾರ ನಿಷೇಧಿಸಿತ್ತು. ರಾಜ್ಯ ಸರ್ಕಾರದ ನಿರ್ಧಾರವನ್ನು 1998ರಲ್ಲಿ ಎತ್ತಿಹಿಡಿದಿದ್ದ ಹೈಕೋರ್ಟ್ ` ಈ ರೀತಿ ಅಂಕಿತನಾಮದ ಬದಲಾವಣೆ ಸಮರ್ಥನಿಯ ಅಲ್ಲ' ಎಂದು ಹೇಳಿತ್ತು.

2007: ಬೆಂಗಳೂರು ನಗರದ ಪ್ರತಿಷ್ಠಿತ ಬಡಾವಣೆಯಾದ ಕೋರಮಂಗಲದ ಫೋರಂ ಸಮೀಪದಲ್ಲಿ ಬಿಗ್ ಬಜಾರ್ ಮಳಿಗೆ ಇರುವ ಕಟ್ಟಡ ಸೇರಿದಂತೆ ಹಲವು ಮಾಲ್ಗಳ ನಿರ್ಮಾಣಕ್ಕೆ 8.11 ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿರುವುದನ್ನು ಶಾಸಕ ಎ.ಟಿ. ರಾಮಸ್ವಾಮಿ ನೇತೃತ್ವದ ಜಂಟಿ ಸದನ ಸಮಿತಿ ಪತ್ತೆ ಹಚ್ಚಿತು. `ಇಲ್ಲಿನ ಪ್ರತಿಷ್ಠಿತ `ಮಾಲ್' ಗಳು ಸೇರಿ ಸುಮಾರು 325 ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಜಮೀನು ಒತ್ತುವರಿಯಾಗಿದೆ' ಎಂದು ರಾಮಸ್ವಾಮಿ ತಿಳಿಸಿದರು.

2007: ಸೇನಾ ಮುಖ್ಯಸ್ಥರಾಗಿದ್ದುಕೊಂಡೇ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಲು ಉದ್ದೇಶಿಸಿದ ಪಾಕಿಸ್ಥಾನ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ನಿಲುವನ್ನು ವಿರೋಧಿಸಿ ಮಾಹಿತಿ ತಂತ್ರಜ್ಞಾನ ಸಚಿವ ಇಷಾಕ್ ಖಾಕ್ವಾನಿ ರಾಜೀನಾಮೆ ನೀಡಿದರು.

2007: ದಕ್ಷಿಣ ಆಫ್ರಿಕಾದ ಮಾಜಿ ಟೆಸ್ಟ್ ಕ್ರಿಕೆಟಿಗ ರಾಯ್ ಮೆಕ್ ಲೀನ್ (77) ಜೋಹಾನ್ಸ್ ಬರ್ಗಿನಲ್ಲಿ ನಿಧನರಾದರು. ನಲವತ್ತು ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯಗಳನ್ನು ಆಡಿದ್ದ ಮೆಕ್ ಲೀನ್ 30ಕ್ಕೂ ಹೆಚ್ಚು ಸರಾಸರಿಯಲ್ಲಿ ರನ್ ಗಿಟ್ಟಿಸಿದ್ದರು. 1955ರರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇನಿಂಗ್ಸ್ ಒಂದರಲ್ಲಿ ಅಜೇಯ 76 ರನ್ ಗಳಿಸುವ ಮೂಲಕ ತಮ್ಮ ತಂಡವನ್ನು ಅವರು ಗೆಲ್ಲಿಸಿಕೊಟ್ಟಿದ್ದರು. 1960ರಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಂಡ ತಂಡದ ಪರವಾಗಿ ಉತ್ತಮ ಪ್ರದರ್ಶನನ ನೀಡಿದ ಮೆಕ್ ಲೀನ್ 1961ರಲ್ಲಿ ವಿಸ್ಡನ್ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿಗೂ ಭಾಜನರಾಗಿದ್ದರು. ರಗ್ಬಿ ಆಟಗಾರರಾಗಿಯೂ ಹೆಸರು ಮಾಡಿದ್ದರು.

2006: ಒರಿಸ್ಸಾ ರಾಜ್ಯದ ಅಂಗುಲ್ ಜಿಲ್ಲೆಯು ತಲ್ಚೇರಿನಲ್ಲಿ ಸ್ಥಾಪಿಸಲಾಗಿರುವ ದೇಶದ ಅತಿ ದೊಡ್ಡ ಉಷ್ಣವಿದ್ಯುತ್ ಸ್ಥಾವರವನ್ನು ಪ್ರಧಾನಿ ಮನಮೋಹನ್ ಸಿಂಗ್ ದೇಶಕ್ಕೆ ಸಮರ್ಪಿಸಿದರು. ಮಳೆಯ ಕಾರಣದಿಂದ ಸ್ಥಾವರ ಸ್ಥಳಕ್ಕೆ ತೆರಳಲು ಅಸಾಧ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರನ್ಸ್ ಮೂಲಕ ಈ ಕಾರ್ಯವನ್ನು ಅವರು ರಾಜಧಾನಿ ಭುವನೇಶ್ವರದಿಂದಲೇ ನೆರವೇರಿಸಿದರು.

2006: ಹತ್ತನೇ ದಕ್ಷಿಣ ಏಷ್ಯಾ ಫೆಡರೇಷನ್ (ಎಸ್ ಎಎಫ್) ಕ್ರೀಡಾಕೂಟ ಮುಕ್ತಾಯ. 118 ಚಿನ್ನ, 69 ಬೆಳ್ಳಿ, 47 ಕಂಚಿನ ಪದಕ ಸೇರಿ ಒಟ್ಟು 234 ಪದಕಗಳನ್ನು ತಮ್ಮ ಉಡಿಗೆ ಹಾಕಿಕೊಳ್ಳುವ ಮೂಲಕ ಭಾರತ ಪದಕ ಪಟಿಯಲ್ಲಿ ಅಗ್ರಸ್ಥಾನ ಗಳಿಸಿತು. ಪಾಕಿಸ್ಥಾನವು 43 ಚಿನ್ನ, 44 ಬೆಳ್ಳಿ, 71 ಕಂಚು ಸೇರಿ 158 ಪದಕ ಗೆದ್ದರೆ, ಶ್ರೀಲಂಕೆಯು 37 ಚಿನ್ನ, 63 ಬೆಳ್ಳಿ, 78 ಕಂಚು ಸೇರಿ 178 ಪದಕ ಗೆದ್ದುಕೊಂಡಿತು.

2001: ಇಂಟೆಲ್ ಕಾರ್ಪೊರೇಷನ್ ತನ್ನ ಅತಿ ವೇಗದ `ಪೆಂಟಿಯಮ್ 4' ಮೈಕ್ರೊಪ್ರೊಸೆಸರನ್ನು ಬಿಡುಗಡೆ ಮಾಡಿತು. ಹೊಸ ಪೆಂಟಿಯಮ್ 4 ಸೆಕೆಂಡಿಗೆ ಎರಡು ಶತಕೋಟಿ ಸೈಕಲಿನಷ್ಟು ಅಂದರೆ ಎರಡು ಗಿಗ್ಹರ್ಟ್ ಸಾಮರ್ಥ್ಯ ಹೊಂದಿದೆ.

1996: ವಿಚ್ಛೇದನಾ ಡಿಕ್ರಿ ಜಾರಿಯೊಂದಿಗೆ ಬ್ರಿಟನ್ನಿನ ರಾಜಕುಮಾರ ಚಾರ್ಲ್ಸ್ ಮತ್ತು ರಾಜಕುಮಾರಿ ಡಯಾನಾ ಅವರ 15 ವರ್ಷಗಳ ದಾಂಪತ್ಯ ಕೊನೆಗೊಂಡಿತು.

1971: ಅಮೆರಿಕದ ಈಜುಗಾರ್ತಿ ಜಾನೆಟ್ ಇವಾನ್ಸ್ ಜನ್ಮದಿನ. ನಾಲ್ಕು ಒಲಿಂಪಿಕ್ ಸ್ವರ್ಣ ಪದಕಗಳನ್ನು ಗೆದ್ದ ಈಕೆ ಈಜುಗಾರಿಕೆಯಲ್ಲಿನ ತನ್ನ ವೇಗದಿಂದಾಗಿ ಖ್ಯಾತಿ ಪಡೆದವರು.

1963: ವಾಷಿಂಗ್ಟನ್ ಡಿ.ಸಿ.ಯಲ್ಲಿ ನಡೆದ ಶಾಂತಿಯುತ ನಾಗರಿಕ ಹಕ್ಕುಗಳ ರ್ಯಾಲಿಯಲ್ಲಿ 2 ಲಕ್ಷ ಮಂದಿ ಪಾಲ್ಗೊಂಡರು. ಲಿಂಕನ್ ಸ್ಮಾರಕದ ಎದುರು ನಡೆದ ರ್ಯಾಲಿಯನ್ನು ಉದ್ದೇಶಿಸಿ ಡಾ. ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್ ಭಾಷಣ ಮಾಡಿದರು. ಅವರ ಭಾಷಣ `ನನಗೆ ಕನಸಿದೆ' ಭಾಷಣ ಎಂದೇ ಖ್ಯಾತಿ ಪಡೆಯಿತು.

1801: ಫ್ರೆಂಚ್ ಆರ್ಥಿಕ ತಜ್ಞ ಹಾಗೂ ಗಣಿತ ತಜ್ಞ ಆಂಟೋನಿ-ಆಗಸ್ಟಿನ್ ಕೊರ್ನೊ (1801-1877) ಜನ್ಮದಿನ. ಗಣಿತ-ಅರ್ಥಶಾಸ್ತ್ರವನ್ನು ರೂಪಿಸಿದ ಮೊದಲಿಗರಲ್ಲಿ ಈತನೂ ಒಬ್ಬ.

No comments:

Advertisement