Monday, April 6, 2026

ಗಮಕ ಬಾಕ್ಸ್ ನೋಟೇಶನ್ ಸಿಸ್ಟಮ್‌ಗೆ ಮೋದಿ ಫಿದಾ!

 ಗಮಕ ಬಾಕ್ಸ್ ನೋಟೇಶನ್ ಸಿಸ್ಟಮ್‌ಗೆ ಮೋದಿ ಫಿದಾ!

ಚೆನ್ನೈ: ಬಿರುಸಿನ ಚುನಾವಣಾ ಪ್ರಚಾರದ ನಡುವೆಯೂ ಪ್ರಧಾನಿ ನರೇಂದ್ರ ಮೋದಿಯವರು ಚೆನ್ನೈಲ್ಲಿ ಭಾರತೀಯ ಸಂಸ್ಕೃತಿ ಮತ್ತು ಕಲೆಯ ಕಡೆಗೆ ತಮ್ಮ ಪ್ರೀತಿಯನ್ನು ಮೆರೆದಿದ್ದಾರೆ. ಇತ್ತೀಚೆಗೆ ಅವರು ಖ್ಯಾತ ಸಂಗೀತ ಸಂಯೋಜಕ ತಿರು ರಮೇಶ್ ವಿನಾಯಕಮ್ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿ, ಭಾರತೀಯ ಸಂಗೀತ ಜಗತ್ತಿನ ಹೊಸ ಆವಿಷ್ಕಾರವೊಂದನ್ನು ಕಣ್ತುಂಬಿಕೊಂಡರು.

ಭಾರತೀಯ ಸಂಗೀತಕ್ಕೆ ಜಾಗತಿಕ ಮನ್ನಣೆ: ಏನಿದು 'ಗಮಕ ಬಾಕ್ಸ್'?

ರಮೇಶ್ ವಿನಾಯಕಮ್ ಅವರು ತಮ್ಮ ಜೀವನವನ್ನೇ ಭಾರತೀಯ ಸಂಗೀತದ ಪ್ರಸಾರಕ್ಕಾಗಿ ಮುಡಿಪಾಗಿಟ್ಟವರು. ಅವರು ತಾವು ಅಭಿವೃದ್ಧಿಪಡಿಸಿರುವ 'ಗಮಕ ಬಾಕ್ಸ್ ನೋಟೇಶನ್ ಸಿಸ್ಟಮ್' (Gamaka Box Notation System) ಬಗ್ಗೆ ಪ್ರಧಾನಿಯವರಿಗೆ ವಿವರಿಸಿದರು.

  • ವಿಶೇಷತೆ: ಭಾರತೀಯ ಶಾಸ್ತ್ರೀಯ ಸಂಗೀತದ ಅವಿಭಾಜ್ಯ ಅಂಗವಾದ 'ಗಮಕ'ಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಸುಲಭವಾಗಿ ಅರ್ಥೈಸಲು ಈ ವ್ಯವಸ್ಥೆ ಸಹಕಾರಿ.
  • ಪ್ರಧಾನಿಯವರ ಮೆಚ್ಚುಗೆ: ಈ ಕುರಿತು ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿರುವ ಮೋದಿ, "ಇದು ನಮ್ಮ ಸಂಗೀತವನ್ನು ವಿಶ್ವದಾದ್ಯಂತ ಕೊಂಡೊಯ್ಯುವ ಒಂದು ನವೀನ ಮಾರ್ಗ" ಎಂದು ಶ್ಲಾಘಿಸಿದ್ದಾರೆ. 

"ಚುನಾವಣಾ ಪ್ರಚಾರದ ನಡುವೆ ರಮೇಶ್ ವಿನಾಯಕಮ್‌ ಜೀ ಮತ್ತು ಅವರ ಕುಟುಂಬವನ್ನು ಭೇಟಿಯಾದದ್ದು ಸಂತಸ ತಂದಿದೆ. ಭಾರತೀಯ ಸಂಗೀತವನ್ನು ಜಗತ್ತಿಗೆ ಪರಿಚಯಿಸಲು ಅವರು ಮಾಡುತ್ತಿರುವ ಕೆಲಸ ಅದ್ಭುತವಾಗಿದೆ," ಎಂದು ಪ್ರಧಾನಿ ಬಣ್ಣಿಸಿದ್ದಾರೆ. ☝ ವಿಡಿಯೋ ನೋಡಿ.

ನವೀನ ಆವಿಷ್ಕಾರಕ್ಕೆ ಪ್ರಧಾನಿ ಸಾಕ್ಷಿ

ರಮೇಶ್ ವಿನಾಯಕಮ್‌ ಅವರು ತಮ್ಮ ಸಂಶೋಧನೆಯ ಒಂದು ಸಣ್ಣ ಝಲಕ್ ಅನ್ನು ಪ್ರಧಾನಿಯವರಿಗೆ ಪ್ರದರ್ಶಿಸಿದರು. ಕೇವಲ ರಾಜಕೀಯ ಮಾತ್ರವಲ್ಲದೆ, ಕಲೆ ಮತ್ತು ತಂತ್ರಜ್ಞಾನದ ಸಮ್ಮಿಲನಕ್ಕೆ ಪ್ರಧಾನಿ ನೀಡುತ್ತಿರುವ ಪ್ರೋತ್ಸಾಹಕ್ಕೆ ಈಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಭಾರತೀಯ ಸಂಗೀತದ ಈ ಹೊಸ ಹೆಜ್ಜೆ ಮುಂದಿನ ದಿನಗಳಲ್ಲಿ ಜಾಗತಿಕ ವೇದಿಕೆಯಲ್ಲಿ ಹೇಗೆ ಸದ್ದು ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

 

Sunday, April 5, 2026

ಚೈತ್ರ ಮಾಸದ ಸಂಕಷ್ಟಿ ಪೂಜಾ

 ಚೈತ್ರ ಮಾಸದ ಸಂಕಷ್ಟಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಏಪ್ರಲ್‌ ೫ರ ಭಾನುವಾರ ಚೈತ್ರ ಮಾಸದ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಭಕ್ತರು ಭಜನಾ ಕೈಂಕರ್ಯದಲ್ಲೂ ಪಾಲ್ಗೊಂಡು ಶ್ರೀ ದೇವರ ಕೃಪಾಶೀರ್ವಾದಕ್ಕೆ ಪಾತ್ರರಾದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.

ಕೆಳಗಿನ ಚಿತ್ರವನ್ನು ಕ್ಲಿಕ್‌ ಮಾಡಿ ವಿಡಿಯೋ ನೋಡಬಹುದು.


Wednesday, April 1, 2026

ಚೈತ್ರ ಮಾಸದ ಸತ್ಯನಾರಾಯಣ ಪೂಜಾ

 ಚೈತ್ರ ಮಾಸದ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಏಪ್ರಿಲ್‌ ೧ರ ಬುಧವಾರ ಪರಾಭವ ಸಂವತ್ಸರದ ಚೈತ್ರ ಮಾಸದ ಶ್ರೀ ಸತ್ಯ ನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಭಾರೀ ಸಂಖ್ಯೆಯಲ್ಲಿ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಶ್ರೀ ಕೃಷ್ಣೋಜಿ ರಾವ್‌ ಮತ್ತು ಕುಟುಂಬದವರು ಅಲಂಕಾರ ಹಾಗೂ ಶ್ರೀ ಮಹೇಶ್‌ ಮತ್ತು ಕುಟುಂಬದವರು ಪ್ರಸಾದದ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.


Sunday, March 29, 2026

ಭಾರತೀಯ ಸಿಟಿಯಲ್ಲಿ ಲವ ಕುಶ ಕಾಳಗ

 ಭಾರತೀಯ ಸಿಟಿಯಲ್ಲಿ ಲವ ಕುಶ ಕಾಳಗ

ಮುಗಿಲೆತ್ತರಕ್ಕೆ ಚಾಚಿದ ಅಪಾರ್ಟ್‌ಮೆಂಟುಗಳು, ಬೃಹತ್‌ ಐಟಿ ಕಂಪೆನಿಗಳು. ಮಧ್ಯೆ ಮಧ್ಯೆ ಅಂಕುಡೊಂಕಿನ ಸಿಮೆಂಟ್‌ ರಸ್ತೆಗಳು. ಅವುಗಳ ಬದಿಯಲ್ಲಿ ಹಸಿರಿಗಾಗಿ ನೆಟ್ಟ ಗಿಡಗಳು. ಎಲ್ಲಿ ನೋಡಿದರೂ ಬಹುತೇಕ ಹಿಂದಿ ಭಾಷೆಯಲ್ಲಿ ಇಲ್ಲವೇ ಇಂಗ್ಲೀಷಿನಲ್ಲೇ ಮಾತನಾಡುವ ಮಂದಿ.

ಇದು ಬೆಂಗಳೂರು ರಾಮಕೃಷ್ಣ ಹೆಗಡೆ ನಗರ ಸಮೀಪದ ಭಾರತೀಯ ಸಿಟಿ.

೨೦೨೬ ಮಾರ್ಚ್‌ ೨೭ರ ರಾಮನವಮಿಯ ದಿನ. ಇಲ್ಲಿ ರಾಮೋತ್ಸವ ಸಡಗರ. ಭಜನೆ, ನೃತ್ಯ, ಹಾಡುಗಳ ಸಂಭ್ರಮ. ಇವೆಲ್ಲದರ ಮಧ್ಯೆ ಅಲ್ಲಿದ್ದ ಎಲ್ಲರನ್ನೂ ಸೂಜಿಗಲ್ಲಿನಂತೆ ಗಮನ ಸೆಳೆದದ್ದು, ಚೆಂಡೆ- ಮದ್ದಳೆಯ ಸದ್ದು, ಯಕ್ಷಗಾನದ ನೃತ್ಯ, ಭಾಗವತರ ಕಂಚಿನ ಕಂಠದ ಹಾಡುಗಳು.

ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ಅಭ್ಯಾಸ ನಡೆಸುತ್ತಿದ್ದ ಯಕ್ಷ ಕಲಾ ಕೌಸ್ತುಭ ತಂಡದ ಮಕ್ಕಳು, ಅವರ ಅಮ್ಮಂದಿರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಕುಣಿದು ಸಂಭ್ರಮದೊಂದಿಗೆ ಈ ಯಕ್ಷಗಾನ ಪ್ರದರ್ಶನ ನೀಡಿದವರು.

ಅವರು ಪ್ರದರ್ಶಿಸಿದ್ದು ರಾಮಾಯಣದ ಉತ್ತರ ಕಾಂಡದಲ್ಲಿ ಬರುವ ʼಲವ ಕುಶ ಕಾಳಗʼದ ಪ್ರಸಂಗ. ಈ ಪ್ರಸಂಗದ ವಿವರವನ್ನು ಸಂಘಟಕರ ಜೊತೆಗೆ ತಂಡದ ಸದಸ್ಯರೇ ಆದ ಶಿವಾಂಶ್‌ ಮತ್ತು ಉಮಾ ದೇವಿ ಎನ್.‌ ಅವರು ಹಿಂದಿ ಮತ್ತು ಇಂಗ್ಲಿಷಿನಲ್ಲಿ ವಿವರ ನೀಡಿದರು.

ʼಯಕ್ಷ ಕಲಾ ಕೌಸ್ತುಭʼದ ಯಕ್ಷಗುರು ಉಮೇಶ ರಾಜ್‌ ಮಂದಾರ್ತಿ ಅವರ ನಿರ್ದೇಶನದಲ್ಲಿ ಶ್ರೀರಾಮನಾಗಿ ಉಮಾದೇವಿ ಎನ್,
ಸೀತಾಮಾತೆಯಾಗಿ ಅರ್ಚನಾ ಬಂಗೇರ, ಲವಕುಮಾರನಾಗಿ ಆದ್ಯಾ ಶ್ರೀವಲ್ಲಿ, ಕುಶಕುಮಾರನಾಗಿ ಆದ್ಯ ಎಂ ಕಶ್ಯಪ್, ಶತ್ರುಘ್ನನಾಗಿ ಆದ್ಯ ಭಟ್  ಮತ್ತು ವಾಲ್ಮೀಕಿ ಮಹರ್ಷಿಯಾಗಿ ಪ್ರಣೀತಾ ರೈ ಮಿಂಚಿದರು.

ವೆಂಕಟೇಶ್ ಪ್ರಭು ಅವರು ಮದ್ದಳೆ,  ಸುಬ್ರಹ್ಮಣ್ಯ ಗಾಣಿಗ ಸಾಸ್ತಾನ ಚೆಂಡೆಯೊಂದಿಗೆ ಉಮೇಶರಾಜ್‌ ಅವರಿಗೆ ಸಾಥ್‌ ನೀಡಿದರು. ಚೌಕಿಯಲ್ಲಿ ಹಲವು ತಾಸುಗಳ ಮೊದಲೇ ಬಣ್ಣ ಹಚ್ಚಿಕೊಂಡು, ವೇಷಭೂಷಣ ಧರಿಸಿ ಸಿದ್ದರಾಗುವಲ್ಲಿ ಪ್ರಸನ್ನ ಮಯ್ಯ ಮತ್ತು ಉಮೇಶ ಮಂದಾರ್ತಿ ಸಹಕರಿಸಿದರು.

ಉಮೇಶ ರಾಜ್‌ ಮಂದಾರ್ತಿ ಅವರು ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರತಿ ಭಾನುವಾರ ಮಕ್ಕಳಿಗೆ ಯಕ್ಷಗಾನ ಹೇಳಿಕೊಡುತ್ತಿದ್ದಾರೆ.

ರಂಗಸ್ಥಳದ ಸಮೀಪ ʼಚೌಕಿʼಯಲ್ಲಿ ಮಕ್ಕಳು ವೇಷಭೂಷಣ ತೊಟ್ಟುಕೊಳ್ಳುತ್ತಿದ್ದ ಸಡಗರದ ಚಿತ್ರಗಳು, ಚೌಕಿ ಪೂಜೆಯ ವಿಡಿಯೋ ಸೇರಿದಂತೆ ʼಲವ ಕುಶ ಕಾಳಗʼದ ಎರಡು ಭಾಗಗಳು ಇಲ್ಲಿವೆ.

ಮೇಲಿನ ಮತ್ತು ಕೆಳಗಿನ ಚಿತ್ರಗಳನ್ನು ಕ್ಲಿಕ್‌ ಮಾಡುವ ಮೂಲಕ ಈ ಯಕ್ಷಗಾನ ಪ್ರಸಂಗವನ್ನು ಪೂರ್ತಿಯಾಗಿ ಇಲ್ಲಿ ವೀಕ್ಷಿಸಿ.

ಅಥವಾ ಈ ವೆಬ್‌ ಸೈಟಿನಲ್ಲಿ ಮೇಲಿರುವ ಯಕ್ಷಗಾನ/ತಾಳಮದ್ದಳೆ ಪುಟಕ್ಕೆ ಭೇಟಿ ಕೊಡಿ.

Friday, March 27, 2026

ಶ್ರೀರಾಮ ನವಮಿ

 ಶ್ರೀರಾಮ ನವಮಿ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಮಾರ್ಚ್‌ ೨೭ರ ಶುಕ್ರವಾರ ಶ್ರೀ ರಾಮ ನವಮಿಯನ್ನು ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಲಾಯಿತು.

ಶ್ರೀ ರಾಮ ಚಂದ್ರನಿಗೆ ವಿಶೇಷ ಪೂಜೆ, ಭಕ್ತರಿಗೆ ಪಾನಕ, ಕೋಸಂಬರಿ, ಮಜ್ಜಿಗೆ ನೀರಿನ ವಿತರಣೆ ನಡೆಯಿತು. ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.

ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ




ಇದನ್ನೂ ನೋಡಿರಿ:

Sunday, March 22, 2026

ಗೀತಾ ರಾಮಾಯಣ

 ಗೀತಾ ರಾಮಾಯಣ

ದು ಗೀತಾ ರಾಮಾಯಣದ ಒಂದು ದೃಶ್ಯ. ಬೆಂಗಳೂರಿನ ಯಕ್ಷ ಕಲಾ ಕೌಸ್ತುಭ ತಂಡದ ಮಕ್ಕಳು ಪ್ರದರ್ಶಿಸುತ್ತಿರುವುದು. ಇದು ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ದೇವಸ್ಥಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾಗಿನ ದೃಶ್ಯ. (ಸಮೀಪ ನೋಟಕ್ಕೆ ಮೇಲಿನ ಚಿತ್ರ ಕ್ಲಿಕ್‌ ಮಾಡಿ.)

ಅವರು ಅಭ್ಯಾಸ ಮಾಡುತ್ತಿದ್ದದು ಲವಕುಶ ಕಾಳಗದ ಒಂದು ದೃಶ್ಯ.

ಈ ಕಥೆ ಯಾವುದು, ಅದನ್ನು ಹೇಳುತ್ತಿರುವುದು ಏಕೆ? ಹೇಳುತ್ತಿರುವುದು ಯಾರು ಇವೆಲ್ಲ ಪ್ರಶ್ನೆಗಳಿಗೆ ಉತ್ತರ: ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರ ಸಮೀಪದ ಭಾರತೀಯ ಸಿಟಿಯ ನಿಕೂ ಹೋಮ್ಸ್‌ ನಲ್ಲಿ 2026 ಮಾರ್ಚ್‌ 27ರ ಸಂಜೆ 6.45 ಗಂಟೆಗೆ.

ಪೂರ್ತಿ ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.


ವೆಬ್‌ ಸೈಟಿನ ʼಯಕ್ಷಗಾನ ತಾಳಮದ್ದಳೆʼ ಪುಟಕ್ಕೆ ಭೇಟಿ ಕೊಡಿ

Saturday, March 21, 2026

ಯಕ್ಷರಂಗದ ಭೀಷ್ಮ, 'ದಶಾವತಾರಿ' ಸೂರಿಕುಮೇರು ಕೆ. ಗೋವಿಂದ ಭಟ್ ಇನ್ನಿಲ್ಲ

ಯಕ್ಷರಂಗದ ಭೀಷ್ಮ, 'ದಶಾವತಾರಿ' ಸೂರಿಕುಮೇರು ಕೆ. ಗೋವಿಂದ ಭಟ್ ಇನ್ನಿಲ್ಲ

ತೆಂಕುತಿಟ್ಟು ಯಕ್ಷಗಾನ ಲೋಕದ ಅಪ್ರತಿಮ ಮೇರು ಕಲಾವಿದ, 'ಕಲಾತಪಸ್ವಿ' ಎಂದೇ ಖ್ಯಾತರಾಗಿದ್ದ ಸೂರಿಕುಮೇರು ಕೆ. ಗೋವಿಂದ ಭಟ್ (90) ಅವರು 2026 ಮಾರ್ಚ್‌ 20 ಶುಕ್ರವಾರ ರಾತ್ರಿ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿರುವ ತಮ್ಮ ಪುತ್ರನ ನಿವಾಸದಲ್ಲಿ ದೈವಾಧೀನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಯಕ್ಷಗಾನದ ಒಂದು ಸುದೀರ್ಘ ಮತ್ತು ಸುವರ್ಣ ಯುಗಕ್ಕೆ ತೆರೆ ಎಳೆದಿದ್ದಾರೆ.

ನಡೆದಾಡುವ ವಿಶ್ವಕೋಶದ ಸಾಧನೆಯ ಹಾದಿ

ಬಡತನದ ಬೇಗೆಯಲ್ಲೂ ಕಲೆಯನ್ನು ಅಪ್ಪಿಕೊಂಡ ಭಟ್ಟರು, ಯಕ್ಷಗಾನದ 'ನಡೆದಾಡುವ ವಿಶ್ವಕೋಶ' ಎಂದೇ ಪ್ರಸಿದ್ಧರು.

  • ಹುಟ್ಟು:
    1940ರ ಮಾರ್ಚ್ 22ರಂದು ಬಂಟ್ವಾಳ ತಾಲೂಕಿನ ಕೋಡಪದವು ಸಮೀಪದ ಕುಕ್ಕೆಮನೆ ಕುಟುಂಬದಲ್ಲಿ ಜನನ.
  • ಆರಂಭ: ಕಡುಬಡತನದ ಬದುಕು. 1951ರಲ್ಲಿ ಧರ್ಮಸ್ಥಳ ಮೇಳದ 'ಬಾಲಗೋಪಾಲ' ವೇಷದ ಮೂಲಕ ಕಲಾ ಪಯಣ ಆರಂಭ.
  • ದಾಖಲೆ: ಒಂದೇ ಮೇಳದಲ್ಲಿ (ಧರ್ಮಸ್ಥಳ) ಸತತ 54 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಪರೂಪದ ದಾಖಲೆ ಇವರದ್ದು.
  • ಪರಕಾಯ ಪ್ರವೇಶ: ರಕ್ತಬೀಜಾಸುರ, ಇಂದ್ರಜಿತು, ಭೀಷ್ಮ, ಕೌರವನಂತಹ ಪಾತ್ರಗಳಿಗೆ ಇವರು ಜೀವ ತುಂಬುತ್ತಿದ್ದ ರೀತಿ ಅದ್ಭುತ.

ಸಾಹಿತ್ಯ ಮತ್ತು ಕಲಾ ಸೇವೆ

ಕೇವಲ ನಟನೆಯಷ್ಟೇ ಅಲ್ಲದೆ, ಇವರು ಒಬ್ಬ ಶ್ರೇಷ್ಠ ಅರ್ಥಧಾರಿ ಹಾಗೂ ಪ್ರಸಂಗಕರ್ತರೂ ಹೌದು.

  • ಕೃತಿಗಳು: 'ಮಣಿಮೇಖನೆ', 'ಕಾವೇರಿ ಮಹಾತ್ಮೆ', 'ಮಹಾವೀರ ಸಾಮ್ರಾಟ ಅಶೋಕ' ಮುಂತಾದ ಪ್ರಸಂಗಗಳನ್ನು ರಚಿಸಿದ್ದಾರೆ.
  • ಪ್ರಶಸ್ತಿಗಳ ಗರಿ: 2008ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2016ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ ಸೇರಿದಂತೆ ಹತ್ತು ಹಲವು ಗೌರವಗಳು ಇವರಿಗೆ ಲಭಿಸಿವೆ.

ಹುಟ್ಟೂರು 

ಗೋವಿಂದ ಭಟ್ಟರ ಹುಟ್ಟೂರಿನ ಬಗ್ಗೆ ವಿವಿಧೆಡೆ ಬೇರೆ ಬೇರೆ ಹೆಸರುಗಳು ಕೇಳಿಬರುತ್ತವೆಯಾದರೂ, ಅವೆಲ್ಲವೂ ಭೌಗೋಳಿಕವಾಗಿ ಹತ್ತಿರದ ಪ್ರದೇಶಗಳೇ ಆಗಿವೆ:

ಸ್ಥಳ

ವಿವರಣೆ

ಕೋಡಪದವು

ಇವರು ಜನಿಸಿದ ಮೂಲ ಗ್ರಾಮ (ಬಂಟ್ವಾಳ ತಾಲೂಕು).

ಸೂರಿಕುಮೇರು

ಇವರು ವಾಸವಿದ್ದ ಮತ್ತು ಗುರುತಿಸಿಕೊಂಡಿದ್ದ ಪ್ರಸಿದ್ಧ ಸ್ಥಳ (ಮಂಗಳೂರು-ಪುತ್ತೂರು ಹೆದ್ದಾರಿಯಲ್ಲಿದೆ).

ಕುಕ್ಕೆಮನೆ

ಇವರ ಮನೆತನದ ಹೆಸರು ಅಥವಾ ಕುಟುಂಬದ ನೆಲೆ (ಇಡ್ಕಿದು/ಸೂರಿಕುಮೇರು ಸಮೀಪ).

ಸೂರಿಕುಮೇರು/ಇಡ್ಕಿದು ಪ್ರದೇಶದಿಂದ ಕೋಡಪದವು ಅಂದಾಜು 5 ರಿಂದ 7 ಕಿ.ಮೀ. ಅಂತರದಲ್ಲಿದೆ. ವಾಹನದಲ್ಲಿ ಸಾಗಿದರೆ ಕೇವಲ 10-15 ನಿಮಿಷಗಳ ಹಾದಿ. ಆದ್ದರಿಂದಲೇ ಪತ್ರಿಕೆಗಳಲ್ಲಿ ಈ ಮೂರೂ ಹೆಸರುಗಳು ಅದಲುಬದಲಾಗಿ ಬಳಕೆಯಾಗುತ್ತಿರುತ್ತವೆ. ಇವೆಲ್ಲವೂ ವಿಟ್ಲದ ಆಸುಪಾಸಿನಲ್ಲೇ ಇವೆ.

ಕಣ್ಣಿನ ದೃಷ್ಟಿ ಮಂಜಾಗುತ್ತಿದ್ದರೂ, ಶರೀರ ದಣಿಯುತ್ತಿದ್ದರೂ ರಂಗಸ್ಥಳವೇ ನನ್ನ ಗತಿ ಎಂದು ಕೊನೆಯವರೆಗೂ ಕಲಾ ಸೇವೆಯನ್ನೇ ಉಸಿರಾಗಿಸಿಕೊಂಡ ಈ ಮಹಾನ್ ಚೇತನಕ್ಕೆ ನಮೋ ನಮಃ.

ಚಿತ್ರಕೃಪೆ: https://ruthumana.com/2017/06/18/kashameru_soorikumeru_govinda-bhat/

ಈ ವೆಬ್‌ ಸೈಟಿನ ʼಯಕ್ಷಗಾನ ತಾಳಮದ್ದಳೆʼ ಪುಟಕ್ಕೆ ಭೇಟಿ ಕೊಡಿ

Thursday, March 19, 2026

ಯುಗಾದಿ ಉತ್ಸವ ಆಚರಣೆ

 ಯುಗಾದಿ ಉತ್ಸವ ಆಚರಣೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ಸೇವಾ ಸಮಿತಿಯ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ೨೦೨೬ ಮಾರ್ಚ್‌ ೧೯ರ ಗುರುವಾರ ಪರಾಭವ ಸಂವತ್ಸರದ ಯುಗಾದಿ ಉತ್ಸವವನ್ನು ಸಡಗರದೊಂದಿಗೆ ಆಚರಿಸಲಾಯಿತು.

ಹೊಸ ವರ್ಷದ ಸಲುವಾಗಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ಹಾಗೂ ಸಪರಿವಾರ ದೇವರನ್ನು ವಿಶೇಷವಾಗಿ ಹೂ ಹಾರಗಳಿಂದ ಅಲಂಕರಿಸಲಾಗಿತ್ತು.

ಪುಷ್ಪಾಲಂಕಾರ ಸೇವೆಯನ್ನು ಶ್ರೀ ಮುನಿರಾಜು ಮತ್ತು ಕುಟುಂಬ, ವಸ್ತ್ರ ಸೇವೆಯನ್ನು ಶ್ರೀ ನಾರಾಯಣ ಸ್ವಾಮಿ ಮತ್ತು ಕುಟುಂಬದವರು ಕೈಗೊಂಡಿದ್ದರು. ದೇವಾಲಯದ ಅರ್ಚಕ ಶ್ರೀ ನಾಗೇಂದ್ರ ಭಟ್‌ ಅವರು ಪಂಚಾಂಗದ ಫಲಾಫಲಗಳನ್ನು ವಿವರಿಸಿ, ಬಳಿಕ ಪೂಜಾ ಕೈಂಕರ್ಯ ನೆರವೇರಿಸಿದರು.

ಭಕ್ತರಿಂದ ಭಜನಾ ಸೇವೆ ನಡೆಯಿತು. ಬೇವು-ಬೆಲ್ಲ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದ ವಿಡಿಯೋ, ಕೆಲವು ಚಿತ್ರಗಳು ಇಲ್ಲಿವೆ. ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.

Advertisement