Sunday, February 8, 2026

ದ್ವಿತೀಯ ವಾರ್ಷಿಕೋತ್ಸವ ಪಂಚಹೋಮ ಸಂಭ್ರಮ

 ದ್ವಿತೀಯ ವಾರ್ಷಿಕೋತ್ಸವ ಪಂಚಹೋಮ ಸಂಭ್ರಮ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ದ್ವಿತೀಯ ವಾರ್ಷಿಕೋತ್ಸವವನ್ನು ೨೦೨೬ ಫೆಬ್ರುವರಿ ೦೮ರ ಮಾಘ ಬಹುಳ ಸಪ್ತಮಿಯಂದು ಶ್ರದ್ಧಾ ಭಕ್ತಿಯೊಂದಿಗೆ ಸಡಗರದಿಂದ ನೆರವೇರಿಸಲಾಯಿತು.

ದೇವರ ಬಲವರ್ಧನೆ ಹಾಗೂ ಭಕ್ತರ ಕ್ಷೇಮಾಭಿವೃದ್ಧಿಗಾಗಿ ಪಂಚ ಹೋಮಗಳನ್ನು ಋತ್ವಿಜ ಶ್ರೀ ಶ್ರೀಧರ್‌ ಭಟ್‌ ಅವರ ನೇತೃತ್ವದಲ್ಲಿ ನಡೆಸಲಾಯಿತು. ಅದಕ್ಕೂ ಮುನ್ನ ಬೆಳಗ್ಗೆ ಎಲ್ಲ ದೇವರಿಗೆ ಕ್ಷೀರಾಭಿಷೇಕವನ್ನು ಮಾಡಲಾಯಿತು.


ಶ್ರೀ ಮಹಾಗಣಪತಿ, ಶ್ರೀ ವೆಂಕಟೇಶ್ವರ, ಶ್ರೀ ಆಂಜನೇಯ, ನವಗ್ರಹಗಳು ಮತ್ತು ನಾಗರಾಜರನ್ನು ಆವಾಹಿಸಿ ಅವರ ಪೂಜೆಯೊಂದಿಗೆ ಮಹಾಗಣಪತಿಗಾಗಿ ಅಥರ್ವಶೀರ್ಷ ಹೋಮ, ವೆಂಕಟೇಶ್ವರನಿಗಾಗಿ ಶ್ರೀ ವೆಂಕಟೇಶ್ವರ ಮೂಲ ಮಂತ್ರ ಹೋಮ, ಅಭಯ ಆಂಜನೇಯನಿಗಾಗಿ ಶ್ರೀ ಆಂಜನೇಯ ಮೂಲಮಂತ್ರ ಹೋಮ, ಆದಿತ್ಯಾದಿ ನವಗ್ರಹರಿಗಾಗಿ ನವಗ್ರಹ ಹೋಮ, ಸುಬ್ರಹ್ಮಣ್ಯ- ನಾಗರಾಜನಿಗೆ ಸರ್ಪ ಸೂಕ್ತ ಹೋಮ ಹಾಗೂ ದೇವರ ಬಲವೃದ್ಧಿಗಾಗಿ ಕಲಾ ಹೋಮವನ್ನು ನೆರವೇರಿಸಲಾಯಿತು.

ಹೋಮದ ಬಳಿಕ ಮಹಾಪೂಜೆ, ಪ್ರಸಾದ ವಿನಿಯೋಗ ನಡೆಯಿತು. ಶ್ರೀ ಮುನಿರಾಜು ಅವರು ಅಲಂಕಾರ ಹಾಗೂ ರಾತ್ರಿಯ ಪ್ರಸಾದ ಸೇವೆ, ಶ್ರೀ ಎಚ್.ವಿ. ಉದಯಶಂಕರ, ನಾಗರಾಜ್‌ ಕೆ.ಎಂ., ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಶ್ರೀ ಚೌಡರೆಡ್ಡಿ ಅವರು ಪ್ರಸಾದದ ವ್ಯವಸ್ಥೆ ಮಾಡಿದ್ದರು.

ಭಕ್ತರು ಭಾರೀ ಸಂಖ್ಯೆಯಲ್ಲಿ ಹೋಮ ಕಲಾಪದಲ್ಲಿ ಪಾಲ್ಗೊಂಡರು.

ಯುವ ನಾಯಕ ಶ್ರೀ ಶಿವಕುಮಾರ್‌, ವೇಣುಗೋಪಾಲ್‌, ಯಕ್ಷ ಕಲಾ ಕೌಸ್ತುಭ ತಂಡದ ಕಲಾವಿದ ಮಕ್ಕಳು ಅವರ ಪಾಲಕರು ಸೇರಿದಂತೆ ಆಸುಪಾಸಿನ ಬಡಾವಣೆಯಗಳಿಂದಲೂ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಯಕ್ಷ ಕಲಾ ಕೌಸ್ತುಭ ತಂಡದ ಸದಸ್ಯರು ಶ್ರೀ ಉಮೇಶರಾಜ್‌ ಮಂದಾರ್ತಿ ಅವರ ನೇತೃತ್ವದಲ್ಲಿ ಗಣಪತಿ ಸ್ತುತಿಯ ಮೂಲಕ ಕಾರ್ಯಕ್ರಮಕ್ಕೆ ಕಳಗಟ್ಟಿಸಿದರು.

ವಾರ್ಷಿಕೋತ್ಸವ ಸಡಗರದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.


No comments:

Advertisement