Wednesday, June 10, 2026

ಇಂದಿನ ಇತಿಹಾಸ History Today ಜೂನ್ 10

 ಇಂದಿನ ಇತಿಹಾಸ History Today ಜೂನ್ 10

2026: ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಈದಿನ (2026 ಜೂನ್ 10ರ ಬುಧವಾರ) ಭಾರತದ ಅತಿ ದೀರ್ಘಕಾಲ ಸತತವಾಗಿ ಚುನಾಯಿತರಾದ ಪ್ರಧಾನಿ ಎಂಬ ಹೊಸ ರಾಜಕೀಯ ಮೈಲಿಗಲ್ಲನ್ನು ಸ್ಥಾಪಿಸಿದರು. ಈ ಮೂಲಕ ಅವರು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದರು. ಮೇ 26, 2014 ರಂದು ಮೊದಲ ಬಾರಿಗೆ ಅಧಿಕಾರ ಸ್ವೀಕರಿಸಿದ ಮೋದಿಯವರು, ಜೂನ್ 10 ರಂದು ಪ್ರಧಾನಿಯಾಗಿ ಆ ಹುದ್ದೆಯಲ್ಲಿಯೇ ಸತತವಾಗಿ ಮುಂದುವರೆದು 4,399 ದಿನಕ್ಕೆ ಕಾಲಿರಿಸಿದರು. ಈ ಸಾಧನೆಯು, ಚುನಾವಣೆಗಳ ಮೂಲಕ ಆಯ್ಕೆಯಾದ ನಂತರ ಜವಾಹರಲಾಲ್ ನೆಹರೂ ಅವರು ಹೊಂದಿದ್ದ 4,398 ದಿನಗಳ ನಿರಂತರ ಅಧಿಕಾರದ ದಾಖಲೆಯನ್ನು ಮೀರಿಸಿತು. ಭಾರತದ ಮೊದಲ ಸಾರ್ವತ್ರಿಕ ಚುನಾವಣೆಗಳ ನಂತರ ಮೇ 13, 1952 ರಿಂದ ಮೇ 27, 1964 ರಂದು ತಮ್ಮ ನಿಧನದವರೆಗೆ ನೆಹರೂ ಅವರು ಸತತವಾಗಿ ಸೇವೆ ಸಲ್ಲಿಸಿದ್ದರು.

2020: ನವದೆಹಲಿ: ಭಾರತದಲ್ಲಿ ಕೊರೋನಾವೈರಸ್ ಪ್ರಕರಣಗಳ ಏರಿಕೆ ಪ್ರಮಾಣ ಪ್ರತಿದಿನ ಅಂದಾಜು ೧೦,೦೦೦ಕ್ಕೆ ಏರಿದ್ದರ ನಡುವೆಯೂ ಇದೇ ಮೊದಲ ಬಾರಿಗೆ ಗುಣಮುಖರಾದ ಕೋವಿಡ್-೧೯ ರೋಗಿಗಳ ಸಂಖ್ಯೆಯು ಸಕ್ರಿಯ ಪ್ರಕರಣಗಳನ್ನು ಮೀರಿಸಿದೆ. ಆರೋಗ್ಯ ಸಚಿವಾಲಯವು  ೨೦೨೦ ಜೂನ್ ೧೦ರ ಬುಧವಾರ ಬಿಡುಗಡೆ ಮಾಡಿದ ಅಂಕಿಸಂಖ್ಯೆಗಳಿಂದ ವಿಚಾರವು ಬೆಳಕಿಗೆ ಬಂದಿತು. ರೋಗ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಕೊರೋನಾವೈರಸ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ,೩೫,೨೦೫ಕ್ಕೆ ಏರಿದೆ. ಇದೇ ವೇಳೆಗೆ ಬುಧವಾರದ ಅಂಕಿಸಂಖ್ಯೆಯಂತೆ ಭಾರತದಲ್ಲಿರುವ ಸಕ್ರಿಯ ಕೋವಿಡ್-೧೯ ಪ್ರಕರಣಗಳ ಸಂಖ್ಯೆ  ,೩೩,೬೩೨. ಒಟ್ಟಾರೆ ಚೇತರಿಕೆ ಪ್ರಮಾಣ ಶೇಕಡಾ ೪೯. ಭಾರತದ ಒಟ್ಟು ಕೊರೋನಾವೈರಸ್ ಸೋಂಕಿತರ ಸಂಖ್ಯೆ ಬುಧವಾರ .೭೬ ಲಕ್ಷವನ್ನು ಮೀರಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ ,೫೦೦ನ್ನು  ದಾಟಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಕಾರ, ಈವರೆಗೆ ಕೊರೋನಾವೈರಸ್ ಪತ್ತೆ ಸಲುವಾಗಿ ೫೦ ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕಳೆದ ೨೪ ಗಂಟೆಗಳಲ್ಲಿ .೪೫ ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಒಟ್ಟು ೯೦,೦೦೦ ಪ್ರಕರಣಗಳೊಂದಿಗೆ ಮಹಾರಾಷ್ಟ್ರವು ಈಗಲೂ ದೇಶದ ಅತಿಬಾಧಿತ ರಾಜ್ಯವಾಗಿದೆ. ಕಳೆದ ೨೪ ಗಂಟೆಗಳಲ್ಲಿ ರಾಜ್ಯದಲ್ಲಿ ,೨೫೯ ಹೊಸ ಪ್ರಕರಣಗಳು ದಾಖಲಾದವು. ಆಶಾದಾಯಕ ವಿಚಾರವೇನೆಂದರೆ ಸುಮಾರು ಶೇಕಡಾ ೪೭ರಷ್ಟು ಕೋವಿಡ್ ರೋಗಿಗಳು ರಾಜ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಕೊರೋನಾಸೋಂಕಿನಿಂದ ಗುಣಮುಖರಾದವರು ಪಂಜಾಬಿನಲ್ಲಿದ್ದಾರೆ. ರಾಜ್ಯದಲ್ಲಿ ಶೇಕಡಾ ೮೦ರಷ್ಟು ಕೊರೋನಾವೈರಸ್ ರೋಗಿಗಳು ಗುಣಮುಖರಾಗಿದ್ದಾರೆ. ಪಂಜಾಬಿನಲ್ಲಿ ಪ್ರಸ್ತುತ ೪೯೭ ಸಕ್ರಿಯ ಪ್ರಕರಣಗಳಿದ್ದರೆ, ,೧೬೭ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2020: ನವದೆಹಲಿ: ಆಸ್ಪತ್ರೆಯ ಹಾಸಿಗೆಗಳನ್ನು ಹುಡುಕಲು ಓಡಾಡುವ ರೋಗಿಗಳಿಗೆ ಸಹಾಯ ಮಾಡುವ ಸಲುವಾಗಿ, ದೆಹಲಿಯ ಎಲ್ಲ ಆಸ್ಪತ್ರೆಗಳಲ್ಲಿ ಇರುವ ರೋಗಿಗಳು, ಹಾಸಿಗೆಗಳ ಲಭ್ಯತೆಯನ್ನು ಸೂಚಿಸುವ ಎಲೆಕ್ಟ್ರಾನಿಕ್ ಫಲPವನ್ನು ಆಸ್ಪತ್ರೆಗಳ ಪ್ರವೇಶದ್ವಾರದಲ್ಲಿ ಅಳವಡಿಸುವಂತೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ೨೦೨೦ ಜೂನ್ ೧೦ರ ಬುಧವಾರ ಆದೇಶ ನೀಡಿದರು. ನಿಟ್ಟಿನಲ್ಲಿ ಆಸ್ಪತ್ರೆಗಳಿಗೆ ಸೂಕ್ತ ಆದೇಶ ನೀಡುವಂತೆ ಬೈಜಾಲ್ ಅವರು ಈಗಾಗಲೇ ಮುಖ್ಯ ಕಾರ್ಯದರ್ಶಿ ವಿಜಯ್ ದೇವ್ ಅವರಿಗೆ ಸೂಚಿಸಿದರು. ಎಲೆಕ್ಟ್ರಾನಿಕ್ ಫಲಕಗಳ ಸಂಪರ್ಕವನ್ನು ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ಸ್ಥಾಪಿಸಲಾಗುವ ಕೇಂದ್ರ ನಿಯಂತ್ರಣ ಘಟಕಕ್ಕೆ ಒದಗಿಸುವಂತೆ ಕೂಡಾ ಲೆಫ್ಟಿನೆಂಟ್ ಗವರ್ನರ್ ಸೂಚಿಸಿದರು. ಸರ್ಕಾರವು ಹಿಂದೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ ಬಗ್ಗೆ ತಿಳಿಯಲು ಆಸ್ಪತ್ರೆಗಳಲ್ಲಿ ಎಲೆಕ್ಟ್ರಾನಿಕ್ ಫಲಕ ಅಳವಡಿಸುವುದರ ಜೊತೆಗೆ ಸರ್ಕಾರ ಸ್ಥಾಪಿಸಿದ ವೆಬ್ ಸೈಟ್ ಮತ್ತು ಆಪ್ಗಳನ್ನು ಬಳಸುವಂತೆ ಸಾರ್ವಜನಿಕರಿಗೆ ಸೂಚಿಸಿತ್ತು. ಆದರೆ ವೆಬ್ ಸೈಟ್ ಮತ್ತು ಆಪ್ಗಳಲ್ಲಿ ಹಾಸಿಗೆ ಲಭ್ಯತೆಯ ಮಾಹಿತಿ ಇದ್ದರೂ, ಆಸ್ಪತ್ರೆಗೆ ಹೋದಾಗಿ ಹಾಸಿಗೆ ಇಲ್ಲ ಎಂಬುದಾಗಿ ವಾಪಸ್ ಕಳುಹಿಸಲಾಗುತ್ತಿದೆ ಎಂಬ ದೂರುಗಳು ಬಂದಿದ್ದವು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2020: ಬೀಜಿಂಗ್:  ರಾಜತಾಂತ್ರಿಕರು ಮತ್ತು ಸೇನಾ ಅಧಿಕಾರಿಗಳ ನಡುವಣ ಮಾತುಕತೆಯ ಬಳಿಕ ಉಭಯ ದೇಶಗಳೂ ಪರಿಸ್ಥಿತಿ ಶಮನಕ್ಕೆ ಯತ್ನಿಸುತ್ತಿವೆ ಎಂದು ಚೀನಾ ೨೦೨೦ ಜೂನ್ ೧೦ರ ಬುಧವಾರ ಹೇಳಿತು. ಆದರೆ ಲಡಾಖ್ ವಾಸ್ತವಿಕ ನಿಯಂತ್ರಣ ರೇಖೆಯಿಂದ ಹಿಂದಕ್ಕೆ ತೆರಳುತ್ತಿರುವ ಉಭಯ ದೇಶಗಳ ಪಡೆಗಳ ವಿವರ ನೀಡಲು ಅದು ನಿರಾಕರಿಸಿತು. ಬುಧವಾರ ಇನ್ನೊಂದು ಸುತ್ತಿನ ಮಾತುಕತೆ ನಡೆಯುವುದಕ್ಕೆ ಮುಂಚಿತವಾಗಿ ಗಡಿಬಿಕ್ಕಟ್ಟನ್ನು ಕೊನೆಗೊಳಿಸುವ ಉದ್ದೇಶದಿಂದ ಉಭಯ ದೇಶಗಳ ಸೇನೆಗಳು ಪೂರ್ವ ಲಡಾಖ್ನಿಂದ ಸೀಮಿತ ಪ್ರಮಾಣದಲ್ಲಿ ಹಿಂದಕ್ಕೆ ಹೊರಟಿವೆ ಎಂಬುದಾಗಿ ಭಾರತೀಯ ಮಾಧ್ಯಮಗಳಲ್ಲಿ ಬಂದ ವರದಿಗಳಿಗೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನಿಯಿಂಗ್ ಅವರು ಪ್ರತಿಕ್ರಿಯಿಸಿದರು. ಉಭಯ ದೇಶಗಳ ಸೇನೆಗಳು ಹಿಂದಿನ ಸ್ಥಳಗಳಿಂದ ಹಿಂದಕ್ಕೆ ಸಾಗುತ್ತಿವೆ ಎಂಬ ವರದಿಗಳ ಬಗ್ಗೆ ಪ್ರಶ್ನಿಸಿದಾಗಗಡಿಯುದ್ದಕ್ಕೂ ಉದ್ವಿಗ್ನತೆ ಶಮನಕ್ಕೆ ಉಭಯ ಕಡೆಗಳೂ ಕ್ರಮಗಳನ್ನು ಕೈಗೊಳ್ಳುತ್ತಿವೆಎಂದಷ್ಟೇ ಹುವಾ ತಮ್ಮ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸಮಸ್ಯೆ ಇತ್ಯರ್ಥಕ್ಕಾಗಿ ಶನಿವಾರ ನಡೆದ ಭಾರತ ಮತ್ತು ಚೀನಾ ನಡುವಣ ಸೇನಾ ಮಾತುಕತೆಗಳನ್ನು ನಿರ್ದಿಷ್ಟವಾಗಿ ಆಕೆ ಉಲ್ಲೇಖಿಸಲಿಲ್ಲ. ಇತೀಚೆಗೆ ಚೀನಾ ಮತ್ತು ಭಾರತದ ರಾಜತಾಂತ್ರಿಕ ಮತ್ತು ಸೇನಾ ಮಟ್ಟದಲ್ಲಿ ಗಡಿಯಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಪರಿಣಾಮಕಾರಿ ಸಂಪರ್ಕ ಸಾಧಿಸಲಾಗಿದೆ ಮತ್ತು ಧನಾತ್ಮಕ ಸಹಮತಕ್ಕೆ ಬರಲಾಗಿದೆಎಂದು ಆಕೆ ನುಡಿದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2020: ಮುಂಬೈ: ಕೊರೋನಾವೈರಸ್ ಸಾಂಕ್ರಾಮಿಕದ ಪ್ರಾಥಮಿಕ ದಿನಗಳಲ್ಲಿ ಮುಂಬೈ ನಗರದಲ್ಲಿ ಕೋವಿಡ್ ಹಾಟ್ ಸ್ಪಾಟ್ ಆಗಿ ಪರಿವರ್ತನೆಗೊಂಡಿದ್ದ ಧಾರಾವಿ ಕೊಳಚೆಗೇರಿಯು ದಿನದಿಂದ ದಿನಕ್ಕೆ ಕಡಿಮೆ ಸೋಂಕಿನ ಪ್ರಕರಣಗಳನ್ನು ಕಾಣುತ್ತಿದೆ. ದೈನಂದಿನ ಸರಾಸರಿ ಸೋಂಕು ಪ್ರಕರಣಗಳು ಇಳಿಮುಖವಾಗುತ್ತಿವೆ. ಸೋಂಕು ನಿಯಂತ್ರಣಕ್ಕೆ ಧಾರಾವಿ ದಾರಿ ತೋರಿಸಿದೆ. ಏಷ್ಯಾದ ಅತಿದೊಡ್ಡ ಕೊಳಚೆಗೇರಿ ಆಗಿರುವ ಧಾರಾವಿಯಲ್ಲಿ ಜೂನ್ ಮೊದಲ ವಾರ ಕೊರೋನಾವೈರಸ್ ಸೋಂಕಿಗೆ ಒಬ್ಬನೇ ಒಬ್ಬ ವ್ಯಕ್ತಿ ಕೂಡಾ ಬಲಿಯಾಗಿಲ್ಲ. ಮೇ ತಿಂಗಳಲ್ಲಿ ಸರಾಸರಿ ೪೭ ಪ್ರಕರಣಗಳು ವರದಿಯಾಗಿದ್ದ ಧಾರಾವಿಯಲ್ಲಿ ಜೂನ್ ಹೊತ್ತಿಗೆ ಸೋಂಕಿನ ಪ್ರಕರಣಗಳ ಸಂಖ್ಯೆ ೨೭ಕ್ಕೆ ಇಳಿದಿತ್ತು. ಸೋಂಕು ದುಪ್ಪಟ್ಟಾಗುವ ಪ್ರಮಾಣ ೪೪ ದಿನಗಳಿಗೆ ಏರಿತ್ತು. ಪ್ರದೇಶದಲ್ಲಿ ಒಟ್ಟು ಕೊರೋನಾವೈರಸ್ ಪ್ರಕರಣಗಳಲ್ಲಿ ಶೇಕಡಾ ೫೦ರಷ್ಟು ಪ್ರಕರಣಗಳಲ್ಲಿ ರೋಗಿಗಳು ಚೇತರಿಸಿದ್ದಾರೆ. ಜೂನ್ ೮ರಂದು ಪ್ರದೇಶದಲ್ಲಿ ೧೨ ಹೊಸ ಪ್ರಕರಣಗಳು ದಾಖಲಾದವು ಮತ್ತು ಜೂನ್ ೭ರಂದು ೧೩ ಹೊಸ ಪ್ರಕರಣಗಳು ದೃಢಪಟ್ಟವು. ಆದಾಗ್ಯೂ, ಜೂನ್ ೯ರಂದು ಇಲ್ಲಿ ೨೬ ಹೊಸ ಪ್ರಕರಣಗಳು ಮತ್ತು ಸಾವುಗಳು ದಾಖಲಾದವು. ಮಹಾರಾಷ್ಟ್ರ ಸರ್ಕಾರದವೈರಸ್ಸನ್ನು ಬೆನ್ನಟ್ಟುವ ನೀತಿಯುಕೊರೋನಾವೈರಸ್ ವಿರುದ್ಧದ ಸಮರದಲ್ಲಿ ವಿಜಯಸಾಧನೆಗೆ ಕಾರಣವಾಗಿದೆ ಎಂದು ಧಾರಾವಿಯನ್ನೂ ಒಳಗೊಳ್ಳುವ ಬಿಎಂಸಿ ಜಿ ಉತ್ತರ ವಾರ್ಡಿನ ಅಸಿಸ್ಟೆಂಟ್ ಮುನಿಸಿಪಲ್ ಕಮೀಷನರ್ ಕಿರಣ್ ದಿಘಾವ್ಕರ್ ೨೦೨೦ ಜೂನ್ ೧೦ರ ಬುಧವಾರ ಹೇಳಿದರು. ತೀವ್ರ ಸ್ವರೂಪದ ಸಂಪರ್ಕ ಪತ್ತೆ, ಪ್ರತ್ಯೇಕವಾಸ ಮತ್ತು ಪರೀಕ್ಷೆಗಳು ಪಾಸಿಟಿವ್ ಪ್ರಕರಣಗಳ ಸಂಖ್ಯೆಯನ್ನು ಇಳಿಮುಖಗೊಳಿಸಲು ಮುಂಬೈಗೆ ನೆರವಾದವು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2020: ನವದೆಹಲಿ: ಪಾಲಿಶ್ ಮಾಡಿದ ವಜ್ರಗಳು, ಬೆಳ್ಳಿ ಚಿನ್ನಾಭರಣ ಮತ್ತು ಮುತ್ತು ಸೇರಿದಂತೆ ಸುಮಾರು ,೩೫೦ ಕೋಟಿ ರೂಪಾಯಿ ಮೌಲ್ಯದ ೧೦೮ ವಸ್ತುಗಳನ್ನು ನೀರವ್ ಮೋದಿ ಮತ್ತು ಮೆಹುಲ್ ಚೊಕ್ಸಿಗೆ ಸೇರಿದ ಹಾಂಕಾಂಗ್ ಗೋದಾಮಿನಿಂದ ಭಾರತಕ್ಕೆ ತರಲಾಗಿದೆ ಎಂದು ಜಾರಿ ನಿರ್ದೇಶನಾಲಯವು 2020 ಜೂನ್ 10ರ ಬುಧವಾರ ಪ್ರಕಟಿಸಿತು. ವಸ್ತುಗಳ ಮೌಲ್ಯ ಅಂದಾಜು ,೩೫೦ ಕೋಟಿ ರೂಪಾಯಿಗಳು ಎಂಬುದಾಗಿ ಘೋಷಿಸಲಾಗಿದೆ. ಪಾಲಿಶ್ ಮಾಡಿದ ವಜ್ರಗಳು, ಮುತ್ತುಗಳು, ಬೆಳ್ಳಿ ಚಿನ್ನಾಭರಣಗಳು ಇತ್ಯಾದಿ ಅಮೂಲ್ಯ ಸೊತ್ತುಗಳು ಇವುಗಳಲ್ಲಿ ಸೇರಿವೆ. ಇವುಗಳನ್ನು ಹಾಂಕಾಂಗಿನಲ್ಲಿ ಸಾಗಣೆ ಕಂಪೆನಿಯೊಂದರ ಗೋದಾಮಿನಲ್ಲಿ ಇಡಲಾಗಿತ್ತು ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದರು. ಸುಮಾರು ,೩೪೦ ಕಿ.ಗ್ರಾಂ ತೂಕದ ಸರಕನ್ನು ಬುಧವಾರ ಮುಂಬೈಗೆ ವಾಪಸ್ ತರಲಾಗಿದೆ ಎಂದು ಅಧಿಕಾರಿ ನುಡಿದರು. ನೀರವ್ ಮೋದಿ ಮತ್ತು ಮೆಹುಲ್ ಚೊಕ್ಸಿ ಭಾರತೀಯ ವ್ಯಾಪಾರೋದ್ಯಮಿಗಳಾಗಿದ್ದು, ಭಾರತೀಯ ಬ್ಯಾಂಕುಗಳಿಗೆ ಸಹಸ್ರಾರು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣಗಳಲ್ಲಿ ಅಧಿಕಾರಿಗಳಿಗೆ ಬೇಕಾಗಿದ್ದಾರೆ. ನೀರವ್ ಮೋದಿ ೨೩,೭೮೦ ಕೋಟಿ ರೂಪಾಯಿ ಮೊತ್ತದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ವಂಚನೆ ಪ್ರಕರಣದ ಮುಖ್ಯ ಆರೋಪಿಯಾಗಿದ್ದು ಕಳೆದ ವರ್ಷ ಮಾರ್ಚ್ನಿಂದೀಚೆಗೆ ಇಂಗ್ಲೆಂಡಿನಲ್ಲಿ ಸೆರೆವಾಸದಲ್ಲಿರುವ  ನೀರವ್ ಮೋದಿಯನ್ನು ಇಂಗ್ಲೆಂಡಿನಿಂದ ಹಸ್ತಾಂತರ ಮಾಡಿಕೊಳ್ಳಲು ಭಾರತವು ತೀವ್ರ ಪ್ರಯತ್ನ ನಡೆಸುತ್ತಿದೆ. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

 ಇಂದಿನ ಇತಿಹಾಸ  History Today ಜೂನ್  10  (2019+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-ಸಂಗ್ರಹ: ನೆತ್ರಕೆರೆ ಉದಯಶಂಕರ

Tuesday, June 9, 2026

ಭಾರತದ ಪರಮಾಣು ಕಾರ್ಯತಂತ್ರ ಬದಲು?

 ಭಾರತದ ಪರಮಾಣು ಕಾರ್ಯತಂತ್ರ ಬದಲು?

ಇದೇ ಮೊದಲು 12 ಪರಮಾಣು ಸಿಡಿತಲೆಗಳ ನಿಯೋಜನೆ

ಭಾರತದ ಪರಮಾಣು ಶಸ್ತ್ರಾಸ್ತ್ರ ನೀತಿಯಲ್ಲಿ ಒಂದು ದೊಡ್ಡ ಬದಲಾವಣೆ ಕಂಡುಬಂದಿದೆ. ಭಾರತವು ಮೊದಲ ಬಾರಿಗೆ 12 ಪರಮಾಣು ಸಿಡಿತಲೆಗಳನ್ನು (Nuclear Warheads) ಸಕ್ರಿಯವಾಗಿ ನಿಯೋಜಿಸಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI) ಬಿಡುಗಡೆ ಮಾಡಿರುವ ಇತ್ತೀಚಿನ ವರದಿ ತಿಳಿಸಿದೆ.

ಸಾಮಾನ್ಯವಾಗಿ ಭಾರತವು ತನ್ನ ಪರಮಾಣು ಸಿಡಿತಲೆಗಳನ್ನು ಮತ್ತು ಅವುಗಳನ್ನು ಉಡಾಯಿಸುವ ವ್ಯವಸ್ಥೆಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿಡುವ ನೀತಿಯನ್ನು ಅನುಸರಿಸುತ್ತಾ ಬಂದಿದೆ. ಆದರೆ, ಈ ಹೊಸ ಬೆಳವಣಿಗೆಯು ಆಯಕಟ್ಟಿನ ದೃಷ್ಟಿಯಿಂದ ಮಹತ್ವದ್ದಾಗಿದೆ.

ವರದಿಯ ಮುಖ್ಯಾಂಶಗಳು:

  • ಹೆಚ್ಚಿದ ಶಕ್ತಿ: 2026 ಜೂನ್ 8ರ ಸೋಮವಾರ ಬಿಡುಗಡೆಯಾದ 'SIPRI ಇಯರ್‌ಬುಕ್ 2026'ರ ಪ್ರಕಾರ, ಭಾರತವು ಈಗ ಒಟ್ಟು 190 ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ 10 ಹೆಚ್ಚಾಗಿದೆ.
  • ಪ್ರಥಮ ಬಾರಿಗೆ ನಿಯೋಜನೆ: ಒಟ್ಟು 190 ಶಸ್ತ್ರಾಸ್ತ್ರಗಳ ಪೈಕಿ, 12 ಸಿಡಿತಲೆಗಳನ್ನು ಸಕ್ರಿಯವಾಗಿ ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ. ಜಾಗತಿಕ ಶಸ್ತ್ರಾಸ್ತ್ರಗಳ ಮೇಲ್ವಿಚಾರಣಾ ಸಂಸ್ಥೆಯೊಂದು, ಭಾರತದ ಪರಮಾಣು ಅಸ್ತ್ರಗಳ ಒಂದು ಭಾಗವು ಕೇವಲ ಮೀಸಲು ಸಂಗ್ರಹವಾಗಿ ಉಳಿದಿಲ್ಲ, ಬದಲಿಗೆ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಗುರುತಿಸಿರುವುದು ಇದೇ ಮೊದಲು.
  • ನೀತಿಯಲ್ಲಿ ಬದಲಾವಣೆ?: "ಶಾಂತಿಕಾಲದಲ್ಲಿ ಭಾರತವು ತನ್ನ ಸಿಡಿತಲೆಗಳನ್ನು ಉಡಾವಣಾ ವಾಹಕಗಳಿಂದ ಬೇರ್ಪಡಿಸಿ ಸಂಗ್ರಹಿಸುತ್ತದೆ ಎಂದು ದೀರ್ಘಕಾಲದಿಂದ ಭಾವಿಸಲಾಗಿತ್ತು, ಆದರೆ, ಈಗ ಭಾರತವು 'ಕ್ಯಾನಿಸ್ಟರ್-ಲಾಂಚ್ಡ್' ಕ್ಷಿಪಣಿಗಳು ಮತ್ತು ಸಮುದ್ರ ಆಧಾರಿತ ರಕ್ಷಣಾ ಕಾರ್ಯಾಚರಣೆಗಳ ಮೇಲೆ ಹೆಚ್ಚು ಅವಲಂಬಿತವಾಗುತ್ತಿದ್ದು, ಇದು ಶಾಂತಿಕಾಲದಲ್ಲೂ ಸಿಡಿತಲೆಗಳನ್ನು ಉಡಾವಣಾ ವಾಹಕಗಳೊಂದಿಗೆ ಜೋಡಿಸುವತ್ತ ಬದಲಾಗುತ್ತಿರಬಹುದು ಎಂಬುದನ್ನು ಸೂಚಿಸುತ್ತದೆ ಎಂದು ವರದಿ ಹೇಳಿದೆ.
  • ಸಾಗರ ಬಲ: ವರದಿಯ ಪ್ರಕಾರ, 2027ರ ವೇಳೆಗೆ ಭಾರತವು ತನ್ನ ನಾಲ್ಕನೇ ಪರಮಾಣು ಚಾಲಿತ ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ನೌಕೆಯನ್ನು (SSBN) ಲೋಕಾರ್ಪಣೆ ಮಾಡಲಿದೆ.

ಭಾರತದ ನ್ಯೂಕ್ಲಿಯರ್ ಟ್ರೈಯಾಡ್ (Nuclear Triad)

ಭಾರತದ ಬಳಿ ಇರುವ ಈ 190 ಪರಮಾಣು ಶಸ್ತ್ರಾಸ್ತ್ರಗಳನ್ನು ವಾಯುಪಡೆ (ವಿಮಾನಗಳು), ಭೂಸೇನಾ ಕ್ಷಿಪಣಿಗಳು ಮತ್ತು ಜಲಾಂತರ್ಗಾಮಿ ನೌಕೆಗಳ (SSBNs) ಮೂಲಕ ಹರಡುವ ವ್ಯವಸ್ಥಿತ 'ನ್ಯೂಕ್ಲಿಯರ್ ಟ್ರೈಯಾಡ್'ಗೆ ಒಳಪಡಿಸಲಾಗಿದೆ.

ಗಮನಿಸಬೇಕಾದ ಅಂಶ: ಭಾರತವು ಪರಮಾಣು ಶಸ್ತ್ರಾಸ್ತ್ರಗಳ ಬಳಕೆಯ ವಿಷಯದಲ್ಲಿ 'ಮೊದಲು ಬಳಸುವುದಿಲ್ಲ' (No First Use) ಎಂಬ ಸ್ಪಷ್ಟ ನೀತಿಯನ್ನು ದಶಕಗಳಿಂದ ಅನುಸರಿಸುತ್ತಾ ಬಂದಿದೆ.

ಈ ವರದಿಯು ಭಾರತದ ರಕ್ಷಣಾ ಸಿದ್ಧತೆಯಲ್ಲಿನ ಹೊಸ ಆಯಾಮವನ್ನು ಜಗತ್ತಿನ ಮುಂದೆ ಇಟ್ಟಿದೆ.

Sunday, June 7, 2026

₹642 vs ₹2,411: ಜಾಗತಿಕ ಏರಿಳಿತದಲ್ಲೂ ಭಾರತದಲ್ಲಿ ಅಡುಗೆ ಅನಿಲ ಅಗ್ಗ ಏಕೆ?

 ₹642 vs ₹2,411: ಜಾಗತಿಕ ಏರಿಳಿತದಲ್ಲೂ ಭಾರತದಲ್ಲಿ ಅಡುಗೆ ಅನಿಲ ಅಗ್ಗ ಏಕೆ?

ಕೇಂದ್ರ ಸರ್ಕಾರವು ಅಡುಗೆ ಅನಿಲ ದರವನ್ನು ಮತ್ತೊಮ್ಮೆ ಏರಿಸಿದೆ. ಎಲ್‌ ಪಿಜಿ ಸಿಲಿಂಡರ್‌ ದರ ಮತ್ತೆ 29 ರೂಪಾಯಿಗಳಷ್ಟು ಏರಿದೆ. ಅಂದರೆ ದೆಹಲಿಯಲ್ಲಿ 14.2 ಕೆಜಿ ಎಲ್‌ ಪಿಜಿ ಸಿಲಿಂಡರ್‌ ದರ 913 ರೂಗಳಿಂದ 942ರೂಪಾಯಿಗೆ ಏರಿಕೆಯಾಗಿದೆ. ಕೇಂದ್ರದ ಈ ಕ್ರಮ ವಿರೋಧ ಪಕ್ಷಗಳ ಕೆಂಗಣ್ಣಿಗೂ ಸಹಜವಾಗಿಯೇ ಗುರಿಯಾಗಿದೆ. ಆದರೂ, ಜಾಗತಿಕ ಇಂಧನ ದರಗಳಿಗೆ ಹೋಲಿಸಿದರೆ ಭಾರತದಲ್ಲೇ ಅಡುಗೆ ಅನಿಲ ಅತ್ಯಂತ ಅಗ್ಗವಾಗಿದೆ. ಅದು ಹೇಗೆ ಎಂಬುದನ್ನು ಕೇರಳಂನ ʼಮಾತೃಭೂಮಿʼ ವಿವರಿಸಿದೆ.

ಜಾಗತಿಕವಾಗಿ ಇಂಧನ ದರಗಳು ಗಗನಕ್ಕೇರುತ್ತಿವೆ. ಇದಕ್ಕೆ ಪ್ರಮುಖ ಕಾರಣ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷಗಳು. ಇದರಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು ಅನಿಲದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಬೆಲೆಗಳು ಏರಿಕೆಯಾಗಿವೆ.  ಆದರೂ,
ಭಾರತದ ಅಡುಗೆಮನೆಗಳಲ್ಲಿನ ಎಲ್‌ಪಿಜಿ (LPG) ದರಗಳು ಏಕೆ ನಿಯಂತ್ರಣದಲ್ಲಿವೆ. ಇತರೆ ದೇಶಗಳಿಗೆ ಹೋಲಿಸಿದರೆ ಭಾರತದ ಗ್ರಾಹಕರು ಪಾವತಿಸುತ್ತಿರುವ ಬೆಲೆ ಅತ್ಯಂತ ಕಡಿಮೆ.

ವಾಸ್ತವಿಕ ಬೆಲೆ ವರ್ಸಸ್ ಗ್ರಾಹಕರು ಪಾವತಿಸುವ ಬೆಲೆ

ದೆಹಲಿಯಲ್ಲಿ ಈಗ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ₹913 ರಿಂದ ₹942 ಕ್ಕೆ ಏರಿಕೆಯಾಗಿದೆ. ಆದರೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಪ್ರಕಾರ, ಒಂದು ಸಿಲಿಂಡರನ್ನು ಗ್ರಾಹಕರ ಮನೆಗೆ ತಲುಪಿಸುವ ನಿಜವಾದ ವೆಚ್ಚವು ₹1,600 ಕ್ಕಿಂತ ಹೆಚ್ಚಿದೆ. ಅಂದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯ ಸಂಪೂರ್ಣ ಹೊರೆಯನ್ನು ಗ್ರಾಹಕರ ಮೇಲೆ ಹಾಕದೆ, ಸರ್ಕಾರ ಮತ್ತು ತೈಲ ಮಾರಾಟ ಕಂಪನಿಗಳು ಆ ಹೊರೆಯ ಬಹುಪಾಲನ್ನು ಭರಿಸುತ್ತಿವೆ.

ಉಜ್ವಲ ಫಲಾನುಭವಿಗಳಿಗೆ ವಿಶೇಷ ರಿಯಾಯಿತಿ

ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಫಲಾನುಭವಿಗಳಿಗೆ ಸರ್ಕಾರ ವಿಶೇಷ ಬೆಂಬಲ ನೀಡುತ್ತಿದೆ. ಪ್ರತಿ ವರ್ಷ ಮೊದಲ ನಾಲ್ಕು ರೀಫಿಲ್‌ಗಳ ಮೇಲೆ ₹300 ನೇರ ನಗದು ವರ್ಗಾವಣೆ (DBT) ಸೌಲಭ್ಯವಿರುವುದರಿಂದ, ಅರ್ಹ ಕುಟುಂಬಗಳು ಕೇವಲ ₹642 ಕ್ಕೆ ಸಿಲಿಂಡರ್ ಪಡೆಯುತ್ತಿದ್ದಾರೆ.

ಜಾಗತಿಕ ಹೋಲಿಕೆ: ಭಾರತದ ಸ್ಥಿತಿ ಏನು?

ಭಾರತದ ಎಲ್‌ಪಿಜಿ ದರಗಳು ನೆರೆಯ ದೇಶಗಳು ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಿಂತ ಎಷ್ಟು ಭಿನ್ನವಾಗಿವೆ ಎಂಬುದನ್ನು ಈ ಕೆಳಗಿನ ಕೋಷ್ಟಕದಲ್ಲಿ ಗಮನಿಸಬಹುದು:

ದೇಶ / ಮಾರುಕಟ್ಟೆ

14.2 ಕೆಜಿ ಸಿಲಿಂಡರ್ ಬೆಲೆ (₹)

 ಭಾರತದ ಉಜ್ವಲ ದರಕ್ಕೆ ಹೋಲಿಸಿದರೆ ವ್ಯತ್ಯಾಸ

ಭಾರತ (ಉಜ್ವಲ ಫಲಾನುಭವಿ)

642

--

ಪಾಕಿಸ್ತಾನ

1,046

~63% ಹೆಚ್ಚು

ನೇಪಾಳ

1,207

~88% ಹೆಚ್ಚು

ಬಾಂಗ್ಲಾದೇಶ

1,225

~91% ಹೆಚ್ಚು

ಶ್ರೀಲಂಕಾ

1,241

~93% ಹೆಚ್ಚು

ಅಮೆರಿಕ

1,755

~173% ಹೆಚ್ಚು

ಆಸ್ಟ್ರೇಲಿಯಾ

1,765

~175% ಹೆಚ್ಚು

ಕೆನಡಾ

2,411

~276% ಹೆಚ್ಚು

ಸರ್ಕಾರದ ರಕ್ಷಣಾ ಕವಚ

  • ಉಜ್ವಲ ಫಲಾನುಭವಿಗಳು: ಇವರು ಅಂತರಾಷ್ಟ್ರೀಯ ಮಟ್ಟದ ಬೆಲೆಗಿಂತ ಸುಮಾರು 60% ಕಡಿಮೆ ದರದಲ್ಲಿ ಅನಿಲವನ್ನು ಪಡೆಯುತ್ತಿದ್ದಾರೆ.
  • ಸಾಮಾನ್ಯ ಗ್ರಾಹಕರು: ಪಿಎಂಜಿಯುವೈ ವ್ಯಾಪ್ತಿಗೆ ಬಾರದ ಗ್ರಾಹಕರು ಕೂಡ ಮಾರುಕಟ್ಟೆಯ ನಿಜವಾದ ವೆಚ್ಚಕ್ಕಿಂತ ಸುಮಾರು 45% ಕಡಿಮೆ ಬೆಲೆಯನ್ನು ಪಾವತಿಸುತ್ತಿದ್ದಾರೆ.

ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ಸಾಗರ ಮಾರ್ಗಗಳಲ್ಲಿನ ಅನಿಶ್ಚಿತತೆಯು ಜಾಗತಿಕ ಇಂಧನ ಪೂರೈಕೆಯ ಮೇಲೆ ಭಾರಿ ಒತ್ತಡ ಹೇರುತ್ತಿದ್ದರೂ, ಭಾರತದ ಕೇಂದ್ರ ಸರ್ಕಾರವು ಸಬ್ಸಿಡಿ ಮತ್ತು ಬೆಲೆ ನಿಯಂತ್ರಣ ಕ್ರಮಗಳ ಮೂಲಕ ದೇಶದ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಬೀಳದಂತೆ ಸಮರ್ಥವಾಗಿ ರಕ್ಷಿಸುತ್ತಿದೆ ಎಂದು ʼಮಾತೃಭೂಮಿʼ ವರದಿ ತಿಳಿಸಿದೆ.

Saturday, June 6, 2026

ಬ್ರಹ್ಮಾವರದಲ್ಲಿ ವಿಶ್ವ ಪರಿಸರ ದಿನ

ಬ್ರಹ್ಮಾವರದಲ್ಲಿ ವಿಶ್ವ ಪರಿಸರ ದಿನ 

ಡುಪಿ ಜಿಲ್ಲೆಯ ಬ್ರಹ್ಮಾವರದ ಮಿನಿ ವಿಧಾನಸೌಧದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ೨೦೨೬ ಜೂನ್‌ -೫ರ ಶುಕ್ರವಾರ ಆಚರಿಸಲಾಯಿತು. ಬ್ರಹ್ಮಾವರ ಜಯಂಟ್ಸ್‌ ಗ್ರೂಪ್‌ ವತಿಯಿಂದ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಲಾಯಿತು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಶ್ರೀಮತಿ ಅನುಷಾ ಭಟ್‌ ನೆತ್ರಕೆರೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಪರಿಸರ ಸಂರಕ್ಷಣೆ ಮತ್ತು ಗಿಡ ನೆಡುವಿಕೆಯ ಮಹತ್ವವನ್ನು ವಿವರಿಸಿದರು. ಬ್ರಹ್ಮಾವರ ಉಪ ತಹಶೀಲ್ದಾರ್‌ ಶ್ರೀ ಅಶೋಕ ಎನ್‌ ಭಟ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರ ಹೇಗೆ ಮಹತ್ವ ಪೂರ್ಣ ಎಂದು ವಿವರಿಸಿದರು. ಈ ಸಂದರ್ಭದ ಚಿತ್ರಗಳು ಹಾಗೂ ಸ್ಥಳೀಯ PublicNext  ವೆಬ್‌ ಸೈಟ್‌ ಪುಟಗಳಲ್ಲಿ ಬಂದ ವರದಿ, ವಿಡಿಯೋ ಇಲ್ಲಿದೆ. 
ವರದಿಗಳ ಸಮೀಪ ನೋಟಕ್ಕೆ ಮೇಲಿನ ಬರಹ ಚಿತ್ರಗಳನ್ನು ಕ್ಲಿಕ್‌ ಮಾಡಿ. ಈ ಪರ್ಯಾಯ.ಕಾಮ್ ವೆಬ್‌ ಸೈಟಿನ ʼವಾಟ್‌-ಸುದ್ದಿʼ ಪುಟ ಕ್ಲಿಕ್‌ ಮಾಡಿ.

Advertisement