My Blog List

Tuesday, October 27, 2020

ಭ್ರಷ್ಟಾಚಾರದಿಂದ ಅಭಿವೃದ್ಧಿಗೆ ಧಕ್ಕೆ: ಪ್ರಧಾನಿ ಮೋದಿ

 ಭ್ರಷ್ಟಾಚಾರದಿಂದ ಅಭಿವೃದ್ಧಿಗೆ ಧಕ್ಕೆ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರವನ್ನು ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತ ಪ್ರಕ್ರಿಯೆಗಳ ದೊಡ್ಡ ಶತ್ರು ಎಂದು 2020 ಅಕ್ಟೋಬರ್ 27 ಮಂಗಳವಾರ ಹೇಳಿದರು.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜಾಗರೂಕತೆ ಮತ್ತು ಭ್ರಷ್ಟಾಚಾರ ವಿರೋಧಿ ಕುರಿತು ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು.

"ನಮ್ಮ ಆಡಳಿತಾತ್ಮಕ ಪ್ರಕ್ರಿಯೆಗಳು ಪಾರದರ್ಶಕವಾಗಿರುವುದು, ಜವಾಬ್ದಾರಿಯುತವಾಗಿರುವುದು ಮತ್ತು ಜನರಿಗೆ ಉತ್ತರದಾಯಿ ಆಗಿರುವುದು ಅಭಿವೃದ್ಧಿಗೆ ಕಡ್ಡಾಯವಾಗಿದೆ. ಎಲ್ಲಾ ಪ್ರಕ್ರಿಯೆಗಳಲ್ಲಿ ಭ್ರಷ್ಟಾಚಾರವೇ ದೊಡ್ಡ ಶತ್ರು. ಭ್ರಷ್ಟಾಚಾರವು ಅಭಿವೃದ್ಧಿಗೆ ಧಕ್ಕೆ ಉಂಟು ಮಾಡುತ್ತದೆ ಮತ್ತು ಸಾಮಾಜಿಕ ಸಮತೋಲನವನ್ನು ಅಡ್ಡಿಪಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲು ದೇಶವು ಸಿದ್ಧತೆ ನಡೆಸುತ್ತಿರುವ ಹೊತ್ತಿನಲ್ಲಿ ಮಾತನಾಡಿದ ಪ್ರಧಾನಿ, ಪಟೇಲ್ ಅವರನ್ನು ಭಾರತದ ಆಡಳಿತದ ವಾಸ್ತುಶಿಲ್ಪಿ ಎಂದು ಬಣ್ಣಿಸಿದರು.

No comments:

Advertisement