Friday, January 23, 2026

ಪಂಚಲಿಂಗೇಶ್ವರನ ಅವಭೃತ

 ಪಂಚಲಿಂಗೇಶ್ವರನ ಅವಭೃತ

ವಭೃತ (ದೇವನಾಗರಿಯಲ್ಲಿ ʼಅವಬೃಥʼ) ಎಂದರೆ ವೈದಿಕ ಯಜ್ಞಗಳು ಅಥವಾ ಪ್ರಮುಖ ಧಾರ್ಮಿಕ ವಿಧಿವಿಧಾನಗಳು ಮುಗಿದ ನಂತರ ಯಜಮಾನನು ಮಾಡುವ ಪವಿತ್ರವಾದ ಮಂಗಳಸ್ನಾನ. ಇದು ಯಜ್ಞದ ಸಮಾಪ್ತಿಯನ್ನು ಸೂಚಿಸುವ ವಿಧಿಯಾಗಿದ್ದು, ಪಾಪ ಪರಿಹಾರ ಮತ್ತು ಶುದ್ಧೀಕರಣದ ಸಂಕೇತ. 


ಅವಭೃತದ ಮುಖ್ಯಾಂಶಗಳು:

  • ಯಜ್ಞಾಂತ ಸ್ನಾನ: ಪ್ರಧಾನ ಯಾಗ ಅಥವಾ ಯಜ್ಞ ಪೂರ್ಣಗೊಂಡ ನಂತರ ಮಾಡಲಾಗುವ ವಿಶೇಷ ಜಳಕ.
  • ಶುದ್ಧೀಕರಣ: ಯಜ್ಞದ ಸಮಯದಲ್ಲಿ ಉಂಟಾಗಬಹುದಾದ ದೋಷಗಳನ್ನು ಕಳೆದು, ಯಜಮಾನನನ್ನು ಶುದ್ಧಗೊಳಿಸುವ ಪ್ರಕ್ರಿಯೆ.
  • ಮಂಗಳ ಕಾರ್ಯ: ಇದು ಯಜ್ಞದ ಮುಕ್ತಾಯದ ಸೂಚಕವಾಗಿದ್ದು, ಯಶಸ್ಸನ್ನು ಸೂಚಿಸುತ್ತದೆ.
  • ನದಿ/ತೀರ್ಥ ಸ್ನಾನ: ಸಾಮಾನ್ಯವಾಗಿ ಹರಿಯುವ ನದಿ ಅಥವಾ ಪವಿತ್ರ ತೀರ್ಥಗಳಲ್ಲಿ ಈ ಸ್ನಾನವನ್ನು ಆಚರಿಸಲಾಗುತ್ತದೆ. 

ಸರಳವಾಗಿ ಹೇಳುವುದಾದರೆಯಜ್ಞದ ಕೊನೆಯಲ್ಲಿ ಆಚರಿಸಲಾಗುವ ಸಮಾರೋಪ ಸ್ನಾನವೇ 'ಅವಭೃತ'. ದೇವಾಲಯದ ವಾರ್ಷಿಕೋತ್ಸವ, ಜಾತ್ರೆ, ಆಯನ ಕೂಡಾ ದೇವರ ಶಕ್ತಿಯನ್ನು ಜಾಗೃತಗೊಳಿಸುವ ಯಜ್ಞ, ಹಾಗಾಗಿಯೇ ಆಯನದ ಕೊನೆಗೆ ಅವಭೃತ ನಡೆಯುತ್ತದೆ.

ವಿಟ್ಲಾಯನದ ಸಡಗರದ ರಥೋತ್ಸವದ ಮರುದಿನ ಕೊಡಂಗಾಯಿ ಹೊಳೆಯಲ್ಲಿ ವಿಟ್ಲದೊಡೆಯ ಪಂಚಲಿಂಗೇಶ್ವರನ ಅವಭೃತ ನಡೆಯುತ್ತದೆ. ಈ ಅವಭೃತಕ್ಕಾಗಿ ದೇವಸ್ಥಾನದಿಂದ ಕೊಡಂಗಾಯಿವರೆಗೆ ಸಾಗುವಾಗ  ದೇವಸ್ಥಾನದ ಕಟ್ಟೆಯಿಂದ ತೊಡಗಿ, ವಿವಿಧ ಕಟ್ಟೆಗಳಲ್ಲಿ ಪಂಚಲಿಂಗೇಶ್ವರನಿಗೆ ಪೂಜೆ ಸಲ್ಲುತ್ತದೆ. ಪ್ರತಿವರ್ಷವೂ ಈ ಕಟ್ಟೆಗಳಿಗೆ ದೇವರು ಬರುವ ಹೊತ್ತಿನಲ್ಲಿ ಆಸುಪಾಸಿನ ಜನರು ಭಕ್ತಿ ಪೂರ್ವಕವಾಗಿ ನೆರೆದು ಭಗವಂತನಿಗೆ ಕೈ ಮುಗಿಯುತ್ತಾರೆ.

ಅವಭೃತಕ್ಕಾಗಿ ಪಂಚಲಿಂಗೇಶ್ವರನು ಸಾಗುವ ದೃಶ್ಯದ ವಿಡಿಯೋ ಹಾಗೂ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಸಮೀಪದ ನೆತ್ರಕೆರೆಯ ಎರಡು ಕಟ್ಟೆಗಳಲ್ಲಿ ನಡೆದ ಪಂಚಲಿಂಗನ ಪೂಜೆಯ ಚಿತ್ರ, ವಿಡಿಯೋಗಳು ಮೇಲಿವೆ. (ಚಿತ್ರ, ವಿಡಿಯೋ ಕೃಪೆ: ಸದಾಶಿವ ಬನ, ವಿಟ್ಲ ಸುದ್ದಿಗಳು ಗ್ರೂಪ್‌, ನೆತ್ರಕೆರೆ ಮಠ ಗ್ರೂಪ್)

ಅವಭೃತದ ಮರುದಿನ ಧ್ವಜಾವರತಣದೊಂದಿಗೆ ವಿಟ್ಲಾಯನದ ಸಡಗರ ಕೊನೆಗೊಳ್ಳುತ್ತದೆ.

No comments:

Advertisement