My Blog List

Sunday, July 24, 2022

ಇಂದಿನ ಇತಿಹಾಸ History Today ಜುಲೈ 24

ಇಂದಿನ ಇತಿಹಾಸ History Today ಜುಲೈ 24

2022: ಯೂಜೀನ್‌ಅಮೆರಿಕಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಭಾರತದ ನೀರಜ್‌ ಚೋಪ್ರಾ ಅವರು  ಅಮೆರಿಕದ ಯೂಜೀನ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ ಕ್ರೀಡಾಕೂಟದಲ್ಲಿ 2022 ಜುಲೈ 24ರ ಭಾನುವಾರ  ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ 19 ವರ್ಷಗಳ ಬಳಿಕ ಭಾರತಕ್ಕೆ ಪದಕವನ್ನು ಒದಗಿಸಿ ಇತಿಹಾಸ ನಿರ್ಮಿಸಿದರು. ನೀರಜ್‌ತಮ್ಮ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್‌ ದೂರ ಎಸೆಯುವ ಮೂಲಕ ಈ ಸಾಧನೆ ಮಾಡಿದರು. ಅವರು ಅರ್ಹತಾ ಸುತ್ತಿನಲ್ಲಿಯೂ ಎರಡನೇ ಸ್ಥಾನ ಪಡೆದು ಫೈನಲ್‌ ಪ್ರವೇಶಿಸಿದ್ದರು. ಇಡೀ ದೇಶದ ಚಿತ್ತಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಚೋಪ್ರಾ ಅವರ ಮೇಲಿತ್ತು. ಸ್ಪರ್ಧೆಯಲ್ಲಿ ಗ್ರೆನಾಡದ ಆ್ಯಂಡರ್ಸನ್‌ ಪೀಟರ್ಸ್‌ ಅವರು ಚೋಪ್ರಾಗಿಂತ ಉತ್ತಮ ಸಾಧನೆ ತೋರಿದರು. ಪೀಟರ್ಸ್‌ 90.54 ಮೀಟರ್‌ ದೂರ ಎಸೆದು ಚಿನ್ನದ ಪದಕ ಬಾಚಿಕೊಂಡರು. ಚೆಕ್‌ ಗಣರಾಜ್ಯದ ಜಾಕೂಬ್‌ ವಾಡ್ಲೆಚ್‌ ಅವರು 88.09 ದೂರ ಎಸೆಯುವುದರೊಂದಿಗೆ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗೆದ್ದರು. ನೀರಜ್‌ ಚೋಪ್ರಾ ಅವರು ಬೆಳ್ಳಿ ಸಾಧನೆ ಮಾಡುವ ಮೂಲಕ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ 19 ವರ್ಷಗಳ ಬಳಿಕ ಭಾರತಕ್ಕೆ ಪದಕ ಗೆದ್ದುಕೊಟ್ಟರು. 2003ರಲ್ಲಿ ಮಹಿಳೆಯರ ಲಾಂಗ್ ಜಂಪ್‌ ಸ್ಪರ್ಧೆಯಲ್ಲಿ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು. ಅದಾದ ಬಳಿಕ ಭಾರತಕ್ಕೆ ಪದಕ ಕೈಗೂಡಿರಲಿಲ್ಲ. ನೀರಜ್‌ ಚೋಪ್ರಾ ಭಾರತದ ಅತ್ಯಂತ ವಿಶಿಷ್ಟ ಕ್ರೀಡಾಪಟುಗಳಲ್ಲಿ ಒಬ್ಬರು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಚೋಪ್ರಾ ಅವರನ್ನು ಅಭಿನಂದಿಸಿದರು.

2020: ನವದೆಹಲಿಉಪ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಂಡಿರುವ ಸಚಿನ್ ಪೈಲಟ್ ಮತ್ತು ೧೮ ಮಂದಿಯ ಅವರ ಬಂಡಾಯ ಶಾಸಕರ ಗುಂಪಿನ ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜಸ್ಥಾನ ಹೈಕೋರ್ಟ್ 2020 ಜುಲೈ 24ರ ಶುಕ್ರವಾರ ಆಜ್ಞಾಪಿಸಿದ್ದು ತನ್ನ ನಿರ್ಧಾರವನ್ನು ಸೋಮವಾರಕ್ಕೆ ಮುಂದೂಡಿತುಇದರೊಂದಿಗೆ ಪೈಲಟ್ ಮತ್ತು ಬೆಂಬಲಿಗರಿಗೆ ಇನ್ನೊಂದು ನಿರಾಳತೆ ಲಭ್ಯವಾಯಿತುಸೋಮವಾರ ಸುಪ್ರೀಂಕೋರ್ಟ್ ಕೂಡಾ ತನ್ನ ಮುಂದೆ ವಿಧಾನಸಭಾಧ್ಯಕ್ಷ ಸಿಪಿ ಜೋಶಿ ಅವರು ಸಲ್ಲಿಸಿರುವ ವಿಶೇಷ ಅರ್ಜಿಯ ವಿಚಾರಣೆ ನಡೆಸಲಿದೆ.  ಅನರ್ಹತೆ ವಿಷಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಭಾರತ ಸರ್ಕಾರವನ್ನು ಕಕ್ಷಿದಾರನಾಗಿ ಸೇರಿಸಬೇಕು ಎಂಬುದಾಗಿ ಪೈಲಟ್ ಗುಂಪು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಬಳಿಕ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಅಲ್ಲಿಯವರೆಗೆ ಯಥಾಸ್ಥಿತಿ ಪಾಲನೆಗೆ ಆದೇಶ ನೀಡಿತುಅರ್ಜಿದಾರರು ಗುರುವಾರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಇಂದ್ರಜಿತ್ ಮಹಾಂತಿ ಮತ್ತು ನ್ಯಾಯಮೂರ್ತಿ ಪ್ರಕಾಶ ಗುಪ್ತ ಅವರನ್ನು ಒಳಗೊಂಡ ಪೀಠವು ಅಂಗೀಕರಿಸಿತುಬಳಿಕ ಪೀಠವು ೨೦ ನಿಮಿಷಗಳ ಕಾಲ ಕಲಾಪವನ್ನು ಮುಂದೂಡಿತು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ).

2020: ನವದೆಹಲಿಭಾರತದಲ್ಲಿ ೪೯,೩೧೦ ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಕೋವಿಡ್ -೧೯ ಪ್ರಕರಣಗಳ ಸಂಖ್ಯೆ ೧೨,೮೭,೯೪೫ಕ್ಕೆ ಏರಿದೆಇದೇ ವೇಳೆಗೆ ಸೋಂಕಿನಿಂದ ಗುಣಮುಖರಾಗಿ ಚೇತರಿಸಿದರೆ ಸಂಖ್ಯೆ ,೧೭,೨೦೮ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು 2020 ಜುಲೈ 24ರ ಶುಕ್ರವಾರ ತಿಳಿಸಿವೆಇದರಿಂದಾಗಿ ಶೇಕಡಾ ೬೩.೪೫ರಷ್ಟು ಜನರು ಚೇತರಿಸಿಕೊಂಡಂತಾಗಿದೆದೇಶದಲ್ಲಿ ೭೪೦ ಹೊಸ ಸಾವುಗಳೊಂದಿಗೆ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ೩೦,೬೦೧ ಕ್ಕೆ ಏರಿದೆ ಎಂದು ಶುಕ್ರವಾರ ಬೆಳಗ್ಗೆ ನವೀಕರಿಸಲಾದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಹೇಳಿವೆದೇಶದಲ್ಲಿ ಪ್ರಸ್ತುತ ,೪೦,೧೩೫ ಸಕ್ರಿಯ ಕೊರೊನಾವೈರಸ್ ಸೋಂಕಿನ ಪ್ರಕರಣಗಳಿವೆಕಳೆದ ೨೪ ಗಂಟೆಗಳಲ್ಲಿ ವರದಿಯಾದ ೭೪೦ ಸಾವುಗಳಲ್ಲಿ ಮಹಾರಾಷ್ಟ್ರದಿಂದ ೨೯೮ಕರ್ನಾಟಕದಿಂದ ೯೭ತಮಿಳುನಾಡಿನಿಂದ ೮೮ಆಂಧ್ರಪ್ರದೇದಿಂದ ೬೧ಪಶ್ಚಿಮ ಬಂಗಾಳದಿಂದ ೩೪ಗುಜರಾತಿನಿಂದ ೨೮ಉತ್ತರ ಪ್ರದೇಶ ಮತ್ತು ದೆಹಲಿಯಿಂದ ತಲಾ ೨೬ರಾಜಸ್ಥಾನದಿಂದ ೧೧ ಸಾವುಗಳು ವರದಿಯಾಗಿವೆರಾಜಸ್ಥಾನಮಧ್ಯಪ್ರದೇಶದಿಂದ ೧೦ ಹಾಗೂ ಜಮ್ಮು ಮತ್ತು ಕಾಶ್ಮೀರ ಮತ್ತು ತೆಲಂಗಾಣದಿಂದ ತಲಾ  ಸಾವುಗಳು ದಾಖಲಾಗಿವೆಪಂಜಾಬಿನಲ್ಲಿ ಅಸ್ಸಾಂಒಡಿಶಾ ಮತ್ತು ಹರಿಯಾಣದಲ್ಲಿ ತಲಾ ಕೇರದಲ್ಲಿ ಉತ್ತರಾಖಂಡಜಾರ್ಖಂಡ್ ಮತ್ತು ಪುದುಚೇರಿಯಲ್ಲಿ ತಲಾ  ಸಾವುಗಳು ಸಂಭವಿಸಿವೆಛತ್ತೀಸ್‌ಗಢತ್ರಿಪುರ ಮತ್ತು ಗೋವಾ ತಲಾ  ಸಾವು ದಾಖಲಾಗಿವೆ. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2020: ನವದೆಹಲಿವರ್ಷ ಪೂರ್ತಿ ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಶತಮಾನೋತ್ಸವ ಆಚರಣೆಯನ್ನು ಹಮ್ಮಿಕೊಂಡದ್ದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಪಕ್ಷದ ತೆಲಂಗಾಣ ಘಟಕಕ್ಕೆ 2020 ಜುಲೈ 24ರ ಶುಕ್ರವಾರ ಅಭಿನಂದನಾ ಪತ್ರಗಳನ್ನು ಬರೆದಿದ್ದಾರೆ. "ನರಸಿಂಹ ರಾವ್ ಅವರ ಜನ್ಮ ಶತಮಾನೋತ್ಸವವು ವಿದ್ವತ್ಪೂರ್ಣ ಮತ್ತು ಪ್ರಬುದ್ಧ ವ್ಯಕ್ತಿತ್ವವನ್ನು ನೆನಪಿಸಿಕೊಳ್ಳುವ ಮತ್ತು ಗೌರವಿಸುವ ಸಂದರ್ಭವಾಗಿದೆ ಎಂದು ಸೋನಿಯಾ ಗಾಂಧಿ ಅವರ ಸಂದೇಶ ತಿಳಿಸಿದೆ. "ರಾಜ್ಯ ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ಸುದೀರ್ಘ ವೃತ್ತಿಜೀವನದ ನಂತರಗಂಭೀರ ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ ಅವರು ಭಾರತದ ಪ್ರಧಾನಿಯಾದರುಅವರ ದಿಟ್ಟ ನಾಯಕತ್ವದ ಮೂಲಕ ನಮ್ಮ ದೇಶವು ಅನೇಕ ಸವಾಲುಗಳನ್ನು ಯಶಸ್ವಿಯಾಗಿ ಜಯಿಸಲು ಸಾಧ್ಯವಾಯಿತು೧೯೯೧ರ ಜುಲೈ ೨೪ರ ಕೇಂದ್ರ ಮುಂಗಡಪತ್ರವು  ನಮ್ಮ ದೇಶದ ಆರ್ಥಿಕ ಪರಿವರ್ತನೆಗೆ ದಾರಿಮಾಡಿಕೊಟ್ಟಿತು ಎಂದು ಸೋನಿಯಾ ಗಾಂಧಿ ಅವರ ಪತ್ರ ಹೇಳಿತುರಾವ್ ಅವರ ಅಧಿಕಾರಾವಧಿಯನ್ನು ಹಲವಾರು ರಾಜಕೀಯಸಾಮಾಜಿಕ ಮತ್ತು ವಿದೇಶಿ ನೀತಿಯ ಸಾಧನೆಗಳಿಂದ ಗುರುತಿಸಲಾಗಿದೆ ಮತ್ತು ಅವರು ಸಮರ್ಪಿತ ಕಾಂಗ್ರೆಸ್ಸಿಗರಾಗಿದ್ದರು ಎಂದು ಸೋನಿಯಾ ಬೊಟ್ಟು ಮಾಡಿದ್ದಾರೆ ವರ್ಷಪೂರ್ತಿ ಪಿವಿಎನ್ ಜನ್ಮ ಶತಮಾನೋತ್ಸವ ಆಯೋಜಿಸಿದ್ದಕ್ಕಾಗಿ ನಾನು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ಅಭಿನಂದಿಸುತ್ತೇನೆಪಿ.ವಿ.ನರಸಿಂಹ ರಾವ್ ಅವರು ಅತ್ಯಂತ ಗೌರವಾನ್ವಿತ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವ್ಯಕ್ತಿಅವರ ಅನೇಕ ಸಾಧನೆಗಳು ಮತ್ತು ಕೊಡುಗೆಗಳಲ್ಲಿ ಕಾಂಗ್ರೆಸ್ ಪಕ್ಷ ಹೆಮ್ಮೆ ಪಡುತ್ತದೆ ಎಂದು ಅವರು ಹೇಳಿದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2020: ಜೈಪುರ೨೦೦ ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ೧೦೯ ಶಾಸಕರ ಬೆಂಬಲ ಹೊಂದಿರುವುದಾಗಿ ಪ್ರತಿಪಾದಿಸಿರುವ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಅವರು ಬಹುಮತ ಸಾಬೀತು ಪಡಿಸಲು ಅನುವು ಮಾಡಿಕೊಡಲು ಸೋಮವಾರ ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿ ತಮ್ಮ ಬೆಂಬಲಿಗ ಶಾಸಕರೊಂದಿಗೆ 2020 ಜುಲೈ 24ರ ಶುಕ್ರವಾರ ರಾಜ್ಯಭವನದ ಮುಂದೆ ಧರಣಿ ನಡೆಸುವುದುರೊಂದಿಗೆ ರೋಚಕ ತಿರುವು ಪಡೆದುಕೊಂಡಿತು. ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಪಟ್ಟು ಬಿಗಿಗೊಳಿಸಿರುವ ಗೆಹ್ಲೋಟ್ ತಂಡವು ’ಹೌಸ್ ಬುಲಾವೋ(ಅಧಿವೇಶನ ಕರೆಯಿರಿ)’ ಎಂದು ರಾಜ್ಯಪಾಲರನ್ನು ಉದ್ದೇಶಿಸಿ ಘೋಷಣೆ ಕೂಗುತ್ತಾ ಧರಣಿ ನಡೆಸಿದರುಕೇಂದ್ರದ ಒತ್ತಡದಿಂದಾಗಿ ರಾಜ್ಯಪಾಲರು ವಿಶೇಷ ಅಧಿವೇಶನ ಕರೆಯಲು ಹಿಂದೇಟು ಹಾಕುತ್ತಿದ್ದಾರೆ ಎಂದು ಗೆಹ್ಲೋಟ್ ಗಂಭೀರ ಆರೋಪ ಮಾಡಿದರುಪ್ರತಿಭಟನೆ ನಿರತ ಗೆಹ್ಲೋಟ್ ಬಣಕ್ಕೆ ರಾಜ್ಯಪಾಲರಿಂದ ಯಾವುದೇ ಆಶ್ವಾಸನೆ ಬರದೇ ಇರುವುದರಿಂದ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿತು. ಸಚಿನ್ ಪೈಲಟ್ ಅನರ್ಹತೆ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜಸ್ಥಾನ ಹೈಕೋರ್ಟ್ ಆದೇಶಿಸಿದ ಬೆನ್ನಲ್ಲೇಗೆಹ್ಲೋಟ್ ಬಣ ಹೋಟೆಲಿನಿಂದ ನೇರವಾಗಿ ಬಸ್ಸಿನ ಮೂಲಕ ರಾಜಭವನಕ್ಕೆ ಆಗಮಿಸಿ ವಿಶೇಷ ವಿಧಾನಸಭೆ ಕರೆಯುವಂತೆ ಒತ್ತಾಯಿಸತೊಡಗಿತುವಿಧಾನಸಭೆಯಲ್ಲಿ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳಿಗೆ ಬಹುಮತ ಇದೆಅಷ್ಟೇ ಅಲ್ಲಪಕ್ಷದ ವಿರುದ್ಧ ಬಂಡಾಯವೆದ್ದು ಹೋಗಿರುವ ಶಾಸಕರಲ್ಲಿ ಕೆಲವರು ಪುನಃ ಪಕ್ಷಕ್ಕೆ ಮರಳಲು ಉತ್ಸುಕರಾಗಿದ್ದಾರೆಆದರೆ ಅವರನ್ನು ಹರಿಯಾಣದಲ್ಲಿ ಬಂಧಿಸಿ ಇಡಲಾಗಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದರು(ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

ಇಂದಿನ ಇತಿಹಾಸ  History Today ಜುಲೈ 24  (2019+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-ಸಂಗ್ರಹ: ನೆತ್ರಕೆರೆ ಉದಯಶಂಕರ

No comments:

Advertisement