Wednesday, June 3, 2026

ಇಂದಿನ ಇತಿಹಾಸ History Today ಜೂನ್‌ 03

ಇಂದಿನ ಇತಿಹಾಸ History Today ಜೂನ್‌ 03

2026: ಬೆಂಗಳೂರು: ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್‌ (ಡಿ.ಕೆ. ಶಿವಕುಮಾರ್)‌ ಅವರು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಈದಿನ (2026 ಜೂನ್‌ 3ರ ಬುಧವಾರ) ಸಂಜೆ 4.15 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆಯಂತೆ ಮೇ 28ರಂದು ರಾಜೀನಾಮೆ ನೀಡಿದ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಶಿವಕುಮಾರ್‌ ಅವರು ಆಯ್ಕೆಯಾಗಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಬೆಂಗಳೂರಿನ ಲೋಕಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು. ಶಿವಕುಮಾರ್‌ ಅವರೊಂದಿಗೆ ಡಾ. ಜಿ. ಪರಮೇಶ್ವರ ಸಹಿತವಾಗಿ 13 ಮಂದಿ ಶಾಸಕರೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಪರಮೇಶ್ವರ್‌ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಇತರರು: ಕೆ.ಎಚ್.‌ ಮುನಿಯಪ್ಪ, ಕೆ.ಜೆ. ಜಾರ್ಜ್‌, ಎಂ.ಬಿ. ಪಾಟೀಲ, ರಾಮಲಿಂಗಾ ರೆಡ್ಡಿ, ಸತೀಶ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್‌ ಖರ್ಗೆ, ಯು.ಟಿ. ಖಾದರ್‌, ಈಶ್ವರ್‌ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್‌, ಶರಣ ಪ್ರಕಾಶ ಪಾಟೀಲ.  ಕಾಂಗ್ರೆಸ್‌ ಪಕ್ಷದ ಪ್ರಮುಖರಾದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ,  ಸಿದ್ದರಾಮಯ್ಯ, ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೆವಾಲಾ,  ಕಾಂಗ್ರೆಸ್‌ ಅಧಿಕಾರಾರೂಢ ರಾಜ್ಯಗಳ ಹಲವು ಮುಖ್ಯಮಂತ್ರಿಗಳು, ವಿವಿಧ ಸ್ವಾಮೀಜಿಗಳು, ಫಾದರ್‌ ಹಾಗೂ ಮೌಲ್ವಿಗಳು ಸೇರಿದಂತೆ ಹಲವಾರು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

2026: ಕೋಲ್ಕತ: ತೃಣ ಮೂಲ ಕಾಂಗ್ರೆಸ್‌ ಪಕ್ಷದ ಉಚ್ಛಾಟಿತ ಶಾಸಕ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಈದಿನ ನೇಮಿಸಲಾಯಿತು. ರಿತಬ್ರತ ಬ್ಯಾನರ್ಜಿ ಅವರು ಚುನಾಯಿತ 80 ಟಿಎಂಸಿ ಶಾಸಕರ ಪೈಕಿ 58 ಮಂದಿಯ ಬೆಂಬಲ ಇರುವುದನ್ನು ಸಾಬೀತು ಪಡಿಸಿದ ಪತ್ರ ಸಲ್ಲಿಸಿದ ಬಳಿಕ ವಿಧಾನ ಸಭಾಧ್ಯಕ್ಷರು ಈ ನೇಮಕ ಮಾಡಿದರು. ಇನ್ನಿಬ್ಬರು ಶಾಸಕರೂ ಈ ಗುಂಪಿನ ಜೊತೆಗಿದ್ದು ಸದ್ಯಕ್ಕೆ ಅವರು ನಗರದಿಂದ ಹೊರಗಿದ್ದಾರೆ ಎನ್ನಲಾಗಿದೆ. ಶಾಸಕಾಂಗ ಪಕ್ಷದ ಮುಖ್ಯ ಸಲಹೆಗಾರರಾಗಿ ಮಾರ್ಗದರ್ಶನ ಮಾಡುವಂತೆ ಇದೇ ಸಂದರ್ಭದಲ್ಲಿ ರಿತಬ್ರತ ಅವರು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಮನವಿ ಮಾಡಿದರು.

2026: ಕೋಲ್ಕತ: ಚುನಾವಣೆ ಫಲಿತಾಂಶ ಪ್ರಕಟಗೊಂಡ ಒಂದೇ ತಿಂಗಳ ಒಳಗೆ ಪಶ್ಚಿಮ ಬಂಗಾಳದ  ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣ ಮೂಲ ಕಾಂಗ್ರೆಸ್‌ (ಟಿಎಂಸಿ) ಇಬ್ಭಾಗಗೊಂಡಿದ್ದು, 60 ಶಾಸಕರ ಒಂದು ಬಣ ಅವರೆಲ್ಲರ ಸಹಿ ಸಹಿತವಾದ ಪತ್ರದೊಂದಿಗೆ ರಿತಭ್ರತ ಬ್ಯಾನರ್ಜಿ ನೇತೃತ್ವದಲ್ಲಿ ಈ ದಿನ ವಿಧಾನಸಭೆಯಲ್ಲಿ ಈ ಬಣವು ರಿತಭ್ರತ ಬ್ಯಾನರ್ಜಿ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿಯೂ, ಸಾಂದೀಪನ್‌ ಸಹಾ ಅವರು ವಿರೋಧ ಪಕ್ಷದ ಉಪನಾಯಕರಾಗಿಯೂ ಮಾನ್ಯ ಮಾಡುವಂತೆ ಕೋರಿ ವಿಧಾನಸಭಾಧ್ಯಕ್ಷರಿಗೆ ಪತ್ರ ಸಲ್ಲಿಸಲು ಸಜ್ಜಾಯಿತು. ವಿಧಾನಸಭಾ ಚುನಾವಣೆಯಲ್ಲಿ  ಭಾರೀ ಬಹುಮತದೊಂದಿಗೆ ಗದ್ದುಗೆ ಏರಿದ ಬಿಜೆಪಿಯ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ 2026 ಮೇ 9ರ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು.

2020: ಬೀಜಿಂಗ್: ಭಾರತದ ಕೋವಿಡ್ -೧೯ ಪ್ರಕರಣಗಳು ಜೂನ್ ಮಧ್ಯಭಾಗದಲ್ಲಿ ದಿನಕ್ಕೆ ೧೫,೦೦೦ ದಾಟಲಿವೆ ಎಂದು ಚೀನಾ 2020 ಜೂನ್  03ರ ಬುಧವಾರ ಭವಿಷ್ಯ ನುಡಿಯಿತು.  ಜೂನ್ ತಿಂಗಳಲ್ಲಿ ಭಾರತವು ಕೋವಿಡ್ -೧೯ ಪ್ರಕರಣಗಳಲ್ಲಿ ಸ್ಥಿರ ಏರಿಕೆ ಕಾಣುವ ಸಾಧ್ಯತೆಯಿದೆ, ದೈನಂದಿನ ಹೆಚ್ಚಳವು ತಿಂಗಳ ಮಧ್ಯಭಾಗದಲ್ಲಿ ದಿನಕ್ಕೆ ೧೫,೦೦೦ ದಾಟಲಿದೆ ಎಂದು ಚೀನಾದ ಸಂಶೋಧಕರು ಸಿದ್ಧಪಡಿಸಿದ ಕೊರೋನವೈರಸ್ ಸಾಂಕ್ರಾಮಿಕ ರೋಗದ ಜಾಗತಿಕ ಮುನ್ಸೂಚನೆ ಮಾದರಿ ಭವಿಷ್ಯ ನುಡಿಯಿತು. ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದ ಲ್ಯಾನ್ ಝೋವು ವಿಶ್ವವಿದ್ಯಾಲಯವು ಸ್ಥಾಪಿಸಿದಗ್ಲೋಬಲ್ ಕೋವಿಡ್ -೧೯ ಪ್ರಿಡಿಕ್ಟ್ ಸಿಸ್ಟಮ್೧೮೦ ದೇಶಗಳಿಗೆ ದೈನಂದಿನ ಮುನ್ಸೂಚನೆಯನ್ನು ನೀಡುತ್ತದೆ. ಜೂನ್ ರಂದು ಭಾರತದಲ್ಲಿ ,೨೯೧ ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳ ಬಗ್ಗೆ ಸಂಶೋಧನಾ ಗುಂಪಿನ ಮುನ್ಸೂಚನೆ ಮಾದರಿಯು ಭವಿಷ್ಯ ನುಡಿದಿತ್ತು. ಭಾರತ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ಕಳೆದ ೨೪ ಗಂಟೆಗಳಲ್ಲಿ ,೯೦೯ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದು ಈವರೆಗಿನ ಪ್ರಮಾಣಕ್ಕೆ ಹೋಲಿಸಿದರೆ ಅತ್ಯಂತ ಹೆಚ್ಚಿನ ಪ್ರಮಾಣವಾಗಿದೆ. ಬುಧವಾರದಿಂದ, ಮುಂದಿನ ನಾಲ್ಕು ದಿನಗಳವರೆಗೆ ೯೬೭೬, ೧೦,೦೭೮, ೧೦,೪೯೮ ಮತ್ತು ೧೦,೯೩೬ ದೈನಂದಿನ ಹೊಸ ಪ್ರಕರಣಗಳ ಮುನ್ಸೂಚನೆಯನ್ನು ಸಂಸ್ಥೆ ನೀಡಿದೆ.  (ವಿವರಗಳಿಗೆ  ಇಲ್ಲಿ  ಕ್ಲಿಕ್   ಮಾಡಿರಿ)

2020: ನವದೆಹಲಿ: ದೆಹಲಿ ಗಲಭೆ ಪ್ರಕರಣದ ಪ್ರಮುಖ ಸಂಚುಕೋರ ಫೈಸಲ್ ಫಾರೂಕ್, ಫೆಬ್ರವರಿ ಗಲಭೆ ನಡೆಯುತ್ತಿರುವಾಗ ತಬ್ಲಿಘಿ ಜಮಾತ್ ಮುಖ್ಯಸ್ಥ ಮೌಲಾನಾ ಮೊಹಮ್ಮದ್ ಸಾದ್ ಅವರ ಆಪ್ತ ಸಹವರ್ತಿ ಎಂದು ವರ್ಣಿಸಲಾದ ಅಬ್ದುಲ್ ಅಲೀಮ್ ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಎಂದು ದೆಹಲಿ ಪೊಲೀಸರು ದೆಹಲಿ ನ್ಯಾಯಾಲಯಕ್ಕೆ  2020 ಜೂನ್ 03ರ ಬುಧವಾರ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ತಿಳಿಸಿದ್ದಾರೆ. ‘ಗಲಭೆಯಲ್ಲಿ ಫೈಸಲ್ ಫಾರೂಕ್ ಅವರ ಪಾತ್ರದ ಬಗ್ಗೆ ತನಿಖೆಯ ಭಾಗವಾಗಿ ಪೊಲೀಸರು ಅವರ ಫೋನಿನ ವಿವರವಾದ ಕರೆ ವಿಶ್ಲೇಷಣೆಯನ್ನು ನಡೆಸಿದ್ದರು. ಫೈಸಲ್ ಫಾರೂಕ್ ಅವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಪಿಂಜ್ರಾ ಟಾಡ್ ಗುಂಪು, ಜಾಮಿಯಾ ಸಮನ್ವಯ ಸಮಿತಿ ಮತ್ತು ಹಜರತ್ ನಿಜಾಮುದ್ದೀನ್ ಮಾರ್ಕಾಜ್ ಅವರ ಪ್ರಮುಖ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದರು ಎಂದು ವಿಶ್ಲೇಷಣೆ ತಿಳಿಸಿದೆ. ದಯಾಳಪುರದಲ್ಲಿ ರಾಜಧಾನಿ ಶಾಲೆಯನ್ನು ಹೊಂದಿರುವ ಫೈಸಲ್ ಫಾರೂಕ್, ತನ್ನ ಶಾಲೆಯ ಸುತ್ತಲಿನ ಗಲಭೆಗಾಗಿ ಅಪರಾಧ ವಿಭಾಗದಿಂದ ಬಂಧಿಸಲ್ಪಟ್ಟ ೧೮ ಜನರಲ್ಲಿ ಒಬ್ಬನಾಗಿದ್ದಾನೆ. ಗಲಭೆಕೋರರ ಆರಂಭಿಕ ಗುರಿಗಳಲ್ಲಿ ಒಂದು ಫಾರೂಕ್ ನಡೆಸುತ್ತಿದ್ದ ಶಾಲೆಯ ಪಕ್ಕದ ಡಿಆರ್ಪಿ ಕಾನ್ವೆಂಟ್ ಶಾಲೆಯಾಗಿತ್ತು. ತನಿಖೆಯ ಸಮಯದಲ್ಲಿ, ಫೈಸಲ್ ಫಾರೂಕ್ ರಾಜಧಾನಿ ಶಾಲೆಯಲ್ಲಿ ಮತ್ತು ಸುತ್ತಮುತ್ತಲಿನ ಗಲಭೆಗಳನ್ನು ಉಲ್ಬಣಗೊಳಿಸುವ ಪಿತೂರಿ ನಡೆಸಿದ್ದುದು ತಿಳಿದುಬಂದಿದೆ. ಫೈಸಲ್ ಸೂಚನೆಯ ಮೇರೆಗೆ ಪಕ್ಕದ ಮತ್ತು ಪ್ರತಿಸ್ಪರ್ಧಿ ಡಿಆರ್ಪಿ ಕಾನ್ವೆಂಟ್ ಶಾಲೆಯನ್ನು ಜನಸಮೂಹ ನಾಶಪಡಿಸಿತ್ತು ಎಂದು ದೋಷಾರೋಪ ಪಟ್ಟಿ ಹೇಳಿದೆ. (ವಿವರಗಳಿಗೆ  ಇಲ್ಲಿ  ಕ್ಲಿಕ್   ಮಾಡಿರಿ)

2020: ನವದೆಹಲಿ/ ಮುಂಬೈ:  ‘ನಿಸರ್ಗಚಂಡಮಾರುತವು ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ 2020 ಜೂನ್ 03ರ ಬುಧವಾರ ಮಧ್ಯಾಹ್ನ ನೆಲಕ್ಕೆ ಅಪ್ಪಳಿಸಿ, ಮಹಾರಾಷ್ಟ್ರದಲ್ಲಿ ಹಲವಾರು ಮರಗಳು, ವಿದ್ಯುತ್ ಕಂಬಗಳನ್ನು ಧರೆಗೆ ಉರುಳಿಸಿತು.  ಮುಂಬೈಯಿಂದ ಹುಬ್ಬಳ್ಳಿಯವರೆಗೆ ಭಾರೀ ಗಾಳಿ ಸಹಿತವಾಗಿ ಅಬ್ಬರದ ಮಳೆ ಸುರಿದಿದ್ದು, ಒಂದು ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ಮುಂಬೈ ಸಮೀಪದ ಅಲಿಬಾಗ್ ಉಮ್ಟೆ ಗ್ರಾಮದಲ್ಲಿ ವಿದ್ಯುತ್ ಕಂಬವೊಂದು ಬಿದ್ದು ೫೮ ವರ್ಷದ ವ್ಯಕ್ತಿಯೊಬ್ಬರು ಮೃತರಾದರು.  ಒಂದು ಸಾವನ್ನು ಹೊರತು ಪಡಿಸಿ ಮಹಾರಾಷ್ಟ್ರದಲ್ಲಿ ಈವರೆಗೆ ಬೇರೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ರಾಯಗಢ ಜಿಲ್ಲಾಧಿಕಾರಿ ನಿಧಿ ಚೌಧರಿ ತಿಳಿಸಿದರು. ‘ಅಲಿಬಾಗ್ನಿಂದ ಒಂದು ಸಾವು ವರದಿಯಾಗಿದೆ. ಅಲಿಬಾಗ್ ಉಮ್ಟೆ ಗ್ರಾಮದಲ್ಲಿ ವಿದ್ಯುತ್ ಕಂಬ ಬಿದ್ದು ೫೮ ವರ್ಷದ ವ್ಯಕ್ತಿಯೊಬ್ಬರು ಮೃತರಾಗಿದ್ದಾರೆ. ಜಿಲ್ಲೆಯಾದ್ಯಂತ ಇದುವರೆಗೆ ಯಾವುದೇ ಸಾವು ಸಂಭವಿಸಿಲ್ಲಎಂದು ಚೌಧರಿ ನುಡಿದರು. ಅಲಿಬಾಗ್ಗೆ ಸಮೀಪದಲ್ಲಿರುವ ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ಹಲವಾರು ಮರಗಳು ಬಿರುಗಾಳಿಗೆ ಉರುಳಿ ಬಿದ್ದಿವೆ. ಹಲವಾರು ವಿದ್ಯುತ್ ಕಂಬಗಳೂ ನೆಲಕ್ಕೆ ಒರಗಿವೆ. ಅಲಿಬಾಗ್ ಸಮೀಪ ಚಂಡಮಾರುತವು  ಬುಧವಾರ ಮಧ್ಯಾಹ್ನ ನೆಲಕ್ಕೆ ಅಪ್ಪಳಿಸಿತು. ಅಧಿಕಾರಿಗಳ ಪ್ರಕಾರ, ಚಂಡಮಾರುv ಅಬ್ಬರಕ್ಕೆ ಸುಮಾರು ೮೫ ದೊಡ್ಡ ಮರಗಳು ಉರುಳಿದ್ದು, ಅವುಗಳಲ್ಲಿ ಕೆಲವು ಮನೆಗಳ ಮೇಲೆ ಬಿದ್ದ. ಹನ್ನೊಂದು ವಿದ್ಯುತ್ ಕಂಬಗಳೂ ಧರೆಗುರುಳಿದವು. ಮಹಾರಾಷ್ಟ್ರ ಕರಾವಳಿಗೆ ೧೨೦ ಕಿ.ಮೀ ವೇಗದೊಂದಿಗೆ ಅಪ್ಪಳಿಸಿದ ಬಳಿಕನಿರ್ಗಚಂಡಮಾರುತವು ದುರ್ಬಲಗೊಳ್ಳಲು ಪ್ರಾರಂಭಿಸಿದೆ ಮತ್ತು ಸಂಜೆಯಾಗುತ್ತಿದ್ದಂತೆಯೇ ಅದರ ತೀವ್ರತೆಯು ಮತ್ತಷ್ಟು ಕಡಿಮೆಯಾಗುತ್ತದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿತು. (ವಿವರಗಳಿಗೆ  ಇಲ್ಲಿ  ಕ್ಲಿಕ್   ಮಾಡಿರಿ)

2020: ಮುಂಬೈ: ಮುಂಬೈಯಿಂದ ೯೫ ಕಿಮೀ ದೂರದಲ್ಲಿರುವ ಅಲಿಬಾಗ್ನಲ್ಲಿನಿಸರ್ಗಚಂಡಮಾರುತವು ನೆಲಕ್ಕೆ ಅಪ್ಪಳಿಸುವುದರೊಂದಿಗೆ ಮುಂಬೈ ಮಹಾನಗರ ಹಾಗೂ ಗುಜರಾತ್ಪ್ರಕೃತಿನರ್ತನದ  ಮಹಾವಿಪತ್ತಿನಿಂದ ಪಾರಾದವು.  ಚಂಡಮಾರುತವು ಮುಂಬೈನ ಆಗ್ನೇಯಕ್ಕೆ ೭೫ ಕಿ.ಮೀ ಮತ್ತು ಪುಣೆಯ ಪಶ್ಚಿಮಕ್ಕೆ ೬೫ ಕಿ.ಮೀ ದೂರದಲ್ಲಿದ್ದು ದುರ್ಬಲಗೊಳ್ಳಲು ಪ್ರಾರಂಭಿಸಿದೆ. ಗಾಳಿಯ ವೇಗವು ಪ್ರಸ್ತುತ ಗಂಟೆಗೆ ೯೦-೧೦೦ ಕಿ.ಮೀ. ಮತ್ತು ಸಂಜೆಯ ಹೊತ್ತಿಗೆ ತೀವ್ರತೆಯು ಮತ್ತಷ್ಟು ಕಡಿಮೆಯಾಗುತ್ತದೆ" ಎಂದು ಅಧಿಕಾರಿಗಳು ಹೇಳಿದರು.  ನಿಸರ್ಗ ಚಂಡಮಾರುತವು ನೆಲಕ್ಕೆ ಅಪ್ಪಳಿಸುವುದರೊಂದಿಗೆ ಬೀಸಿದ ಭಾರೀ ಗಾಳಿ ಮತ್ತು ಮಳೆಯನ್ನು ಅನುಸರಿಸಿ ಮುಂಬೈ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸಂಜೆ ಗಂಟೆಯವರೆಗೆ ಮುಚ್ಚಲಾಯಿತು. "ಫೆಡೆಕ್ಸ್ ಎಂಡಿ ೧೧ ವಿಮಾನ (ಎನ್ ೫೮೩ ಎಫ್) ಬುಧವಾರ ಮುಂಬೈನಲ್ಲಿ ರನ್ವೇ ೧೪ ರಲ್ಲಿ ಸುತ್ತುತ್ತಿದೆ. ವಿಮಾನವು ರನ್ವೇ ಅಂತ್ಯದಿಂದ ಮೀಟರ್ ದೂರದಲ್ಲಿದೆ. ವಿಮಾನ ಮೂಲಸೌಕರ್ಯ ಮತ್ತು ವಿಮಾನಗಳಿಗೆ ಯಾವುದೇ ಹಾನಿಯಾಗಿಲ್ಲ" ಎಂದು ವರದಿಗಳು ಹೇಳಿವೆ  ಮಧ್ಯೆ, ಪುಣೆಯಲ್ಲಿ ೬೦ ಮರಗಳು ಬೇರು ಸಹಿತವಾಗಿ ನೆಲಕ್ಕೆ ಉರುಳಿರುದ್ದು, ಪುಣೆ ಅಗ್ನಿಶಾಮಕ ಇಲಾಖೆಗೆ ಕಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿರುವ ಬಗ್ಗೆ ಕರೆಗಳು ಬಂದಿವೆ. ಮರಗಳು ಉರುಳಿರುವ ಬಗ್ಗೆ ಬಂದ ೬೦ ಕರೆಗಳು ಮತ್ತು ಜಲಾವೃತಗೊಂಡಿರುವ ಬಗ್ಗೆ ಬಂದ ಕರೆಗಳಿಗೆ ಅಗ್ನಿಶಾಮಕ ಇಲಾಖೆ ಮತ್ತು ಪುಣೆ ಮಹಾನಗರ ಪಾಲಿಕೆ ಸ್ಪಂದಿಸಿದವು.  (ವಿವರಗಳಿಗೆ  ಇಲ್ಲಿ  ಕ್ಲಿಕ್   ಮಾಡಿರಿ)

2020: ಭರೂಚ್: ಗುಜರಾತಿನ ಭರೂಚ್ ಜಿಲ್ಲೆಯ ದಹೇಜ್ನಲ್ಲಿ ರಾಸಾಯನಿಕ ಕಾರ್ಖಾನೆಯ ಬಾಯ್ಲರ್ನಲ್ಲಿ 2020 ಜೂನ್ 03ರ ಬುಧವಾರ ಸಂಭವಿಸಿದ ಭಾರಿ ಸ್ಫೋಟ ಹಾಗೂ ಬೆಂಕಿಯಲ್ಲಿ  ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ೫೭ ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿತು. ಘಟನೆ ನಡೆದ ಸ್ಥಳದಲ್ಲಿ ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿತು.  ಇಲ್ಲಿಯವರೆಗೆ ನಾವು ಐವರು ಉದ್ಯೋಗಿಗಳ ಸಾವನ್ನು ದೃಢ ಪಡಿಸಿದ್ದೇವೆ. ಕೆಲವು ಶವಗಳನ್ನು ಕಾರ್ಖಾನೆಯಿಂದ ಹೊರತರಲಾಗಿದ್ದು, ಕೆಲವರು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆಎಂದು ಭರೂಚ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ವಿ.ಚುದಾಸಮಾ ತಿಳಿಸಿದರು.  ಬುಧವಾರ ಮಧ್ಯಾಹ್ನ ಭರೂಚ್ ದಹೇಜ್ ಇಂಡಸ್ಟ್ರಿಯಲ್ ಎಸ್ಟೇಟ್ನಲ್ಲಿರುವ ಯಶಶ್ವಿ ರಸಾಯನ್ ಪ್ರೈವೇಟ್ ಲಿಮಿಟೆಡ್ನಲ್ಲಿನ ಟ್ಯಾಂಕ್ನಲ್ಲಿ ಸಂಭವಿಸಿದ ಸ್ಫೋಟ ಹಾಗೂ ಬೆಂಕಿಯಲ್ಲಿ ಸಿಲುಕಿ ಐವರು ಜನರು ಪ್ರಾಣ ಕಳೆದುಕೊಂಡರು ಮತ್ತು ೫೭ ಜನರು ಗಾಯಗೊಂಡಿದ್ದಾರೆಎಂದು ಭರೂಚ್ ಜಿಲ್ಲಾಧಿಕಾರಿ ಡಾ ಎಂಡಿ ಮೋಡಿಯಾ ತಿಳಿಸಿದರು.  (ವಿವರಗಳಿಗೆ  ಇಲ್ಲಿ  ಕ್ಲಿಕ್   ಮಾಡಿರಿ)

ಇಂದಿನ ಇತಿಹಾಸ  History Today ಜೂನ್  03  (2019+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-
ಸಂಗ್ರಹ: ನೆತ್ರಕೆರೆ ಉದಯಶಂಕರ

Tuesday, June 2, 2026

ಕಥೆ ಹೇಳುವ ಕಲ್ಲುಗಳು…!

 ಕಥೆ ಹೇಳುವ ಕಲ್ಲುಗಳು…!

ಲ್ಲುಗಳು ಕಥೆ ಹೇಳುತ್ತವಾ? ಹೌದು ಅನ್ನುತ್ತಾರೆ ಈ ವ್ಯಕ್ತಿ. ಚಿತ್ರದುರ್ಗಕ್ಕೆ ಈ ಹೆಸರು ಬರಲು ಕಾರಣ ಏನು ಎಂಬುದನ್ನು ಇವರ ಬಾಯಿಯಿಂದಲೇ ಕೇಳಬೇಕು. ಇವರಿಗೆ ಇರುವ ಇತಿಹಾಸ ಜ್ಞಾನಕ್ಕೆ ಕೈ ಮುಗಿಯಬೇಕು. ತಿಳಿಯಲು ಈ ಪರ್ಯಾಯ.ಕಾಮ್‌ ವೆಬ್‌ ಸೈಟಿನ ʼವಾಟ್‌ - ಸುದ್ದಿʼ ಪುಟಕ್ಕೆ ಭೇಟಿ ಕೊಡಿ.

Sunday, May 31, 2026

ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜಾ

 ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಮೇ ೩೦ರ ಶನಿವಾರ ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜೆಯನ್ನು ಭಕ್ತಿ ಭಾವದೊಂದಿಗೆ ನೆರವೇರಿಸಲಾಯಿತು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ. ಮಹಾಮಂಗಳಾರತಿಯ ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.


ದೇವಸ್ಥಾನದಲ್ಲಿ ಶೀಘ್ರದಲ್ಲಿಯೇ ಆರಂಭವಾಗಲಿದೆ - ಹೊಸ ತಂಡಕ್ಕೆ ಯಕ್ಷಗಾನ ತರಬೇತಿ 

Friday, May 29, 2026

ಛಾಯಾಚಿತ್ರ ನೆನಪು ಮೂಡಿಸಿದಾಗ

 ಛಾಯಾಚಿತ್ರ ನೆನಪು ಮೂಡಿಸಿದಾಗ

ಕಿರು ಲೇಖನ-1

ನಾನು ಹೇಳಲು ಹೊರಟಿರುವುದು 94-95ರ ಸಮಯದ ಘಟನೆ.ಪರಿಸರದ ವಿಷಯದಲ್ಲಿ  ಸ್ವಯಂ ಪ್ರೇರಣೆಯಿಂದ ಒಂದಷ್ಟು ಕೆಲಸ ಮಾಡುತ್ತಿದ್ದುದರ ನೆನಪು.ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಿದ್ದುದರ ನೆನಪು.

ವಿಶೇಷವಾಗಿ ಪಾಲಿಥೀನ್ ಚೀಲದಿಂದ ಪರಿಸರಕ್ಕೆ ಆಗುತ್ತಿರುವ ಹಾನಿ.ಆಗಿನ್ನೂ ಪ್ಲಾಸ್ಟಿಕ್ ಬಗ್ಗೆ ಯಾರಿಗೂ ಅಷ್ಟು ತಿಳಿದಿರಲಿಲ್ಲ.

ಅದರ ಸಂಬಂಧ ಒಂದು ರೀತಿಯ ಸಂಶೋಧನೆಯನ್ನೇ ನಡೆಸಿದ್ದೆ ಎನ್ನಬಹುದು.ಎಲ್ಲೆಲ್ಲೂ ಪಾಲಿಥೀನ್ ಚೀಲಗಳನ್ನು ಬಿಸಾಡಲ್ಪಟ್ಟು ರಸ್ತೆ,ಸ್ಥಳಗಳು ಅಸಹ್ಯ ಪರಿಸರವನ್ನು ನಿರ್ಮಿಸಿರುವುದನ್ನು ನೋಡಿ ಮನಸು ಖೇದವಾಗುತ್ತಿತ್ತು. ಈಗ ಬಹಳ ಜಾಗೃತಿ ಬಂದಿದೆ ಅಂತೇನಿಲ್ಲ.ಅದರ ಇನ್ನೊಂದು ಭಯಾನಕ ರೂಪ.

ಇದರ ಬಗ್ಗೆ ವಿಪರೀತವಾದ ಚರ್ಚೆಗಳು ನಡೆಯುತ್ತಿದ್ದವು.ನಿರ್ವಹಣೆ ವಿಷಯದಲ್ಲಿ ಹಲವಾರು ಉತ್ಸಾಹಿ ನಾಗರಿಕರು ಡಾಕ್ಟರ್ ಗಳು
ಸ್ವಚ್ಛ ಬೆಂಗಳೂರಿಗೆ ಸಾಕಷ್ಟು ಕೆಲಸ ಮಾಡುತ್ತಿದ್ದರು. ಇದರ ಸಂಬಂಧ ನನ್ನ ಪುಸ್ತಕ "ಫನತ್ಯಾಜ್ಯ ನಿರ್ವಹಣೆ"ಯಲ್ಲಿ ಸಂಪೂರ್ಣ ಮಾಹಿತಿ ಬರೆದಿದ್ದೇನೆ.

ಪಾಲಿಥೀನ್ ಚೀಲಕ್ಕೆ ಪರ್ಯಾಯ ಇದನ್ನು ಹುಡುಕುತ್ತಾ ಬೇಟಿ ನೀಡಿದ ಪ್ಲಾಸ್ಟಿಕ್ ತಯಾರು ಮಾಡುವ ಕಾರ್ಖಾನೆಗಳು ಎಷ್ಟೋ !

ಸಂಶೋಧನೆಯ ಸಂಸ್ಥೆಗಳೆಷ್ಟೊ!

ಮಾಲಿನ್ಯ ನಿಯಂತ್ರಣ ಮಂಡಳಿ,ಸೆಂಟರ್ ಫಾರ್ ಎನ್ವಿರಾನ್ಮೆಂಟ್ ಎಜುಕೇಶನ್ ,ಟಾಟಾ ಇನ್ಸ್ಟಿಟ್ಯೂಟ್ ಹೀಗೆ ಹಲವು.ಎಲ್ಲೂ ಇದರ ಬಗ್ಗೆ ಸಂಶೋಧನೆ ನಡೆದಿರಲಿಲ್ಲ.ಕೇವಲ ಪ್ಲಾಸ್ಟಿಕ್ ಉಪಯೋಗದ ಬಗ್ಗೆ ಸಾಕಷ್ಟು ಮಾಹಿತಿ ಸಿಗುತ್ತಿತ್ತು.

ಆಗ ಪಾಲಿಥೀನ್ ಚೀಲಕ್ಕೆ ಪರ್ಯಾಯ ಏನಾಗಬಹುದು!! ಎನ್ನುವ ಕುತೂಹಲ ಪ್ರಶ್ನೆ ಪತ್ರಿಕೆಗಳಲ್ಲಿ ಬರುತ್ತಿದ್ದವು.

ಕೆಲವಷ್ಟು ಜನ ತಮ್ಮದೇ ರೀತಿಯಲ್ಲಿ ವಾದಮಾಡುತ್ತಿದ್ದರು .ಅವು ಕೇವಲ ವಾದವಾಗಿರುತ್ತಿತ್ತು ಅಷ್ಟೆ.

ಆಗಷ್ಟೇ ಬಯೋ ಡಿ ಗ್ರೇಡಬಲ್ ಪ್ಲಾಸ್ಟಿಕ್ ಪರ್ಯಾಯ ಆಗಬಹುದು ಎನ್ನುವ ರೀತಿಯಲ್ಲಿ ಪ್ರಯತ್ನಗಳು ನಡೆಯುತ್ತಿತ್ತು.

ಆಗ ಮೈಸೂರು ರಸ್ತೆಯ ನಾಯಿಂಡನ ಹಳ್ಳಿ,ಮಾಗಡಿ ರಸ್ತೆ,ಬೆಂಗಳೂರಿನ ವಿಜಯನಗರದ ರೈಲ್ವೇ ಕಂಬಿಗಳ ಎರಡು ಪಕ್ಕದಲ್ಲಿ ರಾಶಿ,ರಾಶಿ ಪ್ಲಾಸ್ಟಿಕ್ ಚೀಲಗಳು ಬೆಟ್ಟದಂತೆ ಕಾಣಿಸುತ್ತಿದ್ದವು. 

ಹಸುಗಳು ಈ ಪ್ಲಾಸ್ಟಿಕ್ ಗಳನ್ನು ತಿನ್ನುತ್ತಿದ್ದವು. ಅವುಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಸೇರಿ ಸಾಯುತ್ತಿದ್ದವು.ಕೊಳಚೆ ನೀರು ಹರಿದು ಹೋಗುವ ಮೋರಿಗಳಲ್ಲಿ ಈ ಪಾಲಿಥೀನ್ ಚೀಲಗಳು ಸಿಲುಕಿ ರಸ್ತೆಯೆಲ್ಲಾ ಅಸಹ್ಯ ಪರಿಸರ ಸೃಷ್ಟಿಯಾಗುತ್ತಿತ್ತು.

ಇದರ ನೂರಾರು ವರದಿಗಳು ಬರುತ್ತಿದ್ದವು .

ಮಾಮೂಲಿನಂತೆ ಸರಿಯಾದ ಗುರಿ ಇಲ್ಲದ ಅಧಿಕಾರ,ಲಂಚ, ಭ್ರಷ್ಟಾಚಾರ ಇವುಗಳಿಂದ ಪರಿಸರ ನಲುಗಿತು,ನಲುಗುತ್ತಿದೆ.

ಆಗ ಕೆಲವು ಸ್ವಯಂಸೇವಾ ಸಂಘಗಳು ಈ ವಿಷಯದಲ್ಲಿ  ಕೆಲಸಮಾಡಲು ಸಾಕಷ್ಟು ಪ್ರಯತ್ನಿಸುತ್ತಿದ್ದವು .ಇದರ ವಿವರಣೆಯನ್ನು ನನ್ನ "ಘನ ತ್ಯಾಜ್ಯ ನಿರ್ವಹಣೆ"ಪುಸ್ತಕದಲ್ಲಿ ಸಂಪೂರ್ಣ ವಿವರಣೆ ನೀಡಿದ್ದೇನೆ.

ಮೈಸೂರಿನಲ್ಲಿ ಡಾ!! ಜಗದೀಶ, ಈಗ ನಿವೃತ್ತ ಪ್ರಾಧ್ಯಾಪಕರು ,ಪಾಲಿಮರ್ ವಿಜ್ಞಾನದಲ್ಲಿ ಪರಿಣಿತರು.ಹಲವಾರು ಪರಿಸರ ಸಂಬಂಧಿ ಕಾರ್ಯಕ್ರಮಗಳನ್ನು ಮೈಸೂರಿನಲ್ಲಿ ನಡೆಸುತ್ತಿದ್ದರು.

ನಾನು  ದೂರದರ್ಶನಲ್ಲಿ ಇದರ ಸಂಬಂಧ ಚರ್ಚೆ ನಡೆಸುತ್ತಿದ್ದೆ. ಇದರಲ್ಲಿ  ಸ್ನೇಹಿತರಾದ ಡಾ !!ಜಗದೀಶ್ಕೆಲವು ಪರಿಣಿತರು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಕಾರ್ಪೊರೇಷನ್ ಅಧಿಕಾರಿಗಳು ಭಾಗಿಯಾಗುತ್ತಿದ್ದರು.

ನಂತರ ನಾನು :"ಪ್ಲಾಸ್ಟಿಕ್ ಮತ್ತು ಪರಿಸರ "ಎನ್ನುವ ಸಾಕ್ಷ್ಯ ಚಿತ್ರ ತಯಾರಿಸಿದ್ದೆ.ಇದು ದೂರದರ್ಶನದಲ್ಲಿ 30_40 ಬಾರಿ ಪ್ರಸಾರವಾಗುತ್ತು.

ವಿಷಯ ಸ್ವಲ್ಪ ಹೊಸದಾದ್ದರಿಂದ ನಾನು ಪದಗಳನ್ನು ಹುಡುಕಿ,ಸೃಷ್ಟಿಸಿ ಬಳಸುತ್ತಿದ್ದುದೂ ಉಂಟು.ಈಗ ಇವೆಲ್ಲ ಇತಿಹಾಸ.

 ಎಂ.ನರಸಿಂಹಮೂರ್ತಿ


Thursday, May 28, 2026

ಇಂದಿನ ಇತಿಹಾಸ History Today ಮೇ 28

ಇಂದಿನ ಇತಿಹಾಸ History Today ಮೇ 28 

2026: ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಿರ್ದೇಶನದ ಮೇರೆಗೆ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು. ಮಧ್ಯಾಹ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲರು ಇಲ್ಲದೇ ಇದ್ದುದರಿಂದ ಕಚೇರಿಯಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಸಭೆಗೆ ಬರುವಂತೆ ವರಿಷ್ಠರು ಆಹ್ವಾನ ನೀಡಿದ್ದರೂ ತಾವು ಅದನ್ನು ಸ್ವೀಕರಿಸುವುದಿಲ್ಲ. ರಾಜ್ಯದಲ್ಲಿಯೇ ಶಾಸಕನಾಗಿ ಉಳಿದು ಸೇವೆ ಸಲ್ಲಿಸುವೆ ಎಂದು ಪ್ರಕಟಿಸಿದರು. ಹಿಂದಿನ ದಿನ ದೆಹಲಿಯಲ್ಲಿ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿದ್ದರು. ಸಿದ್ದರಾಮಯ್ಯ ರಾಜೀನಾಮೆಯೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಗಾದಿಯ ಸಮೀಪಕ್ಕೆ ಬಂದರು.

2020: ನವದೆಹಲಿ: ಕೊರೋನಾವೈರಸ್ ದಿಗ್ಬಂಧನದಿಂದಾಗಿ (ಲಾಕ್ ಡೌನ್) ದೇಶಾದ್ಯಂತ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರಿಂದ ರೈಲು ಅಥವಾ ಬಸ್ಸು ಟಿಕೆಟ್ ದರ ವಸೂಲಿ ಮಾಡಬಾರದು ಮತ್ತು ಅವರಿಗೆ ಆಹಾರ ಮತ್ತು ನೀರನ್ನು ಒದಗಿಸಬೇಕು ಎಂದು ಸುಪ್ರೀಂಕೋರ್ಟ್ 2020 ಮೇ 28ರ ಗುರುವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತು.ಸ್ವ ಇಚ್ಛೆಯಿಂದ ದಾಖಲಿಸಿದ ಪ್ರಕರಣದಲ್ಲಿ, ಮಧ್ಯಂತರ ನಿರ್ದೇಶನ ನೀಡಿದ ನ್ಯಾಯಮೂರ್ತಿ ಅಶೋಕ ಭೂಷಣ್ ನೇತೃತ್ವದ ಪೀಠವು, ಸಿಕ್ಕಿಹಾಕಿಕೊಂಡಿರುವ ಎಲ್ಲ ವಲಸೆ ಕಾರ್ಮಿಕರಿಗೆ ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪ್ರಕಟಿತ ಮತ್ತು ಘೋಷಿತ ಸ್ಥಳಗಳಲ್ಲಿ ಅವರಿಗೆ ರೈಲು ಅಥವಾ ಬಸ್ಸು ಏರಲು ಸಾಧ್ಯವಾಗುವವರೆಗೂ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಬೇಕು ಎಂದು ಹೇಳಿತು. ಪಯಣ ಆರಂಭವಾಗುವ ರಾಜ್ಯವು ನಿಲ್ದಾಣಗಳಲ್ಲಿಯೇ ಊಟ ಮತ್ತು ನೀರನ್ನು ಒದಗಿಸಬೇಕು, ಭಾರತೀಯ ರೈಲ್ವೇಯು ಪಯಣದ ವೇಳೆಯಲ್ಲಿ ಅವರಿಗೆ ಆಹಾರ ನೀರನ್ನು ಒದಗಿಸಬೇಕು. ಬಸ್ಸು ಪಯಣದಲ್ಲೂ ಅವರಿಗೆ ಊಟ, ನೀರಿನ ವ್ಯವಸ್ಥೆ ಮಾಡಬೇಕು ಎಂದು ಪೀಠ ಸೂಚಿಸಿತು. ವಲಸೆ ಕಾರ್ಮಿಕರಿಗೆ ಆದಷ್ಟೂ ಬೇಗನೆ ರೈಲು ಅಥವಾ ಬಸ್ಸು ಪಯಣ ಮಾಡಲು ಸಾಧ್ಯವಾಗುವಂತೆ ಸೂಕ್ತ ವ್ಯವಸ್ಥೆಗಳನ್ನು ರಾಜ್ಯಗಳು ಮಾಡಬೇಕು. ನಿಟ್ಟಿನ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಪ್ರತಿಯೊಬ್ಬರಿಗೂ ಒದಗಿಸಬೇಕು ಎಂದು ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್ ಮತ್ತು ಎಂಆರ್ ಶಾ ಅವರನ್ನೂ ಒಳಗೊಂಡ ಪೀಠ ನಿರ್ದೇಶನ ನೀಡಿತು. (ವಿವರಗಳಿಗೆ  ಇಲ್ಲಿ  ಕ್ಲಿಕ್  ಮಾಡಿರಿ)

2020: ಕೋಚಿ (ಕೇರಳ): ಬಂಗಾಳ ಕೊಲ್ಲಿಯಲ್ಲಿ ಎದ್ದಿದ್ದ  ಅಂಫಾನ್ ಚಂಡಮಾರುತದಿಂದ ಮುಂಗಾರು ಮಾರುತದ ಚಲನೆಗೆ ಉಂಟಾಗಿದ್ದ ಅಡಚಣೆ ನಿವಾರಣೆಯಾಗಿದ್ದು, ಇದೀಗ ನೈಋತ್ಯ ಮುಂಗಾರು ಮಾರುತವು ಅರಬ್ಬಿ ಸಮುದ್ರದಲ್ಲಿ ಕೇರಳ ತೀರದತ್ತ ಪಯಣ ಮುಂದುವರೆಸಿವೆ ಎಂದು ವರದಿಗಳು 2020 ಮೇ 28ರ  ಗುರುವಾರ ತಿಳಿಸಿದವು. ಜೂನ್ ೧ರ ವೇಳೆಗೆ ಮುಂಗಾರು ಮಾರುತ ಕೇರಳ ತೀರ ಪ್ರವೇಶಿಸಲಿವೆ. ಮೇ ೩೧ರಿಂದ ಜೂನ್ ೪ರವರೆಗೆ ನೈಋತ್ಯ ಭಾಗದಲ್ಲಿ ಕಡಿಮೆ ಒತ್ತಡ ಉಂಟಾಗಲಿದೆ. ಹೀಗಾಗಿ ಮುಂಗಾರು ಮಳೆ ತರುವ ನೈಋತ್ತ ಮುಂಗಾರು ಮಾರುತದ ಚಲನೆ ತಡೆರಹಿತವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತು. ನೈಋತ್ಯ ಮುಂಗಾರು ಮಾರುತವು ಗುರುವಾರ ಮಾಲ್ಡೀವ್ಸ್, ಕೊಮೊರಿನ್ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸಮೀಪಕ್ಕೆ ಪ್ರವೇಶ ಮಾಡಿವೆ. ಮುಂದಿನ ೪೮ ಗಂಟೆಗಳಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇದ್ದು, ಮುಂಗಾರು ಮಾರುತವು ಆಗ್ನೇಯ ದಿಕ್ಕಿನತ್ತ ಚಲಿಸಲಿದೆ. ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಒಮಾನ್ ಮತ್ತು ಪೂರ್ವ ಯೆಮನ್ ತೀರ ತಲುಪಲಿವೆ ಎಂದು ಹವಾಮಾನ ವರದಿ ಹೇಳಿದೆ. ಮೀನುಗಾರರಿಗೆ ಎಚ್ಚರಿಕೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ಇಳಿಯುವ ಮೀನುಗಾರರು ಮೇ ೨೯ರಿಂದ ಜೂನ್ ೪ರ ವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತು. (ವಿವರಗಳಿಗೆ  ಇಲ್ಲಿ  ಕ್ಲಿಕ್   ಮಾಡಿರಿ)

2020:  ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಿಗುಂಡ್ ರಾಜ್‌ಪೊರಾ ಪ್ರದೇಶದಲ್ಲಿ ಕಾರಿನಿಂದ ಪ್ರಬಲ ಐಇಡಿ ಸ್ಫೋಟಕವನ್ನು ಪತ್ತೆ ಹಚ್ಚಿ ಸ್ಫೋಟಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನೆಯ ಬಾಂಬ್ ವಿಲೇವಾರಿ ದಳ ಸಂಭವಿಸಬಹುದಾಗಿದ್ದ ಪುಲ್ವಾಮಾ ಮಾದರಿಯ ಭಾರೀ ಭಯೋತ್ಪಾದಕ ದಾಳಿಯನ್ನು 2020 ಮೇ 28ರ ಗುರುವಾರ  ತಪ್ಪಿಸಿದವು. ಪುಲ್ವಾಮಾ ಪ್ರದೇಶದಲ್ಲಿ ಸ್ಫೋಟಕ ತುಂಬಿದ ಸ್ಯಾಂಟ್ರೊ ಕಾರಿನೊಂದಿಗೆ ಭಯೋತ್ಪಾದಕನು ಸಂಚರಿಸುತ್ತಿದ್ದಾನೆ ಎಂಬ ಮಾಹಿತಿಯನ್ನು ಅನುಸರಿಸಿ ಶೋಧ ಆರಂಭಿಸಿದ ಪೊಲೀಸರು ವಾಹನವನ್ನು ತಡೆದರು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡ ಮತ್ತು ಸಿಆರ್ ಪಿಎಫ್ ಕೂಡಾ ಪೊಲೀಸರ ನೆರವಿಗೆ ಬಂದವು. ಪೊಲೀಸರು ಮತ್ತು ಎನ್‌ಐಎ ಸಿಬ್ಬಂದಿ ಮುತ್ತಿಗೆ ಹಾಕಿ ಕೆಲವು ಸುತ್ತುಗಳ ಗುಂಡು ಹಾರಿಸಿದವು. ಬಳಿಕ ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ) ಸಂಘಟನೆಯ ಉಗ್ರ ಎಂಬುದಾಗಿ ಶಂಕಿಸಲಾಗಿರುವ ಉಗ್ರ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ವರದಿಗಳು ತಿಳಿಸಿದವು. "ಜೈಶ್--ಮೊಹಮ್ಮದ್ ಉಗ್ರಗಾಮಿ ಸಂಘಟನೆ ಭಯೋತ್ಪಾದಕ ಕಾರ್ಯಾಚರಣೆ ನಡೆಸಲಿದೆ ಎಂಬ ಮಾಹಿತಿ ನಮಗೆ ಬಂದಿತ್ತು. ಆದ್ದರಿಂದ ಐಇಡಿ ಇದ್ದ ಹಿಜ್ಬುಲ್ ಮುಜಾಹಿದೀನ್ ಉಗ್ರ ಎಂಬುದಾಗಿ ಶಂಕಿಸಲಾಗಿರುವ ಕಾರಿನ ಚಾಲಕ ಅದಿಲ್ ಜೈಶ್-- ಮೊಹಮ್ಮದ್ ಜೊತೆ ಸಂಪರ್ಕದಲ್ಲಿದ್ದಾನೆಎಂಬ ಅನುಮಾನ ನಮಗಿದೆ ಎಂದು ಕಾಶ್ಮೀರ ಐಜಿ ವಿಜಯಕುಮಾರ್ ಹೇಳಿದರು. ಭದ್ರತಾ ಪಡೆಗಳ ವಾಹನಗಳನ್ನು ಗುರಿಯಾಗಿಸುವ ಉದ್ದೇಶವನ್ನು ಅವರು ಹೊಂದಿದ್ದರು ಎಂದು ವಿಜಯ ಕುಮಾರ್ ನುಡಿದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2020: ನವದೆಹಲಿ: ಕೋವಿಡ್ -೧೯ ಹಿನ್ನೆಲೆಯಲ್ಲಿ ವಿದೇಶದಲ್ಲಿ ಸಿಲುಕಿರುವ ಒಂದು ಲಕ್ಷ ಭಾರತೀಯರನ್ನು ವಂದೇ ಭಾರತ್ ಮಿಷನ್‌ನ ಎರಡನೇ ಹಂತ ಮುಕ್ತಾಯದ ವೇಳೆಗೆ ಮರಳಿ ಭಾರತಕ್ಕೆ ಕರೆ ತರಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೂಲಗಳು  2020 ಮೇ 28ರ ಗುರುವಾರ ತಿಳಿಸಿದವು.  ವಂದೇ ಭಾರತ ಮಿಷನ್ ಹಂತ ಜೂನ್ ೧೩ ರಂದು ಕೊನೆಗೊಳ್ಳಲಿದೆ. ಕೋವಿಡ್ -೧೯ ಸಾಂಕ್ರಾಮಿP ಹಿನ್ನೆಲೆಯಲ್ಲಿ ಮನೆಗೆ ಮರಳಲು ಸುಮಾರು ,೦೮,೨೦೦ ಭಾರತೀಯರು ವಿದೇಗಳಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ವಿದೇಶಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರನ್ನು ಮರಳಿ ಕರೆತರಲು ನೌಕಾಪಡೆಯು ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ಇರಾನ್‌ಗೆ ನಾಲ್ಕು ವಿಮಾನಗಳನ್ನು ಕಳುಹಿಸಲಿದೆ. ಕನಿಷ್ಠ ೫೦೦೦ ಭಾರತೀಯರು ಇತ್ತೀಚೆಗೆ ನೆರೆಯ ನೇಪಾಳ ಮತ್ತು ಬಾಂಗ್ಲಾದೇಶದಿಂದ ಭಾರತಕ್ಕೆ ಹಿಂತಿರುಗಿದ್ದಾರೆ. (ವಿವರಗಳಿಗೆ  ಇಲ್ಲಿ ಕ್ಲಿಕ್ ಮಾಡಿರಿ)

2020:  ನವದೆಹಲಿ: ದೇಶಾದ್ಯಂತ ಕೊರೋನಾ ಸಾಂಕ್ರಾಮಿಕ ಸೋಂಕಿನ ಪ್ರಕರಣಗಳು ,೫೮,೩೩೩ಕ್ಕೇ ಏರಿದ್ದು ಸಾವಿನ ಸಂಖ್ಯೆ ೪೫೩೧ಕ್ಕೆ ತಲುಪಿದೆ. ಇದೇ ವೇಳೆಗೆ ಕರ್ನಾಟಕವು ರಾಜ್ಯದಲ್ಲಿ ಸೋಂಕು ಹರಡುವಿಕೆಯನ್ನು ತಡೆಯಲು ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾ- ಐದು ರಾಜ್ಯಗಳಿಂದ ವಿಮಾನ, ರೈಲು ಮತ್ತು ಇತರ ವಾಹನಗಳ ಆಗಮನವನ್ನು  2020 ಮೇ 28ರ ಗುರುವಾರ ಅಮಾನತುಗೊಳಿಸಿತು. ಐದು ರಾಜ್ಯಗಳ ಪೈಕಿ ಮಹಾರಾಷ್ಟ್ರದಲ್ಲಿ ದೇಶದಲ್ಲೇ ಅತ್ಯಂತ ಹೆಚ್ಚಿನ ಪ್ರಮಾಣದ ಕೊರೋನಾ ಸೋಂಕು ಇದ್ದು, ಅಲ್ಲಿ ಸೋಂಕಿನ ಪ್ರಕರಣಗಳ ಸಂಖ್ಯೆ ೫೬,೦೦೦ ಇದೆ. ತಮಿಳುನಾಡಿನಲ್ಲಿ ೧೮,೦೦೦ ಸೋಂಕು ಪ್ರಕರಣಗಳು ಇದ್ದರೆ ಗುಜರಾತಿನಲ್ಲಿ ೧೫,೦೦೦ಕ್ಕಿಂತಲೂ ಹೆಚ್ಚಿನ ಸೋಂಕು ಪ್ರಕರಣಗಳಿವೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ತಲಾ ೭೦೦೦ಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳಿವೆ. ಕರ್ನಾಟಕದಲ್ಲಿ ಗುರುವಾರ ಕೋವಿಡ್-೧೯ ಸೋಂಕಿನ ೧೧೫ ಹೊಸ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿನ ಪ್ರಕರಣಗಳ ಸಂಖ್ಯೆ ೨೫೩೩ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿತು. ಭಾರತದಲ್ಲಿ ದೇಶೀ ವಿಮಾನಯಾನ ಎರಡು ತಿಂUಳುಗಳ ಲಾಕ್ ಡೌನ್ ಅವಧಿಯ ಬಳಿಕ ಸೋಮವಾರ ಆರಂಭವಾಗಿದೆ. ಆದರೆ ಈಗ ಯಾವುದೇ ವಿಮಾನ ಐದು ರಾಜ್ಯಗಳಿಂದ ಬೆಂಗಳೂರಿಗೆ ಬರುವಂತಿಲ್ಲ. ರೈಲುಗಳ ಪೈಕಿ ಬಹುತೇಕ ಶ್ರಮಿಕ ವಿಶೇಷ ರೈಲುಗಳು ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಹಾಕಿಕೊಂಡ ವಲಸೆ ಕಾರ್ಮಿಕರನ್ನು ಅವರವರ ಹುಟ್ಟೂರುಗಳಿಗೆ ಒಯ್ಯುತ್ತಿವೆ. ಕಪ್ಪು ಪಟ್ಟಿಗೆ ಸೇರಿಸಲಾಗಿರುವ ಐದು ರಾಜ್ಯಗಳ ಪೈಕಿ ಮಹಾರಾಷ್ಟ್ರ ಮತ್ತು ತಮಿಳುನಾಡಿನ ಜೊತೆಗೆ ಕರ್ನಾಟಕ ಗಡಿಗಳನ್ನು ಹಂಚಿಕೊಂಡಿದೆ. (ವಿವರಗಳಿಗೆ  ಇಲ್ಲಿ  ಕ್ಲಿಕ್  ಮಾಡಿರಿ)

Advertisement