Tuesday, June 30, 2026

ದೇಗುಲಕ್ಕೆ ಕಳೆಗಟ್ಟಿಸಿದ ಎರಡು ಕಾರ್ಯಕ್ರಮಗಳು

 ದೇಗುಲಕ್ಕೆ ಕಳೆಗಟ್ಟಿಸಿದ ಎರಡು ಕಾರ್ಯಕ್ರಮಗಳು

ಯಕ್ಷಗಾನ ತರಗತಿ ದ್ವಿತೀಯ ತಂಡ ಪ್ರಾರಂಭೋತ್ಸವ + ಸತ್ಯನಾರಾಯಣ ಪೂಜಾ

ಕ್ತಿ ಶ್ರದ್ಧೆಯೊಂದಿಗೆ ನಡೆಯುವ ದೇವಾರಾಧನೆ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಇಂಬುಕೊಡುವ ಕಾರ್ಯಕ್ರಮಗಳು ದೇವಾಲಯಕ್ಕೆ ವಿಶೇಷ ಕಳೆಯನ್ನು ನೀಡುತ್ತವೆ.

ಗಣೇಶೋತ್ಸವ, ವಾರ್ಷಿಕೋತ್ಸವ, ಜಾತ್ರೆ ಇವುಗಳೆಲ್ಲ ದೇವಸ್ಥಾನಕ್ಕೆ ವಿಶೇಷ ಕಳೆಯನ್ನು ತಂದುಕೊಡುವ ವಿಶೇಷ ಸಂದರ್ಭಗಳು. ಹಾಗೆಯೇ ಇಂತಹ ಸಂದರ್ಭಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ವಿಶೇಷ ಸಂದರ್ಭಗಳನ್ನು ಇನ್ನಷ್ಟು ಸ್ಮರಣೀಯವನ್ನಾಗಿ ಮಾಡುತ್ತವೆ.

ದೇವಸ್ಥಾನಗಳಲ್ಲಿ ಇಂತಹ ಸಾಂಸ್ಕತಿಕ ಚಟುವಟಿಕೆಗೆ ಒದಗಿ ಬರುವ ಪ್ರೋತ್ಸಾಹ ಇನ್ನೂ ವಿಶೇಷವಾದದ್ದು.

ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನವು ಈ ನಿಟ್ಟಿನಲ್ಲಿ ನಿರಂತರ ಶ್ರಮ ವಹಿಸುತ್ತಿದೆ.

ಪ್ರತಿ ಮಾಸವೂ ಸತ್ಯ ನಾರಾಯಣ ಪೂಜೆ ಮತ್ತು ಸಂಕಷ್ಟಿ ಪೂಜೆಯನ್ನು ನಿರಂತರವಾಗಿ ನೆರವೇರಿಸುತ್ತಾ ಬಂದಿರುವುದರ ಜೊತೆಗೆ ಕಳೆದ ಎಂಟು ತಿಂಗಳುಗಳಿಂದ ಯಕ್ಷಗುರು ಉಮೇಶರಾಜ್‌ ಮಂದಾರ್ತಿ ನೇತೃತ್ವದ ʼಯಕ್ಷ ಕಲಾ ಕೌಸ್ತುಭʼ ತಂಡದ ಮೂಲಕ ಆಸಕ್ತರಿಗೆ ಕರ್ನಾಟಕದ ಹೆಮ್ಮೆಯ ಕಲೆಯಾದ ಯಕ್ಷಗಾನವನ್ನು ಕಲಿಸಿಕೊಡುವ ಕೈಕಂಕರ್ಯಕ್ಕೆ ನೀರೆಯುತ್ತಾ ಬಂದಿದೆ.

ಈ ತಂಡದ ಮೂಲಕ ಯಕ್ಷಗಾನ ಕಲಿತ ಮಕ್ಕಳು, ಮಹಿಳೆಯರು ಈ ಅವಧಿಯಲ್ಲಿ ಮೂರು ಯಕ್ಷಗಾನ ಪ್ರದರ್ಶನಗಳನ್ನೂ ಯಶಸ್ವಿಯಾಗಿ ನೀಡಿದ್ದಾರೆ. ಇದೀಗ ತಂಡವು ಯಕ್ಷಗಾನ ಕಲಿಯಬಯಸಿರುವ ಎರಡನೇ ತಂಡಕ್ಕೆ ತರಗತಿಗಳನ್ನೂ ಆರಂಭಿಸಿದೆ.

೨೦೨೬ ಜೂನ್‌ ೨೮ರ ಭಾನುವಾರ ಎರಡನೇ ತಂಡದ ಯಕ್ಷಗಾನ ತರಗತಿಯ ಆರಂಭೋತ್ಸವ ʼಬಾಲಾಜಿ ಮಹಾಗಣಪತಿಯ ಸನ್ನಿಧಿಯಲ್ಲಿ ಕಿರೀಟ ಪೂಜೆಯೊಂದಿಗೆ ಜರುಗಿತು. ಯಕ್ಷಗಾನ ವಿದ್ಯಾರ್ಥಿಗಳು, ಪೋಷಕರು, ಯಕ್ಷ ಕಲಾ ಕೌಸ್ತುಭ ಕುಟುಂಬದ ಸರ್ವ ಸದಸ್ಯರು, ದೇವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಟ್ರಸ್ಟಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮರುದಿನ ೨೦೨೬ ಜೂನ್‌ ೨೯ರ ಸೋಮವಾರ ದೇವಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.

ಈ ಎರಡೂ ಕಾರ್ಯಕ್ರಮಗಳ ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.


No comments:

Advertisement