ಶಿರಾಡಿ ಘಟ್ಟದಲ್ಲಿ ಭೂಕುಸಿತ: ಹೆದ್ದಾರಿ ಬಂದ್
ಹಾಸನ: ಸಕಲೇಶಪುರದ ಮಾರೆಹನಳ್ಳಿ ಬಳಿ ಭೂಕುಸಿತ ಸಂಭವಿಸಿದ ಪರಿಣಾಮವಾಗಿ ಬೆಂಗಳೂರು-ಮಂಗಳೂರು
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ರದ್ದಾಗಿದೆ.
ಭೂಕುಸಿತದ ಹಿನ್ನೆಲೆಯಲ್ಲಿ ಶಿರಾಡಿ ಘಟ್ಟ ರಸ್ತೆಯಲ್ಲಿ ವಾಹನ ಸಂಚಾರವನ್ನು ಜಿಲ್ಲಾಡಳಿತವು ನಿಷೇಧಿಸಿದೆ.
ಈ ರಾಷ್ಟ್ರೀಯ ಹೆದ್ದಾರಿ ನಂಬರ್ 75 ಮಂಗಳೂರು ಕರಾವಳಿ ನಗರವನ್ನು ಬೆಂಗಳೂರಿನೊಂದಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ.
ಜಿಲ್ಲಾಧಿಕಾರಿ ಲತಾ ಕುಮಾರಿ
ಹೊರಡಿಸಿದ ಆದೇಶದ ಪ್ರಕಾರ, ಬೆಂಗಳೂರಿನಿಂದ
ಮಂಗಳೂರಿಗೆ ಹೋಗುವ ವಾಹನಗಳನ್ನು ಬೆಂಗಳೂರು-ಹಾಸನ-ಬೇಲೂರು-ಚಾರ್ಮಾಡಿ ಘಟ್ಟದ ಮೂಲಕ ಕಳುಹಿಸಲಾಗುತ್ತಿದೆ.
ಮಂಗಳೂರಿನಿಂದ ಬೆಂಗಳೂರಿಗೆ
ಹೋಗುವ ವಾಹನಗಳು ಸಂಪಾಜೆ ರಸ್ತೆ ಅಥವಾ ಚಾರ್ಮಾಡಿ ಘಟ್ಟ ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.
ಏತನ್ಮಧ್ಯೆ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.
No comments:
Post a Comment