My Blog List

Monday, May 1, 2023

ಬೆಂಗಳೂರಿನಲ್ಲಿ ಕೇರಳ ಮಾದರಿ ರಥೋತ್ಸವ..

 ಬೆಂಗಳೂರಿನಲ್ಲಿ ಕೇರಳ ಮಾದರಿ ರಥೋತ್ಸವ..

ಹೌದು. ಬೆಂಗಳೂರಿನಲ್ಲಿ ಕೇರಳ ಮಾದರಿ ರಥೋತ್ಸವ. ಇದು ಬೆಂಗಳೂರಿನ ಗಿರಿನಗರದ ಮೂಲ ದೇವರಾದ ಮಹಾಗಣಪತಿಯ ರಥೋತ್ಸವ.
ಬೆಂಗಳೂರಿನ ಗಿರಿನಗರದಲ್ಲಿ ಮಹಾಗಣಪತಿ ರಥೋತ್ಸವ ಏಪ್ರಿಲ್‌ ೨೬ರಿಂದ ಮೇ ೦೧ರವರೆಗೆ ರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡೆಯಿತು.

ಕರ್ನಾಟಕದ ಪಶ್ಚಿಮ ಕರಾವಳಿಯ ಅದರಲ್ಲೂ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಹಾಗೂ ಕೇರಳದಲ್ಲಿ ನಡೆಯುವ ಮಾದರಿಯಲ್ಲಿ ಜಾತ್ರೆ ಹಾಗೂ ರಥೋತ್ಸವ ಇಲ್ಲಿನ ಆಸುಪಾಸಿನ ಭಕ್ತಾದಿಗಳನ್ನು ವಿಶೇಷವಾಗಿ ಆಕರ್ಷಿಸಿತು.

ಕೇರಳ, ದಕ್ಷಿಣ ಕನ್ನಡ, ಉಡುಪಿ ದೇವಾಲಯಗಳ ಮಾದರಿಯ  ದರ್ಶನಬಲಿ, ದೇವನೃತ್ಯ, ರಂಗಪೂಜೆ, ಮತ್ತು ವಿಶೇಷವಾಗಿ ಚೆಂಡೆ ವಾದನ, ಕೊಂಬು ಕಹಳೆಯೊಂದಿಗೆ ಮಹಾರಥೋತ್ಸವ ಜರುಗಿತು.


ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕೂಡಾ ೨೦೨೨ರಲ್ಲಿ ಕೇರಳ, ಕರ್ನಾಟಕದ ಪಶ್ಚಿಮ ಕರಾವಳಿ ಮಾದರಿಯಲ್ಲೇ ನೆರವೇರಿತ್ತು.


ಏಪ್ರಿಲ್‌ ೩೦ರಂದು ನಡೆದ ಮಹಾಗಣಪತಿ ದೇವರ ರಥೋತ್ಸವ ಸಂಭ್ರಮದ ವಿಡಿಯೋಗಳು ಇಲ್ಲಿವೆ.


No comments:

Advertisement