Showing posts with label ಹೆಗಡೆ ನಗರ. Show all posts
Showing posts with label ಹೆಗಡೆ ನಗರ. Show all posts

Saturday, September 5, 2026

ಶ್ರೀ ಕೃಷ್ಣ ಜನ್ಮಾಷ್ಟಮಿ

 ಶ್ರೀ ಕೃಷ್ಣ ಜನ್ಮಾಷ್ಟಮಿ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಸೆಪ್ಟೆಂಬರ್‌ ೪ರ ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಲಾಯಿತು.

ಕಥಾ ಶ್ರವಣ, ಪೂಜೆ, ಕುಂಕುಮಾರ್ಚನೆಯನ್ನೂ ನೆರವೇರಿಸಲಾಯಿತು. ಶ್ರೀ ಕೃಷ್ಣೋಜಿರಾವ್‌ ಮತ್ತು ಕುಟುಂಬ ಸದಸ್ಯರು ಅಲಂಕಾರ, ಪ್ರಸಾದ ಸೇವೆಯ ವ್ಯವಸ್ಥೆ ಮಾಡಿದ್ದರು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜೆ, ಭಜನೆ, ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡರು. ಪುಟಾಣಿ ಮಕ್ಕಳು ಬಾಲಕೃಷ್ಣ, ರಾಧೆ ವೇಷಗಳನ್ನು ಧರಿಸಿ ಆಗಮಿಸಿದ್ದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.








Friday, August 28, 2026

ಶ್ರಾವಣ ಮಾಸದ ಸತ್ಯ ನಾರಾಯಣ ಪೂಜೆ

 ಶ್ರಾವಣ ಮಾಸದ ಸತ್ಯ ನಾರಾಯಣ ಪೂಜೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಆಗಸ್ಟ್‌ ೨೭ರ ಗುರುವಾರ ಶ್ರಾವಣ ಮಾಸದ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಶ್ರೀ ಕೃಷ್ಣೋಜಿ ರಾವ್‌ ಕುಟುಂಬದವರು ಅಲಂಕಾರ ಹಾಗೂ ಶ್ರೀ ಮಹೇಶ್‌ ಕುಟುಂಬದವರು ಪ್ರಸಾದ ಸೇವಾ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.






Friday, August 21, 2026

ವರ ಮಹಾಲಕ್ಷ್ಮಿ ಪೂಜಾ

 ವರ ಮಹಾಲಕ್ಷ್ಮಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಆಗಸ್ಟ್‌ ೨೧ ಶುಕ್ರವಾರ ಶ್ರೀ ವರ ಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ವರಲಕ್ಷ್ಮಿ ವ್ರತದ ಮಹತ್ವವನ್ನು ಅರುಹುವ ಕಥಾ ಶ್ರವಣ, ವರ ಮಹಾಲಕ್ಷ್ಮಿಗೆ ಮಹಿಳೆಯರಿಂದ ಕುಂಕುಮಾರ್ಚನೆ, ಸಂಗೀತ ಸೇವೆ  ನಡೆಯಿತು. ಶ್ರೀ ಮುನಿರಾಜು, ಶ್ರೀ ಕೃಷ್ಣೋಜಿರಾವ್‌, ಶ್ರೀ ಕಾರಿಯಪ್ಪ ಕುಟುಂಬದವರು ಅಲಂಕಾರ, ತಾಂಬೂಲ, ಪ್ರಸಾದದ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.

Wednesday, July 29, 2026

ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜಾ

 ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ಸತ್ಯನಾರಾಯಣ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಜುಲೈ ೨೯ರ ಬುಧವಾರ ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.



Tuesday, June 30, 2026

ದೇಗುಲಕ್ಕೆ ಕಳೆಗಟ್ಟಿಸಿದ ಎರಡು ಕಾರ್ಯಕ್ರಮಗಳು

 ದೇಗುಲಕ್ಕೆ ಕಳೆಗಟ್ಟಿಸಿದ ಎರಡು ಕಾರ್ಯಕ್ರಮಗಳು

ಯಕ್ಷಗಾನ ತರಗತಿ ದ್ವಿತೀಯ ತಂಡ ಪ್ರಾರಂಭೋತ್ಸವ + ಸತ್ಯನಾರಾಯಣ ಪೂಜಾ

ಕ್ತಿ ಶ್ರದ್ಧೆಯೊಂದಿಗೆ ನಡೆಯುವ ದೇವಾರಾಧನೆ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಇಂಬುಕೊಡುವ ಕಾರ್ಯಕ್ರಮಗಳು ದೇವಾಲಯಕ್ಕೆ ವಿಶೇಷ ಕಳೆಯನ್ನು ನೀಡುತ್ತವೆ.

ಗಣೇಶೋತ್ಸವ, ವಾರ್ಷಿಕೋತ್ಸವ, ಜಾತ್ರೆ ಇವುಗಳೆಲ್ಲ ದೇವಸ್ಥಾನಕ್ಕೆ ವಿಶೇಷ ಕಳೆಯನ್ನು ತಂದುಕೊಡುವ ವಿಶೇಷ ಸಂದರ್ಭಗಳು. ಹಾಗೆಯೇ ಇಂತಹ ಸಂದರ್ಭಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ವಿಶೇಷ ಸಂದರ್ಭಗಳನ್ನು ಇನ್ನಷ್ಟು ಸ್ಮರಣೀಯವನ್ನಾಗಿ ಮಾಡುತ್ತವೆ.

ದೇವಸ್ಥಾನಗಳಲ್ಲಿ ಇಂತಹ ಸಾಂಸ್ಕತಿಕ ಚಟುವಟಿಕೆಗೆ ಒದಗಿ ಬರುವ ಪ್ರೋತ್ಸಾಹ ಇನ್ನೂ ವಿಶೇಷವಾದದ್ದು.

ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನವು ಈ ನಿಟ್ಟಿನಲ್ಲಿ ನಿರಂತರ ಶ್ರಮ ವಹಿಸುತ್ತಿದೆ.

ಪ್ರತಿ ಮಾಸವೂ ಸತ್ಯ ನಾರಾಯಣ ಪೂಜೆ ಮತ್ತು ಸಂಕಷ್ಟಿ ಪೂಜೆಯನ್ನು ನಿರಂತರವಾಗಿ ನೆರವೇರಿಸುತ್ತಾ ಬಂದಿರುವುದರ ಜೊತೆಗೆ ಕಳೆದ ಎಂಟು ತಿಂಗಳುಗಳಿಂದ ಯಕ್ಷಗುರು ಉಮೇಶರಾಜ್‌ ಮಂದಾರ್ತಿ ನೇತೃತ್ವದ ʼಯಕ್ಷ ಕಲಾ ಕೌಸ್ತುಭʼ ತಂಡದ ಮೂಲಕ ಆಸಕ್ತರಿಗೆ ಕರ್ನಾಟಕದ ಹೆಮ್ಮೆಯ ಕಲೆಯಾದ ಯಕ್ಷಗಾನವನ್ನು ಕಲಿಸಿಕೊಡುವ ಕೈಕಂಕರ್ಯಕ್ಕೆ ನೀರೆಯುತ್ತಾ ಬಂದಿದೆ.

ಈ ತಂಡದ ಮೂಲಕ ಯಕ್ಷಗಾನ ಕಲಿತ ಮಕ್ಕಳು, ಮಹಿಳೆಯರು ಈ ಅವಧಿಯಲ್ಲಿ ಮೂರು ಯಕ್ಷಗಾನ ಪ್ರದರ್ಶನಗಳನ್ನೂ ಯಶಸ್ವಿಯಾಗಿ ನೀಡಿದ್ದಾರೆ. ಇದೀಗ ತಂಡವು ಯಕ್ಷಗಾನ ಕಲಿಯಬಯಸಿರುವ ಎರಡನೇ ತಂಡಕ್ಕೆ ತರಗತಿಗಳನ್ನೂ ಆರಂಭಿಸಿದೆ.

೨೦೨೬ ಜೂನ್‌ ೨೮ರ ಭಾನುವಾರ ಎರಡನೇ ತಂಡದ ಯಕ್ಷಗಾನ ತರಗತಿಯ ಆರಂಭೋತ್ಸವ ʼಬಾಲಾಜಿ ಮಹಾಗಣಪತಿಯ ಸನ್ನಿಧಿಯಲ್ಲಿ ಕಿರೀಟ ಪೂಜೆಯೊಂದಿಗೆ ಜರುಗಿತು. ಯಕ್ಷಗಾನ ವಿದ್ಯಾರ್ಥಿಗಳು, ಪೋಷಕರು, ಯಕ್ಷ ಕಲಾ ಕೌಸ್ತುಭ ಕುಟುಂಬದ ಸರ್ವ ಸದಸ್ಯರು, ದೇವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಟ್ರಸ್ಟಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮರುದಿನ ೨೦೨೬ ಜೂನ್‌ ೨೯ರ ಸೋಮವಾರ ದೇವಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.

ಈ ಎರಡೂ ಕಾರ್ಯಕ್ರಮಗಳ ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.


Sunday, June 21, 2026

ಯಕ್ಷಗಾನದಲ್ಲಿ ಗೆಜ್ಜೆ ಕಟ್ಟುವುದು

 ಯಕ್ಷಗಾನದಲ್ಲಿ ಗೆಜ್ಜೆ ಕಟ್ಟುವುದು

ಕ್ಷಗಾನದಲ್ಲಿ ಗೆಜ್ಜೆ ಕಟ್ಟುವುದು ಒಂದು ಮಹತ್ವದ ಅಂಗ. ಗೆಜ್ಜೆ ಕಟ್ಟುವುದು ಯಕ್ಷಗಾನ ಕಲಾವಿದರಿಗೆ ಒಂದು ಸಂಭ್ರಮದ ಕ್ಷಣವೂ ಅಹುದು.


ಯಕ್ಷಗಾನ ಕಲಾವಿದರು ತಮ್ಮ ವೇಷ ಧರಿಸುವುದನ್ನು ಸ್ವತಃ ಮಾಡುತ್ತಾರೆ, ಅದು ಅಂದವಾಗಿ ಬಣ್ಣ ಬಳಿದುಕೊಂಡು, ವೇಷಭೂಷಣ ತೊಟ್ಟುಕೊಳ್ಳುವುದರಿಂದ ಹಿಡಿದು ಗೆಜ್ಜೆ ಕಟ್ಟುವವರೆಗೂ ಅವರವರೇ ತಮ್ಮ ಕೆಲಸಗಳನ್ನು ಮಾಡುತ್ತಾರೆ.

ಗೆಜ್ಜೆ ಕಟ್ಟುವುದನ್ನು ಕಲಿಯುವ ಮುನ್ನ ಗುರುಗಳು ಗೆಜ್ಜೆಯನ್ನು ಕಲಾವಿದರಿಗೆ ಕೊಡುತ್ತಾರೆ. ಅದನ್ನು ಪಡೆದುಕೊಳ್ಳುವ ಕಲಾವಿದರು ಪ್ರಪ್ರಥಮವಾಗಿ ದೇವರ ಮುಂದೆ ಹೋಗಿ ನಮಸ್ಕರಿಸಿ ಆ ಬಳಿಕ ಗುರುಗಳಿಗೆ ನಮಸ್ಕರಿಸುತ್ತಾರೆ. ಆ ಬಳಿಕ ಗುರುಗಳು ಕಲಾವಿದರಿಗೆ ಗೆಜ್ಜೆ ಕಟ್ಟುವುದನ್ನು ಹೇಳಿಕೊಡುತ್ತಾರೆ.

ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಚೌಕಿಯಲ್ಲಿ ಗಣೇಶನ ಭಾವಚಿತ್ರವನ್ನು ಇರಿಸಿರುತ್ತಾರೆ. ಗೆಜ್ಜೆ ಕಟ್ಟುವ ಮುನ್ನ ಕಲಾವಿದರು ಗಣೇಶನಿಗೆ ನಮಸ್ಕರಿಸಿ ನಂತರ ಗೆಜ್ಜೆ ಕಟ್ಟಿಕೊಳ್ಳುತ್ತಾರೆ.

ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಕಳೆದ ಎಂಟು ತಿಂಗಳುಗಳಿಂದ ಯಕ್ಷಗಾನ ಕಲಿಯುತ್ತಿರುವ ಮಕ್ಕಳಿಗೆ ಇಂದು ೨೦೨೬ ಜೂನ್‌ ೨೧ರ ಭಾನುವಾರ ಗೆಜ್ಜೆ ಕಟ್ಟುವ ಸಂಭ್ರಮ. ಯಕ್ಷ ಕಲಾ ಕೌಸ್ತುಭ ತಂಡದ ಯಕ್ಷಗುರು ಉಮೇಶ ರಾಜ್‌ ಮಂದಾರ್ತಿ ಅವರು ಮಕ್ಕಳಿಗೆ ಗೆಜ್ಜೆ ಕಟ್ಟುವ ಬಗ್ಗೆ ಕಾರ್ಯಾಗಾರವನ್ನು ನಡೆಸಿದರು.

ಸಂದರ್ಭದ ಕೆಲವು ಪಟಗಳು ಹಾಗೂ ವಿಡಿಯೋಗಳು ಇಲ್ಲಿವೆ.

ಅಂದಹಾಗೆ ಯಕ್ಷಗಾನ ಕಲಿಯಲು ಇಚ್ಛಿಸುವವರಿಗಾಗಿ ಯಕ್ಷ ಕಲಾ ಕೌಸ್ತುಭದ ಎರಡನೇ ತಂಡದ ಅಭ್ಯಾಸ ಮುಂದಿನ ಭಾನುವಾರ ೨೦೨೬ ಜೂನ್‌ ೨೧ರಂದು ಬೆಳಗ್ಗೆ ಆರಂಭವಾಗಲಿದೆ. 
ಆಸಕ್ತರು ಇಲ್ಲಿ ಕ್ಲಿಕ್‌ ಮಾಡಿ ನೋಡಿ 👉


Sunday, May 31, 2026

ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜಾ

 ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಮೇ ೩೦ರ ಶನಿವಾರ ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜೆಯನ್ನು ಭಕ್ತಿ ಭಾವದೊಂದಿಗೆ ನೆರವೇರಿಸಲಾಯಿತು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ. ಮಹಾಮಂಗಳಾರತಿಯ ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.


ದೇವಸ್ಥಾನದಲ್ಲಿ ಶೀಘ್ರದಲ್ಲಿಯೇ ಆರಂಭವಾಗಲಿದೆ - ಹೊಸ ತಂಡಕ್ಕೆ ಯಕ್ಷಗಾನ ತರಬೇತಿ 

Tuesday, May 26, 2026

ಶ್ರೀ ಆಂಜನೇಯ ಹೋಮ: ಶಕ್ತಿ ಮತ್ತು ಧೈರ್ಯಕ್ಕಾಗಿ

 ಶ್ರೀ ಆಂಜನೇಯ ಹೋಮ: ಶಕ್ತಿ ಮತ್ತು ಧೈರ್ಯಕ್ಕಾಗಿ

ನುಮದ್ವಂದನೆ ಅಥವಾ ಆಂಜನೇಯ ಹೋಮವು ಸಾಕ್ಷಾತ್ ವಾಯುಪುತ್ರ, ಅಪ್ರತಿಮ ಶೌರ್ಯ ಮತ್ತು ಅಪಾರ ಶಕ್ತಿಯ ಸಂಕೇತವಾಗಿರುವ ಶ್ರೀ ಹನುಮಂತನ ಕೃಪೆಗೆ ಪಾತ್ರವಾಗಲು ನೆರವೇರಿಸುವ ಅತ್ಯಂತ ಪವಿತ್ರವಾದ ಒಂದು ಆಚರಣೆ.

ಜೀವನದ ಹಾದಿಯಲ್ಲಿ ಎದುರಾಗುವ ನಕಾರಾತ್ಮಕ ಶಕ್ತಿಗಳನ್ನು ತೊಲಗಿಸಿ, ಅಡೆತಡೆಗಳನ್ನು ನಿವಾರಿಸಲು ಹಾಗೂ ಎಲ್ಲ ಬಗೆಯ ದುಃಖ-ಕಷ್ಟಗಳಿಂದ ಮುಕ್ತಿ ಪಡೆಯಲು ಈ ಹೋಮವನ್ನು ಮಾಡಲಾಗುತ್ತದೆ. ಜೀವನದ ಸವಾಲುಗಳನ್ನು ಎದುರಿಸಲು ಹನುಮಂತನ ದಿವ್ಯ ರಕ್ಷಾಕವಚ ಮತ್ತು ಆಶೀರ್ವಾದವನ್ನು ಪಡೆಯುವುದೇ ಇದರ ಮುಖ್ಯ ಉದ್ದೇಶ.

ಆಂಜನೇಯ ಹೋಮದ ಆಚರಣೆಯು ಭಕ್ತರಲ್ಲಿ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ದೃಢತೆಯನ್ನು ಹೆಚ್ಚಿಸುತ್ತದೆ. ಇದು ಮನಸ್ಸಿನಲ್ಲಿದ್ದ ಭೀತಿಯನ್ನು ಹೋಗಲಾಡಿಸಿ, ಜೀವನದ ವಿವಿಧ ಮಜಲುಗಳಲ್ಲಿ ಯಶಸ್ಸಿನ ಪತಾಕೆಯನ್ನು ಹಾರಿಸಲು ದಾರಿಯಾಗುತ್ತದೆ.

ಈ ಪವಿತ್ರ ವಿಧಿಯಲ್ಲಿ ಹನುಮಂತನ ಮೂಲಮಂತ್ರ ಸಹಿತ ಶಕ್ತಿಶಾಲಿ ಮಂತ್ರಗಳನ್ನು ಪಠಿಸಲಾಗುತ್ತದೆ. ಹೋಮ ಕುಂಡದಲ್ಲಿ ಪವಿತ್ರ ಹವಿಸ್ಸನ್ನು ಅರ್ಪಿಸುವ ಮೂಲಕ, ಹನುಮದೇವನ ದಿವ್ಯ ಶಕ್ತಿಯೊಂದಿಗೆ ಸಂಪರ್ಕ ಸಾಧಿಸಿ, ಸಕಲ ಅಭೀಷ್ಟಗಳನ್ನು ಈಡೇರಿಸಿಕೊಳ್ಳುವ ಸುಂದರ ಪ್ರಕ್ರಿಯೆ ಇದು.

ಹನುಮ ಜಯಂತಿಯಂತಹ ಅತ್ಯಂತ ಮಂಗಳಕರ ಸಂದರ್ಭಗಳಲ್ಲಿ ಈ ಹೋಮವನ್ನು ನೆರವೇರಿಸುವುದರಿಂದ ವಿಶೇಷ ಫಲಗಳು ಲಭ್ಯವಾಗುತ್ತವೆ. ಇದು ನಿಮ್ಮ ಆಧ್ಯಾತ್ಮಿಕ ಅನುಭವವನ್ನು ಮತ್ತಷ್ಟು ಉನ್ನತಗೊಳಿಸಿ, ಭಗವಂತನ ಕೃಪೆಗೆ ಪಾತ್ರರನ್ನಾಗಿ ಮಾಡುತ್ತದೆ.

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ವಿನಾಯಕ ಶಾಸ್ತ್ರಿ ಮತ್ತು ಅವರ ಸಹ ಋತ್ವಿಜರು ೨೦೨೬ ಮೇ ೨೬ರ ಮಂಗಳವಾರ ಅಭಯ ಆಂಜನೇಯನ ಸನ್ನಿಧಾನದಲ್ಲಿ ಕೌಟುಂಬಿಕ ಸಂಕಲ್ಪಕ್ಕೆ ಅನುಗುಣವಾಗಿ ದಶದ್ರವ್ಯ ಆಹುತಿಯೊಂದಿಗೆ ಈ ಆಂಜನೇಯ ಹೋಮವನ್ನು ನೆರವೇರಿಸಿದರು. ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.



Tuesday, May 12, 2026

ಯಕ್ಷಗಾನ, ಯಕ್ಷ ಕಲಾ ಕೌಸ್ತುಭ: ‘ಮಾಹೆ’ ಮಕ್ಕಳ ಸಾಕ್ಷ್ಯ ಚಿತ್ರ

 ಯಕ್ಷಗಾನ, ಯಕ್ಷ ಕಲಾ ಕೌಸ್ತುಭ: ‘ಮಾಹೆ’ ಮಕ್ಕಳ ಸಾಕ್ಷ್ಯ ಚಿತ್ರ

ಬೆಂಗಳೂರಿನ ಯಕ್ಷ ಕಲಾ ಕೌಸ್ತುಭ ತಂಡ ಹಾಗೂ ಯಕ್ಷಗಾನ ಕುರಿತಾಗಿ ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ (ಎಂಎಎಚ್‌ಇ ʼಮಾಹೆʼ) ಟಿಎ ಪೈ ಮ್ಯಾನೇಜ್‌ ಮೆಂಟ್‌ ಇನ್‌ಸ್ಟಿಟ್ಯೂಟ್‌ (ಟಿಎಪಿಎಂಐ) ಬೆಂಗಳೂರು ಇಲ್ಲಿಯ ವಿದ್ಯಾರ್ಥಿಗಳು ಸುಂದರವಾದ ಸಾಕ್ಷ್ಯಚಿತ್ರವೊಂದನ್ನು (ಡಾಕ್ಯಮೆಂಟರಿ) ಸಿದ್ಧ ಪಡಿಸಿದ್ದಾರೆ.

ಈ ಸಾಕ್ಷ್ಯ ಚಿತ್ರದಲ್ಲಿ ಯಕ್ಷಗಾನ, ಅದರ ಹಾಡುಗಾರಿಕೆ, ಬಣ್ಣಗಾರಿಕೆ ವೇಷಭೂಷಣ, ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಇಂಗ್ಲಿಷಿನಲ್ಲಿ  ವಿವರಿಸಿದ್ದಾರೆ. ಈ ಸಾಕ್ಷ್ಯ ಚಿತ್ರವನ್ನು ಇಲ್ಲಿ ನೋಡಬಹುದು.

ಎರಡನೇ ತಂಡ:
ಈ ಮಧ್ಯೆ, ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 2025 ನವೆಂಬರ್‌ 26ರಂದು ಪ್ರಾರಂಭವಾದ ಬೆಂಗಳೂರಿನ ಯಕ್ಷ ಕಲಾ ಕೌಸ್ತುಭ ತಂಡವು ತನ್ನ ಎರಡನೇ ತಂಡಕ್ಕೆ ತರಬೇತಿ ಆರಂಭಿಸಲು ಸಜ್ಜಾಗಿದೆ. (ಚಿತ್ರಗಳ   ಸಮೀಪ ನೋಟಕ್ಕೆ ಅವುಗಳನ್ನು ಕ್ಲಿಕ್‌ ಮಾಡಿ).

ಕೇವಲ ಆರು ತಿಂಗಳ ಅವಧಿಯಲ್ಲಿ ಯಕ್ಷಗುರು ಉಮೇಶ ರಾಜ್‌ ಅವರಿಂದ ಯಕ್ಷಗಾನ ಕಲಿತ ಮಕ್ಕಳು ಜಕ್ಕೂರಿನ ʼಸುಗಿ-ಹುಗ್ಗಿʼಯಲ್ಲಿ ನೀಡಿದ ಪ್ರದರ್ಶನವೂ ಸೇರಿದಂತೆ ಐದು ಪ್ರದರ್ಶನಗಳನ್ನು ನೀಡಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. ʼಅಭಿಮನ್ಯು ಕಾಳಗʼ, ʼಭಾರ್ಗವ ವಿಜಯʼ ಮತ್ತು ʼಲವ ಕುಶ ಕಾಳಗʼ ಪ್ರದರ್ಶನಗಳನ್ನು ನೀಡಿ ಪ್ರೇಕ್ಷಕರ ಮನರಂಜಿಸಿದ್ದಾರೆ.

ಇದೀಗ ಜೂನ್‌ ಮೊದಲ ವಾರದಿಂದ ಆರಂಭವಾಗಲಿರುವ ಯಕ್ಷ ಕಲಾ ಕೌಸ್ತುಭದ ಎರಡನೇ ತಂಡಕ್ಕೆ ಸೇರ್ಪಡೆಯಾಗಬಯಸುವವರು ಯಕ್ಷಗುರು ಉಮೇಶರಾಜ್‌ ಅವರನ್ನು ದೂರವಾಣಿ ಸಂಖ್ಯೆ 9663671591 ಅಥವಾ 9606981591 ಮೂಲಕ ಸಂಪರ್ಕಿಸಬಹುದು ಎಂದು ಹೇಳಿಕೆ ತಿಳಿಸಿದೆ.



ಯಕ್ಷಗಾನ ಕುರಿತ ವಿವರಗಳಿಗೆ ನೋಡಿ: ಈ  ಪರ್ಯಾಯ ವೆಬ್‌ ಸೈಟಿನ ʼಯಕ್ಷಗಾನ/ತಾಳಮದ್ದಳೆʼ ಪುಟ.

Tuesday, May 5, 2026

ಅಂಗಾರಕ ಸಂಕಷ್ಟಿ ಪೂಜಾ

 ಅಂಗಾರಕ ಸಂಕಷ್ಟಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಮೇ ೫ರ ಮಂಗಳವಾರ ವೈಶಾಖ ಮಾಸದ ಶ್ರೀ ಅಂಗಾರಕ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.


ಭಕ್ತರು ಶ್ರೀ ಮಹಾಗಣಪತಿಗೆ ಮೋದಕ ಹಾರ, ಕರ್ಜಿಕಾಯಿ ಹಾರ ಅರ್ಪಣೆಯೊಂದಿಗೆ ಸಂಗೀತ ಸೇವೆಯನ್ನೂ ಸಲ್ಲಿಸಿದರು.


೨೦೨೬ ಮೇ ೧ರ ಶುಕ್ರವಾರ ಹುಣ್ಣಿಮೆಯ ದಿನ ದೇವಸ್ಥಾನದಲ್ಲಿ ವೈಶಾಖ ಮಾಸದ ಶ್ರೀ ಸತ್ಯ ನಾರಾಯಣ ಪೂಜೆಯನ್ನೂ ನೆರವೇರಿಸಲಾಗಿತ್ತು.

ಭಕ್ತರು ಭಾರೀ ಸಂಖ್ಯೆಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.


ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿವೆ. ಮಹಾಮಂಗಳಾರತಿಯವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.

Wednesday, April 15, 2026

ಸೌರಮಾನ ಯುಗಾದಿ ʼವಿಶು-ಕಣಿʼ ಆಚರಣೆ

ಸೌರಮಾನ ಯುಗಾದಿ ʼವಿಶು-ಕಣಿʼ ಆಚರಣೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ  ೨೦೨೬ ಏಪ್ರಿಲ್‌ ೧೫ರ ಬುಧವಾರ ಸೌರಮಾನ ಯುಗಾದಿ ʼವಿಶು-ಕಣಿʼಯನ್ನು ಆಚರಿಸಲಾಯಿತು.

ಬೆಳಗ್ಗೆಯೇ ಸಮೃದ್ಧಿಯ ಸಂಕೇತವಾದ  ಹಲ-ಫಲ, ಹಣ್ಣುಗಳು, ತರಕಾರಿ, ಹೂ, ನಾಣ್ಯಗಳನ್ನು ಒಳಗೊಂಡ ʼವಿಶು-ಕಣಿʼ ದರ್ಶನ ವ್ಯವಸ್ಥೆ ಮಾಡಲಾಗಿತ್ತು.


ಶ್ರೀಮತಿ ಶ್ರೀವಿದ್ಯಾ ಡಿ. ಕಾರ್ತಿಕ್‌ ಮತ್ತು ಕುಟುಂಬದವರು ಶ್ರೀ ದೇವರಿಗೆ ವಸ್ತ್ರಾಲಂಕಾರ, ಕೆ.ಪಿ. ಸುಗುಣನ್‌ ಮತ್ತು ಕುಟುಂಬದವರು ʼಕಣಿ-ದರ್ಶನʼ ಹಾಗೂ ವಿಶೇಷ ಅಪ್ಪಂ ಪ್ರಸಾದ, ನೆತ್ರಕೆರೆ ಉದಯಶಂಕರ ನಾರಾಯಣ ಭಟ್‌ ಮತ್ತು ಕುಟುಂಬದವರು ನಾಣ್ಯ ಸೇವೆ, ಶ್ರೀಮತಿ ಉಮಾ ಜಯಶಂಕರ್‌ ಮತ್ತು ಕುಟುಂಬದವರು ಸಂಜೆಯ ಪ್ರಸಾದದ ವ್ಯವಸ್ಥೆ ಮಾಡಿದ್ದರು.

ಶ್ರೀ ದೇವರಿಗೆ ಅಭಿಷೇಕ ವಿಶೇಷ ಅಲಂಕಾರದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದ ಕೆಲವು ಫೋಟೋ ಹಾಗೂ ವಿಡಿಯೋಗಳು ಇಲ್ಲಿವೆ. ಮಹಾಮಂಗಳಾರತಿವಿಡಿಯೋ ನೋಡಲು ಕೆಳಗಿನ ಚಿತ್ರ  ಕ್ಲಿಕ್‌ ಮಾಡಿ. ಇತರ ವಿಡಿಯೋಗಳನ್ನು ನೋಡಲು ಅವುಗಳನ್ನು ಕ್ಲಿಕ್‌ ಮಾಡಿ.


Wednesday, April 1, 2026

ಚೈತ್ರ ಮಾಸದ ಸತ್ಯನಾರಾಯಣ ಪೂಜಾ

 ಚೈತ್ರ ಮಾಸದ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಏಪ್ರಿಲ್‌ ೧ರ ಬುಧವಾರ ಪರಾಭವ ಸಂವತ್ಸರದ ಚೈತ್ರ ಮಾಸದ ಶ್ರೀ ಸತ್ಯ ನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಭಾರೀ ಸಂಖ್ಯೆಯಲ್ಲಿ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಶ್ರೀ ಕೃಷ್ಣೋಜಿ ರಾವ್‌ ಮತ್ತು ಕುಟುಂಬದವರು ಅಲಂಕಾರ ಹಾಗೂ ಶ್ರೀ ಮಹೇಶ್‌ ಮತ್ತು ಕುಟುಂಬದವರು ಪ್ರಸಾದದ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.


Sunday, March 29, 2026

ಭಾರತೀಯ ಸಿಟಿಯಲ್ಲಿ ಲವ ಕುಶ ಕಾಳಗ

 ಭಾರತೀಯ ಸಿಟಿಯಲ್ಲಿ ಲವ ಕುಶ ಕಾಳಗ

ಮುಗಿಲೆತ್ತರಕ್ಕೆ ಚಾಚಿದ ಅಪಾರ್ಟ್‌ಮೆಂಟುಗಳು, ಬೃಹತ್‌ ಐಟಿ ಕಂಪೆನಿಗಳು. ಮಧ್ಯೆ ಮಧ್ಯೆ ಅಂಕುಡೊಂಕಿನ ಸಿಮೆಂಟ್‌ ರಸ್ತೆಗಳು. ಅವುಗಳ ಬದಿಯಲ್ಲಿ ಹಸಿರಿಗಾಗಿ ನೆಟ್ಟ ಗಿಡಗಳು. ಎಲ್ಲಿ ನೋಡಿದರೂ ಬಹುತೇಕ ಹಿಂದಿ ಭಾಷೆಯಲ್ಲಿ ಇಲ್ಲವೇ ಇಂಗ್ಲೀಷಿನಲ್ಲೇ ಮಾತನಾಡುವ ಮಂದಿ.

ಇದು ಬೆಂಗಳೂರು ರಾಮಕೃಷ್ಣ ಹೆಗಡೆ ನಗರ ಸಮೀಪದ ಭಾರತೀಯ ಸಿಟಿ.

೨೦೨೬ ಮಾರ್ಚ್‌ ೨೭ರ ರಾಮನವಮಿಯ ದಿನ. ಇಲ್ಲಿ ರಾಮೋತ್ಸವ ಸಡಗರ. ಭಜನೆ, ನೃತ್ಯ, ಹಾಡುಗಳ ಸಂಭ್ರಮ. ಇವೆಲ್ಲದರ ಮಧ್ಯೆ ಅಲ್ಲಿದ್ದ ಎಲ್ಲರನ್ನೂ ಸೂಜಿಗಲ್ಲಿನಂತೆ ಗಮನ ಸೆಳೆದದ್ದು, ಚೆಂಡೆ- ಮದ್ದಳೆಯ ಸದ್ದು, ಯಕ್ಷಗಾನದ ನೃತ್ಯ, ಭಾಗವತರ ಕಂಚಿನ ಕಂಠದ ಹಾಡುಗಳು.

ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ಅಭ್ಯಾಸ ನಡೆಸುತ್ತಿದ್ದ ಯಕ್ಷ ಕಲಾ ಕೌಸ್ತುಭ ತಂಡದ ಮಕ್ಕಳು, ಅವರ ಅಮ್ಮಂದಿರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಕುಣಿದು ಸಂಭ್ರಮದೊಂದಿಗೆ ಈ ಯಕ್ಷಗಾನ ಪ್ರದರ್ಶನ ನೀಡಿದವರು.

ಅವರು ಪ್ರದರ್ಶಿಸಿದ್ದು ರಾಮಾಯಣದ ಉತ್ತರ ಕಾಂಡದಲ್ಲಿ ಬರುವ ʼಲವ ಕುಶ ಕಾಳಗʼದ ಪ್ರಸಂಗ. ಈ ಪ್ರಸಂಗದ ವಿವರವನ್ನು ಸಂಘಟಕರ ಜೊತೆಗೆ ತಂಡದ ಸದಸ್ಯರೇ ಆದ ಶಿವಾಂಶ್‌ ಮತ್ತು ಉಮಾ ದೇವಿ ಎನ್.‌ ಅವರು ಹಿಂದಿ ಮತ್ತು ಇಂಗ್ಲಿಷಿನಲ್ಲಿ ವಿವರ ನೀಡಿದರು.

ʼಯಕ್ಷ ಕಲಾ ಕೌಸ್ತುಭʼದ ಯಕ್ಷಗುರು ಉಮೇಶ ರಾಜ್‌ ಮಂದಾರ್ತಿ ಅವರ ನಿರ್ದೇಶನದಲ್ಲಿ ಶ್ರೀರಾಮನಾಗಿ ಉಮಾದೇವಿ ಎನ್,
ಸೀತಾಮಾತೆಯಾಗಿ ಅರ್ಚನಾ ಬಂಗೇರ, ಲವಕುಮಾರನಾಗಿ ಆದ್ಯಾ ಶ್ರೀವಲ್ಲಿ, ಕುಶಕುಮಾರನಾಗಿ ಆದ್ಯ ಎಂ ಕಶ್ಯಪ್, ಶತ್ರುಘ್ನನಾಗಿ ಆದ್ಯ ಭಟ್  ಮತ್ತು ವಾಲ್ಮೀಕಿ ಮಹರ್ಷಿಯಾಗಿ ಪ್ರಣೀತಾ ರೈ ಮಿಂಚಿದರು.

ವೆಂಕಟೇಶ್ ಪ್ರಭು ಅವರು ಮದ್ದಳೆ,  ಸುಬ್ರಹ್ಮಣ್ಯ ಗಾಣಿಗ ಸಾಸ್ತಾನ ಚೆಂಡೆಯೊಂದಿಗೆ ಉಮೇಶರಾಜ್‌ ಅವರಿಗೆ ಸಾಥ್‌ ನೀಡಿದರು. ಚೌಕಿಯಲ್ಲಿ ಹಲವು ತಾಸುಗಳ ಮೊದಲೇ ಬಣ್ಣ ಹಚ್ಚಿಕೊಂಡು, ವೇಷಭೂಷಣ ಧರಿಸಿ ಸಿದ್ದರಾಗುವಲ್ಲಿ ಪ್ರಸನ್ನ ಮಯ್ಯ ಮತ್ತು ಉಮೇಶ ಮಂದಾರ್ತಿ ಸಹಕರಿಸಿದರು.

ಉಮೇಶ ರಾಜ್‌ ಮಂದಾರ್ತಿ ಅವರು ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರತಿ ಭಾನುವಾರ ಮಕ್ಕಳಿಗೆ ಯಕ್ಷಗಾನ ಹೇಳಿಕೊಡುತ್ತಿದ್ದಾರೆ.

ರಂಗಸ್ಥಳದ ಸಮೀಪ ʼಚೌಕಿʼಯಲ್ಲಿ ಮಕ್ಕಳು ವೇಷಭೂಷಣ ತೊಟ್ಟುಕೊಳ್ಳುತ್ತಿದ್ದ ಸಡಗರದ ಚಿತ್ರಗಳು, ಚೌಕಿ ಪೂಜೆಯ ವಿಡಿಯೋ ಸೇರಿದಂತೆ ʼಲವ ಕುಶ ಕಾಳಗʼದ ಎರಡು ಭಾಗಗಳು ಇಲ್ಲಿವೆ.

ಮೇಲಿನ ಮತ್ತು ಕೆಳಗಿನ ಚಿತ್ರಗಳನ್ನು ಕ್ಲಿಕ್‌ ಮಾಡುವ ಮೂಲಕ ಈ ಯಕ್ಷಗಾನ ಪ್ರಸಂಗವನ್ನು ಪೂರ್ತಿಯಾಗಿ ಇಲ್ಲಿ ವೀಕ್ಷಿಸಿ.

ಅಥವಾ ಈ ವೆಬ್‌ ಸೈಟಿನಲ್ಲಿ ಮೇಲಿರುವ ಯಕ್ಷಗಾನ/ತಾಳಮದ್ದಳೆ ಪುಟಕ್ಕೆ ಭೇಟಿ ಕೊಡಿ.

Friday, March 27, 2026

ಶ್ರೀರಾಮ ನವಮಿ

 ಶ್ರೀರಾಮ ನವಮಿ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಮಾರ್ಚ್‌ ೨೭ರ ಶುಕ್ರವಾರ ಶ್ರೀ ರಾಮ ನವಮಿಯನ್ನು ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಲಾಯಿತು.

ಶ್ರೀ ರಾಮ ಚಂದ್ರನಿಗೆ ವಿಶೇಷ ಪೂಜೆ, ಭಕ್ತರಿಗೆ ಪಾನಕ, ಕೋಸಂಬರಿ, ಮಜ್ಜಿಗೆ ನೀರಿನ ವಿತರಣೆ ನಡೆಯಿತು. ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.

ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ




ಇದನ್ನೂ ನೋಡಿರಿ:

Sunday, March 22, 2026

ಗೀತಾ ರಾಮಾಯಣ

 ಗೀತಾ ರಾಮಾಯಣ

ದು ಗೀತಾ ರಾಮಾಯಣದ ಒಂದು ದೃಶ್ಯ. ಬೆಂಗಳೂರಿನ ಯಕ್ಷ ಕಲಾ ಕೌಸ್ತುಭ ತಂಡದ ಮಕ್ಕಳು ಪ್ರದರ್ಶಿಸುತ್ತಿರುವುದು. ಇದು ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ದೇವಸ್ಥಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾಗಿನ ದೃಶ್ಯ. (ಸಮೀಪ ನೋಟಕ್ಕೆ ಮೇಲಿನ ಚಿತ್ರ ಕ್ಲಿಕ್‌ ಮಾಡಿ.)

ಅವರು ಅಭ್ಯಾಸ ಮಾಡುತ್ತಿದ್ದದು ಲವಕುಶ ಕಾಳಗದ ಒಂದು ದೃಶ್ಯ.

ಈ ಕಥೆ ಯಾವುದು, ಅದನ್ನು ಹೇಳುತ್ತಿರುವುದು ಏಕೆ? ಹೇಳುತ್ತಿರುವುದು ಯಾರು ಇವೆಲ್ಲ ಪ್ರಶ್ನೆಗಳಿಗೆ ಉತ್ತರ: ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರ ಸಮೀಪದ ಭಾರತೀಯ ಸಿಟಿಯ ನಿಕೂ ಹೋಮ್ಸ್‌ ನಲ್ಲಿ 2026 ಮಾರ್ಚ್‌ 27ರ ಸಂಜೆ 6.45 ಗಂಟೆಗೆ.

ಪೂರ್ತಿ ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.


ವೆಬ್‌ ಸೈಟಿನ ʼಯಕ್ಷಗಾನ ತಾಳಮದ್ದಳೆʼ ಪುಟಕ್ಕೆ ಭೇಟಿ ಕೊಡಿ

Thursday, March 19, 2026

ಯುಗಾದಿ ಉತ್ಸವ ಆಚರಣೆ

 ಯುಗಾದಿ ಉತ್ಸವ ಆಚರಣೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ಸೇವಾ ಸಮಿತಿಯ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ೨೦೨೬ ಮಾರ್ಚ್‌ ೧೯ರ ಗುರುವಾರ ಪರಾಭವ ಸಂವತ್ಸರದ ಯುಗಾದಿ ಉತ್ಸವವನ್ನು ಸಡಗರದೊಂದಿಗೆ ಆಚರಿಸಲಾಯಿತು.

ಹೊಸ ವರ್ಷದ ಸಲುವಾಗಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ಹಾಗೂ ಸಪರಿವಾರ ದೇವರನ್ನು ವಿಶೇಷವಾಗಿ ಹೂ ಹಾರಗಳಿಂದ ಅಲಂಕರಿಸಲಾಗಿತ್ತು.

ಪುಷ್ಪಾಲಂಕಾರ ಸೇವೆಯನ್ನು ಶ್ರೀ ಮುನಿರಾಜು ಮತ್ತು ಕುಟುಂಬ, ವಸ್ತ್ರ ಸೇವೆಯನ್ನು ಶ್ರೀ ನಾರಾಯಣ ಸ್ವಾಮಿ ಮತ್ತು ಕುಟುಂಬದವರು ಕೈಗೊಂಡಿದ್ದರು. ದೇವಾಲಯದ ಅರ್ಚಕ ಶ್ರೀ ನಾಗೇಂದ್ರ ಭಟ್‌ ಅವರು ಪಂಚಾಂಗದ ಫಲಾಫಲಗಳನ್ನು ವಿವರಿಸಿ, ಬಳಿಕ ಪೂಜಾ ಕೈಂಕರ್ಯ ನೆರವೇರಿಸಿದರು.

ಭಕ್ತರಿಂದ ಭಜನಾ ಸೇವೆ ನಡೆಯಿತು. ಬೇವು-ಬೆಲ್ಲ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದ ವಿಡಿಯೋ, ಕೆಲವು ಚಿತ್ರಗಳು ಇಲ್ಲಿವೆ. ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.

Advertisement