ಶ್ರೀ ಕೃಷ್ಣ ಜನ್ಮಾಷ್ಟಮಿ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ
ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಸೆಪ್ಟೆಂಬರ್ ೪ರ
ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಲಾಯಿತು.
ಕಥಾ ಶ್ರವಣ, ಪೂಜೆ, ಕುಂಕುಮಾರ್ಚನೆಯನ್ನೂ ನೆರವೇರಿಸಲಾಯಿತು. ಶ್ರೀ
ಕೃಷ್ಣೋಜಿರಾವ್ ಮತ್ತು ಕುಟುಂಬ ಸದಸ್ಯರು ಅಲಂಕಾರ, ಪ್ರಸಾದ ಸೇವೆಯ ವ್ಯವಸ್ಥೆ ಮಾಡಿದ್ದರು.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜೆ, ಭಜನೆ, ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡರು. ಪುಟಾಣಿ ಮಕ್ಕಳು ಬಾಲಕೃಷ್ಣ, ರಾಧೆ ವೇಷಗಳನ್ನು ಧರಿಸಿ ಆಗಮಿಸಿದ್ದರು.
ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.






No comments:
Post a Comment