Friday, January 16, 2026

ಶ್ರೀ ಆದಿತ್ಯ ಹೃದಯಸ್ತೋತ್ರಮ್‌ ಮಹತ್ವ

 ಶ್ರೀ ಆದಿತ್ಯ ಹೃದಯಸ್ತೋತ್ರಮ್‌ ಮಹತ್ವ

ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸುವ ಪುಣ್ಯಕಾಲ. ದಕ್ಷಿಣಾಯನ ಮುಗಿದು ಉತ್ತರಾಯಣ ಆರಂಭವಾಗುವ ಶುಭಕಾಲ, ಭೀಷ್ಮಾಚಾರ್ಯರು ಯುದ್ಧದಲ್ಲಿ ತೀವ್ರ ಗಾಯಗೊಂಡಿದ್ದರೂ ದೇಹ ತ್ಯಜಿಸಲು ಆಯ್ದುಕೊಂಡ ಮಹಾಪರ್ವ ಕಾಲ, ಸ್ವರ್ಗದ ಬಾಗಿಲು ತೆರೆಯುವ ಕಾಲ- ಇವೆಲ್ಲವೂ ಸೂರ್ಯನ ಪಥ ಪರಿವರ್ತನೆಯ ದಿನದ ಮಹತ್ವವನ್ನು ಸಾರುತ್ತವೆ.

ಮಕರ ಸಂಕ್ರಾಂತಿಯೊಂದಿಗೆ ಆರಂಭವಾಗುವ ಉತ್ತರಾಯಣದ ಪುಣ್ಯ ಕಾಲದಲ್ಲಿ ಸೂರ್ಯನ ಮಹತ್ವವನ್ನು ಸಾರುವ, ಅತ್ಯಂತ ರಹಸ್ಯಮಯವಾದ ಆದಿತ್ಯ ಹೃದಯಸ್ತೋತ್ರದ ಬಗ್ಗೆ ಇಲ್ಲಿ ತಿಳಿದುಕೊಳ್ಳೋಣ.

ಈ ಸ್ತೋತ್ರವನ್ನು ಒಮ್ಮೆ ಸಂಪೂರ್ಣವಾಗಿ ಓದಿ. ಅದರ ಫಲ ಲಭಿಸಬೇಕು ಎಂದಿದ್ದರೆ, ಸ್ನಾನ ಮುಗಿಸಿಕೊಂಡು ಸೂರ್ಯೋದಯದ ಹೊತ್ತಿನಲ್ಲಿ ತಿಗುಣಿತ ಬಾರಿ ಅಂದರೆ ಮೂರು ಬಾರಿ ಅತ್ಯಂತ ಶ್ರದ್ಧಾಭಕ್ತಿಯೊಂದಿಗೆ ಓದಿಕೊಳ್ಳಿ.

ಅದಕ್ಕೂ ಮುನ್ನ ಇಲ್ಲಿರುವ ವಿಡಿಯೋ ನೋಡಿ ಆದಿತ್ಯ ಹೃದಯ ಸ್ತೋತ್ರದ ಮಹತ್ವವೇನು ಎಂಬದನ್ನು ಅರ್ಥ ಮಾಡಿಕೊಳ್ಳಿ. ಈ ಯೂಟ್ಯೂಬ್‌ ಲಿಂಕ್‌ ಕ್ಲಿಕ್‌ ಮಾಡುವ ಮೂಲಕವೂ ವಿಡಿಯೋ ನೋಡಬಹುದು: https://youtu.be/7knlIqjxeOo

ಶ್ರೀ ಆದಿತ್ಯ ಹೃದಯಸ್ತೋತ್ರಮ್‌: ಸೂರ್ಯಾರಾಧನೆಯ ಸಾರ ಮತ್ತು ಮಹಿಮೆ

ತತೋ ಯುದ್ಧಪರಿಶ್ರಾನ್ತಂ ಸಮರೇ ಚಿನ್ತಯಾ ಸ್ಥಿತಮ್ |
ರಾವಣಂ ಚಾಗ್ರಗೋ ದೃಷ್ಟ್ವಾ ಯುದ್ಧಾಯ ಸಮುಪಸ್ಥಿತಮ್ ||

ದೈವತೈಶ್ಚ ಸಮಾಗಮ್ಯ ದ್ರಷ್ಟುಮಭ್ಯಾಗತೋ ರಣಮ್ |
ಉಪಗಮ್ಯಾಬ್ರವೀದ್ ರಾಮಮಗಸ್ತ್ಯೋ ಭಗವಾಂಸ್ತದಾ ||

ರಾಮ ರಾಮ ಮಹಾಬಾಹೋ ಶ್ರುಣು ಗುಹ್ಯಂ ಸನಾತನಮ್ |
ಯೇನ ಸರ್ವಾನರೀನ್ ವತ್ಸ ಸಮರೇ ವಿಜಯಿಷ್ಯಸೇ ||

ಆದಿತ್ಯಹೃದಯಂ ಪುಣ್ಯಂ ಸರ್ವಶತ್ರುವಿನಾಶನಮ್ |
ಜಯಾವಹಂ ಜಪೇನ್ನಿತ್ಯಮಕ್ಷಯಂ ಪರಮಂ ಶಿವಮ್ ||

 ಸರ್ವಮಂಗಲಮಾಂಗಲ್ಯಂ ಸರ್ವಪಾಪಪ್ರಣಾಶನಮ್ |
ಚಿನ್ತಾಶೋಕಪ್ರಶಮನಮಾಯುರ್ವಧನಮುತ್ತಮಮ್ ||

ರಶ್ಮಿಮನ್ತಂ ಸಮುದ್ಯನ್ತಂ ದೇವಾಸುರನಮಸ್ಕೃತಮ್ |
ಪೂಜಯಸ್ವ ವಿವಸ್ವನ್ತಂ ಭಾಸ್ಕರಂ ಭುವನೇಶ್ವರಮ್ ||

 ಸರ್ವದೇವಾತ್ಮಕೋ ಹ್ಯೇಷ ತೇಜಸ್ವೀ ರಶ್ಮಿಭಾವನಃ |
ಏಷ ದೇವಾಸುರಗಣಾನ್‍ಲ್ಲೋಕಾನ್ ಪಾತಿ ಗಭಸ್ತಿಭಿಃ ||

ಏಷ ಬ್ರಹ್ಮಾ ಚ ವಿಷ್ಣುಶ್ಚ ಶಿವಃ ಸ್ಕನ್ದಃ ಪ್ರಜಾಪತಿಃ |
ಮಹೇನ್ದ್ರೋ ಧನದಃ ಕಾಲೋ ಯಮಃ ಸೋಮೋ ಹ್ಯಪಾಂ ಪತಿಃ ||

ಪಿತರೋ ವಸವಃ ಸಾಧ್ಯಾ ಅಶ್ವಿನೌ ಮರುತೋ ಮನುಃ |
ವಾಯುರ್ವಹ್ನಿಃ ಪ್ರಜಾಃ ಪ್ರಾಣಾ ಋತುಕರ್ತಾ ಪ್ರಭಕರಃ ||

ಆದಿತ್ಯಃ ಸವಿತಾ ಸೂರ್ಯ ಖಗಃ ಪೂಷಾ ಗಭಸ್ತಿಮಾನ್ |
ಸುವರ್ಣಸದೃಶೋ ಭಾನುರ್ಹಿರಣ್ಯರೇತಾ ದಿವಾಕರಃ ||

 ಹರಿದ್ವಶಃ ಸಹಸ್ರಾರ್ಚಿಃ ಸಪ್ತಸಪ್ತಿರ್ಮರೀಚಿಮಾನ್ |
ತಿಮಿರೋನ್ಮಥನಃ ಶಂಭುಸ್ತ್ವಷ್ಟಾ ಮಾರ್ತಣ್ಡಕೋಽಂಶುಮಾನ್ ||

ಹಿರಣ್ಯಗರ್ಭಃ ಶಿಶಿರಸ್ತಪನೋಽಹಸ್ಕರೋ ರವಿಃ |
ಅಗ್ನಿಗರ್ಭೋಽದಿತೇಃ ಪುತ್ರಃ ಶಂಖಃ ಶಿಶಿರನಾಶನಃ || 

ವ್ಯೋಮನಾಥಸ್ತಮೋಭೇದೀ ಋಗ್ಯಜುಃಸಾಮಪಾರಗಃ |
ಘನವೃಷ್ಟಿರಪಾಂ ಮಿತ್ರೋ ವಿನ್ಧ್ಯವೀಥೀಪ್ಲವಂಗಮಃ ||

ಆತಪೀ ಮಣ್ಡಲೀ ಮೃತ್ಯೂಃ ಪಿಙ್ಗಲಃ ಸ್ಸರ್ವತಾಪನಃ |
ಕವಿರ್ವಿಶ್ಜೋ ಮಹಾತೇಜಾ ರಕ್ತಃ ಸರ್ವಭವೋದ್ಧವಃ || 

ನಕ್ಷತ್ರಗ್ರಹತಾರಾಣಾಮಧಿಪೋ ವಿಶ್ವಭಾವನಃ |
ತೇಜಸಾಮಪಿ ತೇಜಸ್ವೀ ದ್ವಾದಶಾತ್ಮನ್ ನಮೋಽಸ್ತು ತೇ ||

ನಮಃ ಪೂರ್ವಾಯ ಗಿರಯೇ ಪಶ್ಚಿಮಾಯಾದ್ರಯೇ ನಮಃ |
ಜ್ಯೋತಿರ್ಗಣಾನಾಂ ಪತಯೇ ದಿನಾಧಿಪತಯೇ ನಮಃ || 

ಜಯಾಯ ಜಯಭದ್ರಾಯ ಹರ್ಯಶ್ವಾಯ ನಮೋ ನಮಃ |
ನಮೋ ನಮಃ ಸ್ಸಹಸ್ರಾಂಶೋ ಆದಿತ್ಯಾಯ ನಮೋ ನಮಃ ||

ನಮ ಉಗ್ರಾಯ ವೀರಾಯ ಸಾರಙ್ಗಾಯ ನಮೋ ನಮಃ |
ನಮಃ ಪದ್ಮಪ್ರಬೋಧಾಯ ಪ್ರಚಂಡಾಯ ನಮೋಽಸ್ತು ತೇ || 

ಬ್ರಹ್ಮೀಶಾನಾಚ್ಯುತೇಶಾಯ ಸೂರಾಯದಿತ್ಯವರ್ಚಸೇ |
ಭಾಸ್ವತೇ ಸರ್ವಭಕ್ಷಾಯ ರೌದ್ರಾಯ ವಪುಷೇ ನಮಃ ||

ತಮೋಘ್ನಾಯ ಹಿಮಘ್ನಾಯ ಶತ್ರುಘ್ನಾಯಮಿತಾತ್ಮನೇ |
ಕೃತಘ್ನಘ್ನಾಯ ದೇವಾಯ ಜ್ಯೋತಿಷಾಂ ಪತಯೇ ನಮಃ || 

ತಪ್ತಚಾಮೀಕರಾಭಾಯ ಹರಯೇ ವಿಶ್ವಕರ್ಮಣೇ |
ನಮಸ್ತಮೋಽಭಿನಿಘ್ನಾಯ ರುಚಯೇ ಲೋಕಸಾಕ್ಷಿಣೇ ||

ನಾಶಯತ್ಯೇಷ ವೈ ಭೂತಂ ತಮೇವ ಸೃಜತಿ ಪ್ರಭುಃ |
ಪಾಯತ್ಯೇಷ ತಪತ್ಯೇಷ ವರ್ಷತ್ಯೇಷ ಗಭಸ್ತಿಭಿಃ || 

ಏಷ ಸುಪ್ತೇಷು ಜಾಗರ್ತಿ ಭೂತೇಷು ಪರಿನಿಷ್ಠಿತಃ |
ಏಷ ಚೈವಾಗ್ನಿಹೋತ್ರಂ ಚ ಫಲಂ ಚೈವಾಗ್ನಿಹೋತ್ರಿಣಾಮ್ ||

ದೇವಾಶ್ಚ ಕ್ರತವಶ್ಚೈವ ಕ್ರತೂನಾಂ ಫಲಮೇವ ಚ |
ಯಾನಿ ಕೃತ್ಯಾನಿ ಲೋಕೇಷು ಸರ್ವೇಷು ಪರಮಪ್ರಭುಃ || 

ಏನಮಾಪತ್ಸು ಕೃಚ್ಛ್ರೇಷು ಕಾನ್ತಾರೇಷು ಭಯೇಷು ಚ |
ಕೀರ್ತಯನ್ ಪುರುಷಃ ಕಶ್ಚಿನ್ನಾವಸೀದತಿ ರಾಘವ ||

ಪೂಜಯಸ್ವೈನಮೇಕಾಗ್ರೋ ದೇವದೇವಂ ಜಗತ್ಪತಿಮ್ |
ಏತತ್ತ್ರಿಗುಣಿತಂ ಜಪ್ತ್ವಾ ಯುದ್ಧೇಷು ವಿಜಯಿಷ್ಠತಿ || 

ಅಸ್ಮಿನ್ ಕ್ಷಣೇ ಮಹಾಬಾಹೋ ರಾವಣಂ ತ್ವಂ ಹನಿಷ್ಯಸಿ |
ಏವಮುಕ್ತ್ವಾ ತತೋಽಗಸ್ತ್ಯೋ ಜಗಾಮ ಸ ಯಥಾಗತಮ್ ||

ಏತಚ್ಛ್ರುತ್ವಾ ಮಹಾತೇಜಾ ನಷ್ಟಶೋಕೋಽಭವತ್ ತದಾ |
ಧಾರಯಾಮಾಸ ಸುಪ್ರೀತೋ ರಾಘವಃ ಪ್ರಯತಾತ್ಮವಾನ್ || 

ಆದಿತ್ಯಂ ಪ್ರೇಕ್ಷ್ಯ ಜಪ್ತ್ವೇದಂ ಪರಂ ಹರ್ಷಮವಾಪ್ತವಾನ್ |
ತ್ರಿರಾಚಮ್ಯ ಶುಚಿರ್ಭೂತ್ವಾ ಧನುರಾದಾಯ ವೀರ್ಯವಾನ್ ||

ರಾವಣಂ ಪ್ರೇಕ್ಷ್ಯ ಹೃಷ್ಟಾತ್ಮಾ ಜಯಾರ್ಥಂ ಸಮುಪಾಗಮತ್ |
ಸರ್ವಯತ್ನೇನ ಮಹತಾ ವೃತಸ್ತಸ್ಯ ಮಧೇಽಭವತ್ ||

ಅಥ ರವಿರವದನ್ನಿರೀಕ್ಷ್ಯ ರಾಮಮ್ ಮುದಿತಮನಾಃ ಪರಮಂ ಪ್ರಹೃಷ್ಯಮಾಣಃ |
ನಿಶಿಚರಪತಿಸಂಕ್ಷಯಂ ವಿದಿತ್ವಾ ಸುರಗಣಮಧ್ಯಗತೋ ವಚಸ್ತ್ವರೇತಿ ||

ಶ್ರೀ ಆದಿತ್ಯ ಹೃದಯ ಸ್ತೋತ್ರವು ವಾಲ್ಮೀಕಿ ರಾಮಾಯಣದ ಯುದ್ಧಕಾಂಡದಲ್ಲಿ ಬರುವ ಅತ್ಯಂತ ಶಕ್ತಿಶಾಲಿ ಸ್ತೋತ್ರ. ಯುದ್ಧದ ಸಮಯದಲ್ಲಿ ಶ್ರೀರಾಮನು ದಣಿದಾಗ ಮತ್ತು ಚಿಂತಿತನಾಗಿದ್ದಾಗ, ಅಗಸ್ತ್ಯ ಮಹರ್ಷಿಗಳು ಜಯವನ್ನು ಲಭಿಸುವಂತೆ ಮಾಡಲು ಈ ಸೂರ್ಯ ಸ್ತೋತ್ರವನ್ನು ಉಪದೇಶಿಸುತ್ತಾರೆ.

ಸ್ತೋತ್ರದ ಸಾರಾಂಶ (ಅರ್ಥ)

  1. ಹಿನ್ನೆಲೆ: ರಾವಣನೊಂದಿಗೆ ಸುದೀರ್ಘವಾಗಿ ಯುದ್ಧ ಮಾಡಿ ದಣಿದಿದ್ದ ರಾಮನು ರಣರಂಗದಲ್ಲಿ ಚಿಂತಿತನಾಗಿ ನಿಂತಿದ್ದನು. ಆಗ ದೇವತೆಗಳೊಂದಿಗೆ ಯುದ್ಧ ನೋಡಲು ಬಂದಿದ್ದ ಅಗಸ್ತ್ಯ ಮುನಿಗಳು ರಾಮನ ಬಳಿ ಬಂದು, "ರಾಮ, ಯುದ್ಧದಲ್ಲಿ ಶತ್ರುಗಳನ್ನು ಗೆಲ್ಲಲು ಅತ್ಯಂತ ರಹಸ್ಯವೂ, ಸನಾತನವೂ ಆದ ಈ 'ಆದಿತ್ಯ ಹೃದಯ'ವನ್ನು ಕೇಳು" ಎಂದು ಉಪದೇಶಿಸುತ್ತಾರೆ.
  2. ಫಲಶ್ರುತಿ: ಈ ಸ್ತೋತ್ರವು ಪುಣ್ಯಪ್ರದವಾದುದು, ಶತ್ರುನಾಶಕವಾದುದು, ಜಯವನ್ನು ತಂದುಕೊಡುವಂಥದ್ದು ಮತ್ತು ಸಕಲ ಪಾಪಗಳನ್ನು ಹರಿಸುವಂಥದ್ದಾಗಿದೆ. ಇದನ್ನು ಜಪಿಸುವುದರಿಂದ ಆಯಸ್ಸು ಹೆಚ್ಚುತ್ತದೆ ಮತ್ತು ಚಿಂತೆ-ಶೋಕಗಳು ದೂರವಾಗುತ್ತವೆ.
  3. ಸೂರ್ಯನ ವೈಭವ: ಸೂರ್ಯನು ಕೇವಲ ಗ್ರಹವಲ್ಲ; ಅವನು ಬ್ರಹ್ಮ, ವಿಷ್ಣು, ಶಿವ, ಸ್ಕಂದ, ಪ್ರಜಾಪತಿ, ಇಂದ್ರ, ಯಮ ಮತ್ತು ಕುಬೇರನ ಸ್ವರೂಪವೇ ಆಗಿದ್ದಾನೆ. ಈ ಜಗತ್ತಿನ ಸಕಲ ಜೀವಿಗಳ ಪ್ರಾಣಶಕ್ತಿ ಅವನೇ.
  4. ಸೂರ್ಯನ ನಾಮಾವಳಿ: ಸ್ತೋತ್ರದಲ್ಲಿ ಸೂರ್ಯನನ್ನು ಆದಿತ್ಯ, ಸವಿತಾ, ಭಾಸ್ಕರ, ಮಾರ್ತಾಂಡ, ಹಿರಣ್ಯಗರ್ಭ, ರವಿ ಮತ್ತು ದಿವಾಕರ ಎಂದು ನಾನಾ ಹೆಸರುಗಳಿಂದ ಸ್ತುತಿಸಲಾಗಿದೆ. ಅವನು ಕತ್ತಲೆಯನ್ನು ಓಡಿಸುವವನು (ತಮೋಘ್ನ), ಶತ್ರುಗಳನ್ನು ಸಂಹರಿಸುವವನು (ಶತ್ರುಘ್ನ) ಮತ್ತು ಲೋಕಕ್ಕೆ ಸಾಕ್ಷಿಯಾದವನು.
  5. ಸೂರ್ಯನ ಶಕ್ತಿ: ನಾವೆಲ್ಲರೂ ಮಲಗಿದ್ದಾಗಲೂ ಜಗತ್ತಿನ ಚೈತನ್ಯವಾಗಿ ಸೂರ್ಯನು ಜಾಗೃತವಾಗಿರುತ್ತಾನೆ. ಆಪತ್ತುಗಳಲ್ಲಿ, ಕಾಡುಗಳಲ್ಲಿ ಅಥವಾ ಭಯದ ಸನ್ನಿವೇಶಗಳಲ್ಲಿ ಈ ಸ್ತೋತ್ರವನ್ನು ಪಠಿಸುವವರು ಎಂದಿಗೂ ಸೋಲುವುದಿಲ್ಲ.
  6. ಉಪಸಂಹಾರ: ಅಗಸ್ತ್ಯರು ಹೇಳಿದಂತೆ ರಾಮನು ಮೂರು ಬಾರಿ ಆಚಮನ ಮಾಡಿ ಶುಚಿಯಾಗಿ, ಸೂರ್ಯನನ್ನು ನೋಡಿ ಈ ಸ್ತೋತ್ರವನ್ನು ಮೂರು ಬಾರಿ ಜಪಿಸಿದನು. ತಕ್ಷಣವೇ ರಾಮನಿಗೆ ಅಪಾರ ಶಕ್ತಿ ಮತ್ತು ಸಂತೋಷ ಲಭಿಸಿತು. ಇದನ್ನು ಕಂಡು ಸೂರ್ಯದೇವನು ಸಂತೋಷದಿಂದ "ರಾಮ, ಬೇಗ ರಾವಣನನ್ನು ಸಂಹರಿಸು" ಎಂದು ಹರಸಿದನು.

ಈ ಸ್ತೋತ್ರದ ವಿಶೇಷತೆಗಳು

  • ಆತ್ಮವಿಶ್ವಾಸದ ಸಂಕೇತ: ರಾಮನಂತಹ ದೇವಮಾನವನಿಗೇ ದಣಿವು ಮತ್ತು ಅನಿಶ್ಚಿತತೆ ಕಾಡಿದಾಗ ಈ ಸ್ತೋತ್ರವು ಅವನಲ್ಲಿ ಆತ್ಮಬಲವನ್ನು ತುಂಬಿತು. ಇದು ಮನುಷ್ಯನ ಮನೋಬಲವನ್ನು ಹೆಚ್ಚಿಸುವ ಮಹಾನ್ ಮಂತ್ರ.
  • ವೈಜ್ಞಾನಿಕ ದೃಷ್ಟಿಕೋನ: ಸೂರ್ಯನು ಇಡೀ ಸೌರಮಂಡಲದ ಶಕ್ತಿಯ ಕೇಂದ್ರ. ವಿಜ್ಞಾನದ ಪ್ರಕಾರ ಸೂರ್ಯನಿಲ್ಲದೆ ಭೂಮಿಯ ಮೇಲೆ ಜೀವನ ಅಸಾಧ್ಯ. ಈ ಸ್ತೋತ್ರವು ಆ 'ಜೀವಶಕ್ತಿ'ಯನ್ನು ಆರಾಧಿಸುತ್ತದೆ.
  • ಶೀಘ್ರ ಫಲದಾಯಕ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜಾತಕದಲ್ಲಿ ಸೂರ್ಯನು ದುರ್ಬಲನಾಗಿದ್ದಾಗ ಅಥವಾ ಅತಿಯಾದ ಮಾನಸಿಕ ಒತ್ತಡವಿದ್ದಾಗ ಇದನ್ನು ಪಠಿಸುವುದು ಶ್ರೇಷ್ಠ. ಇದು ಕಣ್ಣಿನ ದೃಷ್ಟಿ ಮತ್ತು ಆರೋಗ್ಯಕ್ಕೆ ಒಳ್ಳೆಯದು ಎಂದು ನಂಬಲಾಗಿದೆ.
  • ಜಯದ ಮಂತ್ರ: ಯಾವುದೇ ಕೆಲಸದಲ್ಲಿ ಯಶಸ್ಸು ಸಿಗುತ್ತಿಲ್ಲ ಎಂದಾಗ ಅಥವಾ ಶತ್ರುಬಾಧೆ ಹೆಚ್ಚಾದಾಗ ಆದಿತ್ಯ ಹೃದಯದ ಪಠಣೆ ರಾಮಬಾಣದಂತೆ ಕೆಲಸ ಮಾಡುತ್ತದೆ ಎಂಬುದು ಭಕ್ತರ ನಂಬಿಕೆ.

ಸಲಹೆ: ಪ್ರತಿದಿನ ಸೂರ್ಯೋದಯದ ಸಮಯದಲ್ಲಿ ಸ್ನಾನಾದಿ ಕರ್ಮಗಳ ನಂತರ ಈ ಸ್ತೋತ್ರವನ್ನು ಪಠಿಸುವುದು ಅತ್ಯಂತ ಶುಭಪ್ರದ.

Thursday, January 15, 2026

ವಿಟ್ಲ ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವ ಆರಂಭ

 ವಿಟ್ಲ ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವ ಆರಂಭ

ವಿಟ್ಲದ ಸಹಸ್ರಾರು ವರ್ಷಗಳ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯು ಸಡಗರದೊಂದಿಗೆ ೨೦೨೬ ಜನವರಿ ೧೪ರ ಬುಧವಾರ ಮಕರ ಸಂಕ್ರಾಂತಿಯ ಶುಭದಿನ ಆರಂಭವಾಯಿತು. ವಿಟ್ಲ ಪಂಚಲಿಂಗೇಶ್ವರ ಜಾತ್ರೆಯು ಆಸುಪಾಸಿನಲ್ಲಿ ʼವಿಟ್ಲಾಯನʼ ಎಂದೇ ಖ್ಯಾತಿ ಪಡೆದಿದೆ.

ಧ್ವಜಾರೋಹಣದೊಂದಿಗೆ ಆರಂಭವಾದ ಜಾತ್ರಾ ಸಡಗರವು ಜನವರಿ ೨೧ರವರೆಗೆ ಮುಂದುವರಿಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ಭಕ್ತರನ್ನು ಮುದಗೊಳಿಸಲಿವೆ.

ಜಾತ್ರೋತ್ಸವ ಸಡಗರದ ವಿವಿಧ ಸಂದರ್ಭದ ಚಿತ್ರ ಹಾಗೂ ವಿಡಿಯೋಗಳು ಇಲ್ಲಿವೆ. (ಚಿತ್ರ, ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್‌ ಗ್ರೂಪ್)




 

Saturday, January 10, 2026

ನಿಮ್ಮ ಆರೋಗ್ಯದ ಬಗ್ಗೆ ನಿಮಗೆ ಕಾಳಜಿ ಇದೆಯೇ?

 ನಿಮ್ಮ ಆರೋಗ್ಯದ ಬಗ್ಗೆ ನಿಮಗೆ ಕಾಳಜಿ ಇದೆಯೇ?

ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇದ್ದಲ್ಲಿ ಈ ಕೆಳಗಿನ ಎರಡು ಅತ್ಯಪಯುಕ್ತ ವಿಡಿಯೋಗಳನ್ನು ನೀವು ಖಂಡಿತ ಪೂರ್ತಿಯಾಗಿ ವೀಕ್ಷಿಸುತ್ತೀರಿ ಮತ್ತು ನಿಮ್ಮ ಬಂಧು ಮಿತ್ರರಿಗೆ ಇವುಗಳನ್ನು ಕಳುಹಿಸಿಕೊಡುತ್ತೀರಿ.

ಇವು ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ , ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ʼಫೂಟ್‌ ಪಲ್ಸ್‌ʼ ಥೆರಪಿ ಶಿಬಿರದ ಸಂದರ್ಭದಲ್ಲಿ ನಡೆದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಆರೋಗ್ಯ ಸಂಪನ್ಮೂಲ ವ್ಯಕ್ತಿ ಡಾ. ರತ್ನಾಕರ ಶೆಟ್ಟಿ ಅವರು ಆಡಿದ ಮಾತುಗಳ ವಿಡಿಯೋಗಳು.

ಕೆಳಗೆ ಕ್ಲಿಕ್‌ ಮಾಡಿ ನೋಡಿ. ನಿಮ್ಮ ಬಂಧು ಮಿತ್ರರಿಗೂ ಕಳುಹಿಸಿಕೊಡಿ.


Friday, January 9, 2026

ಆರೋಗ್ಯ ರಕ್ಷಣೆ ಏಕೆ ಮುಖ್ಯ?

 ಆರೋಗ್ಯ ರಕ್ಷಣೆ ಏಕೆ ಮುಖ್ಯ?

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ದೇವಾಲಯದ ಆಡಳಿತ ಮಂಡಳಿ ಮತ್ತು ಕಂಪಾನಿಯೋ ಸಹಯೋಗದಲ್ಲಿ ನಡೆಯುತ್ತಿರುವ ಉಚಿತ ಆಕ್ಯೂ ಪ್ಲಸ್‌ ಥೆರೆಪಿ ಶಿಬಿರದಲ್ಲಿ ೨೦೨೬ ಜನವರಿ ೯ರ ಶುಕ್ರವಾರ ಒಂದು ವಿಶೇಷ ಕಾರ್ಯಕ್ರಮ.

ಆರೋಗ್ಯ ತಜ್ಞ ಹಾಗೂ ಖ್ಯಾತ ಟಿವಿ ಶೋ ಸಂಪನ್ಮೂಲ ವ್ಯಕ್ತಿ ಶ್ರೀ ರತ್ನಾಕರ ಶೆಟ್ಟಿ ಅವರಿಂದ ಆರೋಗ್ಯ ಜಾಗೃತಿ ಕಾರ್ಯಕ್ರಮ. ಆರೋಗ್ಯ ರಕ್ಷಣೆಯ ಸೂತ್ರಗಳನ್ನು ಅತ್ಯಂತ ಸರಳವಾಗಿ, ಮನ ಮುಟ್ಟುವಂತೆ ನಿರರ್ಗಳವಾಗಿ ವಿವರಿಸಿದ ಅವರು ಆರೋಗ್ಯ ಕಾಪಾಡಿಕೊಳ್ಳುವಿಕೆಯ ಮಹತ್ವವನ್ನು ಒತ್ತಿ ಹೇಳಿದರು.

ಶ್ರೀ ಬಾಲಾಜಿ ಮಹಾಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಎನ್.‌ ಚೌಡರೆಡ್ಡಿ, ಉಪಾಧ್ಯಕ್ಷ ಶಿವಪ್ಪ ಶಾಂತಪ್ಪನವರ, ಕಾರ್ಯದರ್ಶಿ ರಾಜೇಶ ಹೆಗಡೆ ಮತ್ತಿತರರು ಹಾಜರಿದ್ದರು. ಕಂಪಾನಿಯೋ ಪ್ರತಿನಿಧಿ ಕಾರ್ತಿಕ್‌ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಬಳಿಕ ಕಂಪಾನಿಯೋ ಕಾರ್ಯಕರ್ತೆ ಪ್ರಫುಲ್ಲ ಹಾಗೂ ಕಾರ್ತಿಕ್‌ ದೇವಾಡಿಗ ಶಿಬಿರವನ್ನು ಮುಂದುವರೆಸಿದರು.

ಈ ಸಂದರ್ಭದ ಕೆಲವು ಫೊಟೋಗಳು ಹಾಗೂ ವಿಡಿಯೋಗಳು ಇಲ್ಲಿವೆ. ಶ್ರೀ ರತ್ನಾಕರ ಶೆಟ್ಟಿ ಅವರ ಮಾತುಗಳ ಇನ್ನಷ್ಟು ವಿಡಿಯೋ ಮುಂದಿನ ದಿನಗಳಲ್ಲಿ ಇಲ್ಲಿ ಮೂಡಿ ಬರಲಿದೆ.

Wednesday, January 7, 2026

ಮೊಣಕಾಲು ಅಥವಾ ಮಂಡಿನೋವು ಬರುವುದು ಏಕೆ?

 ಮೊಣಕಾಲು ಅಥವಾ ಮಂಡಿನೋವು ಬರುವುದು ಏಕೆ?

ನೆಲದಲ್ಲಿ ಅಥವಾ ಕೆಳಗೆ ಕುಳಿತುಕೊಳ್ಳುವ ಅಭ್ಯಾಸವನ್ನು ಕೈಬಿಟ್ಟದ್ದೇ ಮೊಣಕಾಲು  ಅಥವಾ ಮಂಡಿ ನೋವು ಸೇರಿದಂತೆ ನಮ್ಮ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣ. ಅದರಲ್ಲೂ ಬಸ್ಕಿ ತೆಗೆಯುವುದು, ಕೂತು-ಏಳುವ ಅಭ್ಯಾಸ ಕಡಿಮೆ ಮಾಡಿಕೊಂಡದ್ದು ಇತ್ಯಾದಿ ಕೂಡಾ ನರಸಂಬಂಧಿ ಸಮಸ್ಯೆಗಳಿಗೆ ಮೂಲ

ಮಹಿಳೆಯರು ಹಿಂದೆ ನೆಲದಲ್ಲಿ ಕುಳಿತೇ ಅಡುಗೆ ಮಾಡುತ್ತಿದ್ದರು. ಈಗ ಅಡುಗೆ ಮನೆಯ ವಿನ್ಯಾಸವೇ ಬದಲಿಯಾಗಿದೆ. ನಿಂತುಕೊಂಡು ಅಡುಗೆ ಮಾಡುವುದೇ ಆರಾಮ ಎಂಬ ಭಾವನೆ ಇದೆ. ಇದರೊಂದಿಗೆ ಅತ್ತಿತ್ತ ಓಡಾಡುವ ಅಭ್ಯಾಸವೂ ಕಡಿಮೆ.

ಮನೆಯ ಹೊರಗೆ ಬಿಡಿ ಮನೆಯ ಒಳಗೂ ಬರಿಗಾಲಲ್ಲಿ ನಡೆಯುವ ಕ್ರಮ ಕ್ರಮೇಣ ಮಾಯವಾಗುತ್ತಿದೆ. ನಡೆದಾಡುವುದೇ ಕಡಿಮೆ, ಕಡಿಮೆ ನಡೆದಾಡುವುದರ ಜೊತೆ ಮನೆಯ ಹೊರಗೆ, ಒಳಗೆ ಚಪ್ಪಲಿಗೆ ಮುಕ್ತ ಪ್ರವೇಶ. ಪರಿಣಾಮ ಪಾದಗಳಿಗೆ ಭೂಮಿಯ ಸ್ಪರ್ಶವೇ ಇಲ್ಲ.

ಇದರಿಂದ ಆಗುವ ದೊಡ್ಡ ನಷ್ಟ- ಭೂಮಿಯ ಅಯಸ್ಕಾಂತ ಶಕ್ತಿಯನ್ನು ಸಂಪೂರ್ಣವಾಗಿ ಕಳೆದುಕೊಳ್ಳುವಿಕೆ. ಈ ಅಯಸ್ಕಾಂತ ಶಕ್ತಿ ಅಥವಾ ಮ್ಯಾಗ್ನೆಟ್‌ ಪವರ್‌ ದೇಹ ಸ್ವಾಸ್ಥ್ಯಕ್ಕೆ ಬಲುಮುಖ್ಯ.

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸೇವಾ ಸಮಿತಿ ಮತ್ತು ಕಂಪಾನಿಯೋ ಸಂಸ್ಥೆಯ ಸಹಯೋಗದಲ್ಲಿ ನಡೆಯುತ್ತಿರುವ ʼಫೂಟ್‌ ಪಲ್ಸ್‌ʼ ಥೆರೆಪಿ ಶಿಬಿರದ ಸಂದರ್ಭದಲ್ಲಿ ಥೆರೆಪಿ ತಜ್ಞ ಕಾರ್ತಿಕ್‌ ಹೇಳಿದ ಸೂತ್ರಗಳಲ್ಲಿ ಇವೂ ಸೇರಿವೆ.

ಅವರ ಮಾತುಗಳ ವಿಡಿಯೋ ಇಲ್ಲಿದೆ. ಚಿತ್ರ ಕ್ಲಿಕ್ಮಾಡಿ ನೋಡಿ. Youtube Video link: https://youtu.be/TlSSjnHtgJA

ರಂಗೋಲಿ ಸ್ಪರ್ಧೆ

ಹೇಳಬೇಕಾದ ಇನ್ನೊಂದು ಸುದ್ದಿ ಇಲ್ಲಿದೆ. ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಜನವರಿ ೧೫ರಂದು ಬರಲಿರುವ ಮಕರ ಸಂಕ್ರಾಂತಿಯ ಪ್ರಯುಕ್ತ ಮಹಿಳೆಯರಿಗೆ ʼರಂಗೋಲಿʼ ಸ್ಪರ್ಧೆಯನ್ನು ೨೦೨೫ ಜನವರಿ ೧೧ರ ಭಾನುವಾರ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮ ಬೆಳಗ್ಗೆ ೧೦.೩೦ರಿಂದ ೧೨ರ ನಡುವಣ ಅವಧಿಯಲ್ಲಿ ನಡೆಯಲಿದೆ. ಪಾಲ್ಗೊಳ್ಳಬಯಸುವವರು ಮಮತಾ (೮೮೬೭೯೬೭೮೮೮) ಅಥವಾ ಸ್ವಾತಿ (೮೧೦೫೬೮೫೮೯೯) ಅವರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.


ಅಂಗಾರಕ ಸಂಕಷ್ಟಿ ಪೂಜಾ

 ಅಂಗಾರಕ ಸಂಕಷ್ಟಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಜನವರಿ ೬ರ ಮಂಗಳವಾರ ಅಂಗಾರಕ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಭಕ್ತರು ವಿಘ್ನೇಶ್ವರನಿಗೆ ಕಡುಬಿನ ಹಾರದ ಸೇವೆಯನ್ನೂ ಸಲ್ಲಿಸಿದರು. ಭಕ್ತರು ಅಪಾರ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದ ಕೆಲವು ಚಿತ್ರಗಳು, ವಿಡಿಯೋ ಇಲ್ಲಿದೆ. ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ ಅಥವಾ ಯೂ ಟ್ಯೂಬ್‌ ಲಿಂಕ್‌ ಕ್ಲಿಕ್‌ ಮಾಡಿರಿ: https://youtu.be/yzDZdbkfa58



Monday, January 5, 2026

ಫೂಟ್‌ ಪಲ್ಸ್‌ ಥೆರೆಪಿ: ಏನೆಲ್ಲ ಅನುಕೂಲ ಉಂಟು?

 ಫೂಟ್‌ ಪಲ್ಸ್‌ ಥೆರೆಪಿ: ಏನೆಲ್ಲ ಅನುಕೂಲ ಉಂಟು?

ಬೆಂಗಳೂರು ರಾಮಕೃಷ್ಣ ಹೆಗಡೆ ನಗರ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಉಚಿತ ಫುಟ್‌ ಪಲ್ಸ್‌ ಥೆರೆಪಿ ಶಿಬಿರವು ೨೦೨೬ ಜನವರಿ ೩ರಿಂದ ಆರಂಭಗೊಂಡಿದೆ.

ಪ್ರತಿದಿನ ಬೆಳಗ್ಗೆ ೯.೩೦ಕ್ಕೆ ಆರಂಭವಾಗಿ ಸಂಜೆ ೫ ಗಂಟೆಯವರೆಗೆ ನಡೆಯುವ ಈ ಶಿಬಿರವು ಜನವರಿ ೧೨ರವರೆಗೂ ನಡೆಯಲಿದೆ.


ಪ್ರತಿದಿನ ೩೦ ನಿಮಿಷಗಳ ಅವಧಿಯ ಚಿಕಿತ್ಸೆ ಪಡೆಯುವುದರಿಂದ ರಕ್ತ ಪರಿಚಲನೆ, ಮಾಂಸಖಂಡಗಳ ಸೆಳೆತ ಮತ್ತು ನರಗಳ ಯಾವುದೇ ಸರಳ ಮತ್ತು ದೀರ್ಘಕಾಲದ ಸಮಸ್ಯೆಗಳಿಗೆ ಔಷಧ ರಹಿತ ಹಾಗೂ ಅಡ್ಡ ಪರಿಣಾಮ ಇಲ್ಲದ ಪರಿಹಾರ ಲಭಿಸುತ್ತದೆ.

ಮಧುಮೇಹ, ಮಧುಮೇಹದಿಂದ ಬರುವ ಪಾದ ಉರಿಯೂತ, ಸಂಧಿವಾತ, ಕುತ್ತಿಗೆ ನೋವು ಇತ್ಯಾದಿ ಸಮಸ್ಯೆಗಳಿಗೂ ಈ ಚಿಕಿತ್ಸೆಯಲ್ಲಿ ಪರಿಹಾರ ಲಭ್ಯವಿದೆ. ಬಹುಮುಖ್ಯವಾಗಿ ಫಿಸಿಯೋಥೆರೆಪಿ ಅಗತ್ಯ ಉಳ್ಳವರಿಗೆ ಇದು ಅತ್ಯುತ್ತಮ ಎನ್ನುತ್ತಾರೆ ಈ ಚಿಕಿತ್ಸಾ ತಜ್ಞ ಕಾರ್ತಿಕ್.‌

ಚಿಕಿತ್ಸೆ ಬಗ್ಗೆ ಅವರೇನು ಹೇಳುತ್ತಾರೆ ? ಇಲ್ಲಿ 👇 ನೋಡಿ.


Sunday, January 4, 2026

ಭಾರತಕ್ಕೆ ಮರಳಿತು ಬುದ್ಧನ ಅವಶೇಷ..

 ಭಾರತಕ್ಕೆ ಮರಳಿತು ಬುದ್ಧನ ಅವಶೇಷ..

ತಮಾನಕ್ಕೂ ಅಧಿಕ ಕಾಲದ ಕಾಯುವಿಕೆಯ ನಂತರ, ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳು (Piprahwa Relics) ಭಾರತಕ್ಕೆ ಮರಳಿವೆ.

ಈ ಕ್ಷಣ ಭಾರತೀಯರೆಲ್ಲರಿಗೂ ಹೆಮ್ಮೆಯ, ಭಕ್ತಿಯ ಹಾಗೂ ಸಾಂಸ್ಕೃತಿಕ ಭಾವೈಕ್ಯತೆಯ ಕ್ಷಣ. ದೆಹಲಿಯಲ್ಲಿ ೨೦೨೬ ಜನವರಿ ೩ರ ಶನಿವಾರ ನಡೆದ ಕಾರ್ಯಕ್ರಮದ ಪ್ರಮುಖ ಹೈಲೈಟ್ಸ್ ಇಲ್ಲಿದೆ:

  • ಭವ್ಯ ಉದ್ಘಾಟನೆ: ನವದೆಹಲಿಯ ರೈ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು "ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್" ಎಂಬ ಶೀರ್ಷಿಕೆಯಡಿ ಆಯೋಜಿಸಲಾದ ಪವಿತ್ರ ಪಿಪ್ರಹ್ವಾ ಅವಶೇಷಗಳ ಬೃಹತ್ ಅಂತರರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು.
  • ಹೆಮ್ಮೆಯ ನುಡಿಗಳು: ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, "ಸುಮಾರು 125 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಅದರ ಸಾಂಸ್ಕೃತಿಕ ಶ್ರೀಮಂತಿಕೆ ಮತ್ತೆ ತನ್ನ ತಾಯ್ನಾಡಿಗೆ ಮರಳಿದೆ," ಎಂದು ಸಂತಸ ವ್ಯಕ್ತಪಡಿಸಿದರು.
  • ಭಾರತದ ಅಸ್ಮಿತೆ: ಈ ಅವಶೇಷಗಳ ಆಗಮನವು ಕೇವಲ ಇತಿಹಾಸದ ಮರುಕಳಿಕೆಯಷ್ಟೇ ಅಲ್ಲ, ಬದಲಿಗೆ ಭಗವಾನ್ ಬುದ್ಧನ ಶಾಂತಿ ಮತ್ತು ಜ್ಞಾನದ ಸಂದೇಶವನ್ನು ಜಗತ್ತಿಗೆ ಸಾರುವ ಭಾರತದ ಸಾಂಸ್ಕೃತಿಕ ಶಕ್ತಿಯ ಸಂಕೇತ. ಈ ಸಂದರ್ಭದ ವಿಡಿಯೋ ಇಲ್ಲಿದೆ.

Advertisement