My Blog List

Tuesday, September 29, 2020

೫೬ ವಿಧಾನಸಭೆ ಮತ್ತು ೧ ಲೋಕಸಭಾ ಸ್ಥಾನಗಳಿಗೆ ಉಪಚುನಾವಣೆ

 ೫೬ ವಿಧಾನಸಭೆ ಮತ್ತು ಲೋಕಸಭಾ ಸ್ಥಾನಗಳಿಗೆ ಉಪಚುನಾವಣೆ

ನವದೆಹಲಿ: ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ೧೦ ರಾಜ್ಯಗಳಲ್ಲಿನ ೫೪ ವಿಧಾನಸಭಾ ಕ್ಷೇತ್ರಗಳು ಮತ್ತು ಒಂದು ಲೋಕಸಭಾ ಕ್ಷೇತ್ರದಲ್ಲಿ ಕ್ರಮವಾಗಿ ನವೆಂಬರ್ ಮತ್ತು ರಂದು ಉಪ ಚುನಾವಣೆಗಳು ನಡೆಯಲಿವೆ ಎಂದು ಚುನಾವಣಾ ಆಯೋಗ 2020 ಸೆಪ್ಟೆಂಬರ್ 29ರ ಮಂಗಳವಾರ ಪ್ರಕಟಿಸಿತು.

ನವೆಂಬರ್ ರಂದು ಬಿಹಾರದ ವಾಲ್ಮೀಕಿ ನಗರದ ಲೋಕಸಭಾ ಕ್ಷೇತ್ರ ಮತ್ತು ಮಣಿಪುರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳು ನಡೆಯಲಿವೆ. ಅದೇ ದಿನ ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲೂ ಉಪಚುನಾವಣೆ ನಡೆಯಲಿದೆ.

ಮತಗಳ ಎಣಿಕೆ ನವೆಂಬರ್ ೧೨ರಂದು ನಡೆಯಲಿದ್ದು, ಚುನಾವಣೆಯ ಫಲಿತಾಂಶಗಳನ್ನು ನವೆಂಬರ್ ೧೨ ರೊಳಗೆ ಪ್ರಕಟಿಸಲಾಗುವುದು.

ಅಕ್ಟೋಬರ್ ೨೮ ರಿಂದ ನವೆಂಬರ್ ರವರೆಗೆ ನಡೆಯಲಿರುವ ಮೂರು ಹಂತದ ಬಿಹಾರ ವಿಧಾನಸಭಾ ಚುನಾವಣೆಯ ವೇಳೆ ಪಟ್ಟಿ ಪ್ರಕಟಿಸಿದ ಬಳಿಕ ಚುನಾವಣಾ ಆಯೋಗವು ವಿವಿಧ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭಾ ಉಪಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಆದಾಗ್ಯೂ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಲ್ಲಿನ ಚುನಾವಣೆ ಮುಂದೂಡಲ್ಪಟ್ಟಿದೆ,   ರಾಜ್ಯಗಳಲ್ಲಿ ಸದನದ ಅವಧಿ ಮುಂದಿನ ವರ್ಷ ಮೇ ಅಥವಾ ಜೂನ್ನಲ್ಲಿ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿನ ಉಪಚುನಾವಣೆ ಮುಂದೂಡಿಕೆಯಾಗಿದೆ.

ಕೇರಳದಲ್ಲಿ ಕೇವಲ ಎರಡು ಖಾಲಿ ಸ್ಥಾನಗಳು ಖಾಲಿ ಇರುವುದರಿಂದ ಮತ್ತು ರಾಜ್ಯ ವಿಧಾನಸಭೆಗೆ ೨೦೨೧ರ ಜೂನ್ ತಿಂಗಳಿಗೆ ಮುನ್ನ ಚುನಾವಣೆ ನಡೆಯಲಿರುವುದಿರಿಂದ ಇಲ್ಲ್ಲಿ ಈಗ ಉಪಚುನಾವಣೆ ನಡೆಸುವುದರಲ್ಲಿ  ಅರ್ಥವಿಲ್ಲ ಎಂದು ಸುದ್ದಿ ಮೂಲಗಳು ಹಿಂದೆ ತಿಳಿಸಿದ್ದವು.

" ಸಾಂಕ್ರಾಮಿಕದ ಮಧ್ಯೆ ಮತ್ತು ಪ್ರವಾಹದಿಂದ ಉಂಟಾದ ವಿನಾದ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿಯಲ್ಲಿ ಉಪಚುನಾವಣೆ ನಡೆಸುವುದು ಅನಗತ್ಯ ಹಾಗೂ ದುಬಾರಿಯಾಗಿದೆ" ಎಂದು ಸುದ್ದಿ ಮೂಲಗಳು ಹೇಳಿದ್ದವು. ಹಿನ್ನೆಲೆಯಲಿ ಮತದಾನವನ್ನು ಮುಂದೂಡಲು ಆಗಸ್ಟ್ ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿತ್ತು.

ಚುನಾವಣಾ ಆಯೋಗವು ಈಗ ಛತ್ತೀಸ್ ಗಢದ , ಗುಜರಾತಿನ , ಹರಿಯಾಣದ , ಜಾರ್ಖಂಡಿನ , ಕರ್ನಾಟಕದ , ಮಣಿಪುರದ , ನಾಗಾಲ್ಯಾಂಡಿನ , ಒಡಿಶಾದ , ಮಧ್ಯಪ್ರದೇಶದ ೨೮, ತೆಲಂಗಾಣದ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಿಸಿದೆ.

ಜ್ಯೋತಿರಾಡಿತ್ಯ ಸಿಂಧಿಯಾ ಅವರು ತಮ್ಮ ನಿಷ್ಠಾವಂತರೊಂದಿಗೆ ಬಿಜೆಪಿಗೆ ಸೇರಲು ಕಾಂಗ್ರೆಸ್ ತೊರೆದ ನಂತರ ಮಾರ್ಚ್ ತಿಂಗಳಲ್ಲಿ ಮಧ್ಯಪ್ರದೇಶದ ೨೮ ಕ್ಷೇತ್ರಗಳು ತೆರವಾಗಿದ್ದವು. ನಿಷ್ಠೆ ಬದಲಾವಣೆಯು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣವಾಯಿತು ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಿವರಾಜ್ ಚೌಹಾಣ್ ಮರಳಿ ರಾಜ್ಯದ ಮುಖ್ಯಮಂತ್ರಿಯಾದರು.

೨೩೦ ಸದಸ್ಯರ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ಸರ್ಕಾರದ ಉಳಿವಿಗೆ ಉಪಚುನಾವಣೆ ನಿರ್ಣಾಯಕವಾಗಿದೆ. ೨೮ ಸ್ಥಾನಗಳಲ್ಲಿ ಕನಿಷ್ಠ ಒಂಬತ್ತು ಸ್ಥಾನಗಳನ್ನು ಬಿಜೆಪಿ ಗೆಲ್ಲಬೇಕಾಗಿದೆ. ಪಕ್ಷವು ಪ್ರಸ್ತುತ ೧೦೭ ಸ್ಥಾನಗಳನ್ನು ಹೊಂದಿದೆ. ಮಾರ್ಚ್ ತಿಂಗಳಲ್ಲಿ ತನ್ನ ೨೧ ಶಾಸಕರು ರಾಜೀನಾಮೆ ನೀಡಿದಾಗ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ಪ್ರಸ್ತುತ ೨೦೨ ಸದಸ್ಯಬಲ ಹೊಂದಿರುವ ಮಧ್ಯಪ್ರದೇಶ ವಿಧಾನಸಭೆಯಲ್ಲಿ ೮೮ ಸದಸ್ಯರನ್ನು ಹೊಂದಿದೆ.

ಫೆಬ್ರ್ರುವರಿಯಲ್ಲಿ ಜೆಡಿಯು ಲೋಕಸಭಾ ಸದಸ್ಯ ಹಾಗೂ ಸಚಿವ ಬೈದ್ಯನಾಥ್ ಪ್ರಸಾದ್ ಮಹತೋ ಅವರ ನಿಧನದ ನಂತರ ಖಾಲಿಯಾಗಿದ್ದ ವಾಲ್ಮೀಕಿ ನಗರ ಸಂಸದೀಯ ಕ್ಷೇತ್ರಕ್ಕೂ ಚುನಾವಣಾ ಆಯೋಗವು ಉಪಚುನಾವಣೆ ನಡೆಸಲಿದೆ.

ಶಿರಾ, ಆರ್.ಆರ್. ನಗರ ವಿಧಾನಸಭೆ ಕ್ಷೇತ್ರ

ನವದೆಹಲಿ: ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗವು  2020 ಸೆಪ್ಟೆಂಬರ್ 29ರ ಮಂಗಳವಾರ ಉಪಚುನಾವಣೆ ದಿನಾಂಕವನ್ನು ಘೋಷಿಸಿತು.

ಶಾಸಕ ಸತ್ಯನಾರಾಯಣ ಅವರ ನಿಧನದಿಂದಾಗಿ ತೆರವಾಗಿದ್ದ ಶಿರಾ ಕ್ಷೇತ್ರ ಹಾಗೂ ಶಾಸಕ ಮುನಿರತ್ನ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆಯು ನವೆಂಬರ್ ೩ರಂದು ನಡೆಯುವುದು ಎಂದು ಕೇಂದ್ರ ಚುನಾವಣೆ ಆಯೋಗ ಘೋಷಿಸಿತು.

ನವೆಂಬರ್ ೩ಕ್ಕೆ ಉಭಯ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದ್ದು, ನವೆಂಬರ್ ೧೦ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಅಕ್ಟೋಬರ್ ರಂದು ಅಧಿಸೂಚನೆ ಹೊರಡಿಸಲಿದ್ದು, ಅಕ್ಟೋಬರ್ ೧೬ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಅಕ್ಟೋಬರ್ ೧೭ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ.

No comments:

Advertisement