Showing posts with label Hasan. Show all posts
Showing posts with label Hasan. Show all posts

Wednesday, April 23, 2025

ಬಿರಡಹಳ್ಳಿಗೆ ಏಕೆ ರಾಷ್ಟ್ರ ಪ್ರಶಸ್ತಿ ಬಂತು?‌

 ಬಿರಡಹಳ್ಳಿಗೆ ಏಕೆ ರಾಷ್ಟ್ರ ಪ್ರಶಸ್ತಿ ಬಂತು?‌

ರ್ನಾಟಕದ ಹಾಸನ ಜಿಲ್ಲೆಯ ಸಕ್ಲೇಶಪುರ ಸುಂದರವಾದ ನಿಸರ್ಗದ ಮಡಿಲ ತಾಣ. ಇದು ಕಾಫಿ ತೋಟಗಳು, ಬೆಟ್ಟ ಗುಡ್ಡಗಳನ್ನು ಒಳಗೊಂಡಿರುವ ಸುಂದರವಾದ ಪಶ್ಚಿಮ ಘಟ್ಟದ ಹಚ್ಚ ಹಸಿರಿನ ಪ್ರದೇಶ. ಇಲ್ಲಿನ ಕಾಡೊಳಗೆ ಇರುವ ಪುಟ್ಟ ಗ್ರಾಮ ಬಿರಹಳ್ಳಿ. ಈ ಪುಟ್ಟ ಹಳ್ಳಿಯು ಭರವಸೆ ಮತ್ತು ದೃಢ ಸಂಕಲ್ಪದ ಬೆಳಕಾಗಿ ಸೂರ್ಯನಂತೆ ಕಂಗೊಳಿಸುತ್ತಿದೆ.

ದಟ್ಟ ಹಸಿರಿನ ಮಧ್ಯೆ ಇರುವ ಈ ಗ್ರಾಮ ಅಂಗಾರಾಮ್ಲ ಮುಕ್ತ ಪರಿಸರಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದೆ.

ಗ್ರಾಮ ಪಂಚಾಯಿತಿ ಕಚೇರಿ ಛಾವಣಿ ಮೇಲೆ ಸೌರ ಫಲಕಗಳಿವೆ.ಇವು ಇಡೀ ಕಚೇರಿಗೆ ವಿದ್ಯುತ್‌ ಉತ್ಪಾದಿಸುತ್ತಿವೆ. ಅಲ್ಲದೆ ಸುತ್ತ ಮುತ್ತಲಿನ ಪ್ರದೇಶಕ್ಕೂ ʼಶೂನ್ಯ ಮಾಲಿನ್ಯ ಕಾರ್ಬನ್‌ ಚಿನ್ನʼವನ್ನು ಒದಗಿಸಿಕೊಡುತ್ತಿವೆ. ತೋಟದ ಬೇಲಿ, ಸಿಸಿಟಿವಿ ಕ್ಯಾಮರಾ, ಅಂಚೆ ಕಚೇರಿಗಳು ಕೂಡಾ ಈ ಸೌರ ವಿದ್ಯುತ್ತಿನಿಂದಲೇ ನಡೆಯುತ್ತಿವೆ. ರಸ್ತೆಗಳಲ್ಲಿ ಬೀದಿ ದೀಪಗಳಿಗಾಗಿ ಸೌರ ಫಲಕಗಳನ್ನು ಅಳವಡಿಸಲಾಗಿದೆ. ಸೌರಶಕ್ತಿಯ ೨೧ ಹೈ ಮಾಸ್ಕ್‌ ಬೀದಿ ದೀಪಗಳು ಮತ್ತು ೧೯೦ ಮಿನಿ ಸೋಲಾರ್‌ ದೀಪಗಳನ್ನು ಅಳವಡಿಸುವ ಮೂಲಕ ಬೀದಿ ದೀಪಗಳ ವಿದ್ಯುತ್‌ ವೆಚ್ಚವನ್ನು ನಿಯಂತ್ರಿಸಲಾಗಿದೆ.

ಗ್ರಾಮದ ಹಲವಾರು ಮನೆಗಳು ಸೌರ ಫಲಕಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್‌ ಸ್ವಾವಲಂಬನೆ ಸಾಧಿಸಿವೆ. ತೋಟಗಳಲ್ಲಿ ಕೂಡಾ ಸೌರ ಫಲಕಗಳು ತುಂತುರು ನೀರಾವರಿಗೆ ಮೋಟಾರು ಚಲಾಯಿಸಲು ಬೇಕಾದ  ವಿದ್ಯುತ್ತು ಉತ್ಪಾದಿಸುತ್ತಿವೆ.

ಕಳೆದ ೫ ವರ್ಷಗಳಿಂದ ಪಂಪ್‌ ಓಡಿಸಲು ಸೌರ ವಿದ್ಯುತ್‌ ಬಳಸುತ್ತಿದ್ದೇವೆ. ಇದು ಅತ್ಯಂತ ಉಪಯುಕ್ತ. ಲೈಟಿಂಗ್‌, ಫ್ರಿಡ್ಜ್‌, ೫ ಎಚ್‌ ಪಿಯ ನೀರೆತ್ತುವ ಮೋಟಾರು ಪಂಪ್‌ ಚಾಲನೆಗೂ ಅನುಕೂಲವಾಗಿದೆ ಎನ್ನುತ್ತಾರೆ ಎನ್ನುತ್ತಾರೆ ಬಿರಡಹಳ್ಳಿಯ ನಿವಾಸಿ ಡಬ್ಲ್ಯೂ. ಕುಲಾಸೋ.

ಗ್ರಾಮದ ದುರ್ಬಲ ವರ್ಗಗಳಿಗೆ ಪಂಚಾಯಿತಿ ಸೌರ ದೀಪಗಳನ್ನು ಒದಗಿಸಿದೆ. ಗ್ರಾಮದ ಇಡೀ ಸಮುದಾಯ ಈ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿವೆ. ಹಲವು ಮನೆಗಳು ಸೌರ ದೀಪದ ವ್ಯವಸ್ಥೆ, ನೀರು ಕಾಯಿಸಲು ಸೌರ ಆಧಾರಿತ ವ್ಯವಸ್ಥೆ ಮಾಡಿಕೊಂಡಿವೆ.

ಹಲವು ಮನೆಗಳು ಎಲ್‌ ಪಿಜಿ ಜೊತೆಗೆ ಜೈವಿಕ ಅನಿಲ ಉತ್ಪಾದನೆಯ ವ್ಯವಸ್ಥೆ ಮಾಡಿಕೊಂಡು ಮಾಲಿನ್ಯವನ್ನು ನಿಯಂತ್ರಿಸುತ್ತಿವೆ. ಗ್ರಾಮ ಸಭೆ ಮತ್ತು ಇತರ ಸಭೆಗಳಲ್ಲಿ ಜನರಿಗೆ ಎಲೆಕ್ಟ್ರಿಕ್‌ ಕಾರು ಮತ್ತು ಬೈಕು ಇತ್ಯಾದಿಗಳ  ಬಳಕೆ ಬಗ್ಗೆ,  ಏಕ ಬಳಕೆಯ ಪ್ಲಾಸ್ಟಿಕ್‌ ನಿಷೇದದ ಬಗ್ಗೆ ಮಾಹಿತಿ ನೀಡಿ ಶಿಕ್ಷಣ ನೀಡುವ ಕೆಲಸಗಳನ್ನೂ ಪಂಚಾಯಿತಿ ಮಾಡುತ್ತಿದೆ.

ಗ್ರಾಮದ ತ್ಯಾಜ್ಯ ವಿಲೇವಾರಿಗೂ ಪಂಚಾಯಿತಿಯೂ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಿಸಿಕೊಂಡಿದೆ.

ಸಭೆಗಳಲ್ಲಿ ಮಾಲಿನ್ಯ ಮುಕ್ತ ಪರಿಸರ ನಿರ್ಮಾಣಕ್ಕಾಗಿ ಪ್ರತಿಜ್ಞೆ ಸ್ವೀಕಾರ, ಮಕ್ಕಳಿಂದ ಸ್ವಚ್ಛತಾ ಹೀ ಸೇವಾ ಆಂದೋಲನ, ರಸ್ತೆ ಬದಿಗಳಲ್ಲಿ ಎಚ್ಚರಿಕೆಯ ಫಲಕ ಹಾಕುವ ಮೂಲಕವೂ ಪರಿಸರವನ್ನು ಸ್ವಚ್ಛವಾಗಿ ಇರಿಸಿಕೊಳ್ಳುವ ಜಾಗೃತಿ ಮೂಡಿಸಲಾಗುತ್ತಿದೆ.

ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಅಡಿಯಲ್ಲಿ ವನಮಹೋತ್ಸವ ಆಚರಣೆ ಮೂಲಕ ಗಿಡಮರಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ವಿವಿಧ ತಳಿಗಳ ಒಂದು ಲಕ್ಷ ಸಸಿಗಳನ್ನು ಗ್ರಾಮ ಪಂಚಾಯಿತಿ ಪ್ರದೇಶದಲ್ಲಿ ನೆಡಲಾಗಿದೆ.ಇದರಿಂದಾಗಿ ಸುತ್ತ ಮುತ್ತ ಹಸಿರಿನ ಛಾಯೆ ಎದ್ದು ಕಾಣುತ್ತದೆ. ತುಂತುರು ಮತ್ತು ಹನಿ ನೀರಾವರಿಗೆ ಸೌರವಿದ್ಯುತ್‌ ನಿರಂತರ ಒದಗಿಸುವ ಮೂಲಕ ರೈತರಲ್ಲಿ ಹೊಸ ಭರವಸೆ ತುಂಬಲಾಗಿದೆ.

ಘನ ತ್ಯಾಜ್ಯ ಘಟಕವನ್ನು ಪಂಚಾಯಿತಿ ವತಿಯಿಂದಲೇ ನಿರ್ಮಿಸಿ ಅದಕ್ಕೆ ಸ್ವಚ್ಛ ಸಂಕೀರ್ಣ ಎಂಬ ಹೆಸರು ಇಡಲಾಗಿದೆ. ಇಲ್ಲಿ ವೈಜ್ಞಾನಿಕವಾಗಿ ಹಸಿ ಕಸ, ಒಣ ಕಸಗಳನ್ನು ವಿಂಗಡಿಸಿ ವಿಲೇವಾರಿ ಮಾಡುವ ವ್ಯವಸ್ಥೆ ಇದೆ.

ಗ್ರಾಮಗಳಲ್ಲಿ ಸ್ವಚ್ಚತೆಯನ್ನು ಕಾಪಾಡಲು ಮನೆಗಳಿಗೆ ಶೌಚಾಲಯ, ಹಿತ್ತಲ ಕೈ ತೋಟಗಳನ್ನು ಮಾಡಲು ಹೇಳಿಕೊಡಲಾಗಿದೆ. ಪರಿಸರ ಸಂರಕ್ಷಣೆಯ ಇಂತಹ ಹತ್ತಾರು ಕಾರ್ಯಕ್ರಮಗಳಿಗಾಗಿ ಜಿಲ್ಲೆ ಮತ್ತು ರಾಜ್ಯಮಟ್ಟದ ಹಲವಾರು ಪ್ರಶಸ್ತಿಗಳೂ ಬಿರಡಹಳ್ಳಿ ಗ್ರಾಮ ಪಂಚಾಯಿತಿಯ ಮುಡಿಗೇರಿವೆ.

ಪರಿಸರವನ್ನು ಹಸಿರಾಗಿಸಿ ಭೂಮಿಯ ರಕ್ಷಣೆಗಾಗಿ ನಿರಂತರ ಶ್ರಮಿಸುತ್ತಿರುವ ಈ ಪಂಚಾಯಿತಿಯ ಈ ಸಾಧನೆಗೆ ಈಗ ಕೇಂದ್ರ ಸರ್ಕಾರದ ರಾಷ್ಟ್ರೀಯ ಪಂಚಾಯಿತಿ ಪ್ರಶಸ್ತಿಯೂ ಲಭಿಸಿದೆ.

ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ಅಥವಾ ಯೂ ಟ್ಯೂಬ್‌ ಲಿಂಕ್‌ ಕ್ಲಿಕ್‌ ಮಾಡಿ.

ಇವುಗಳನ್ನೂ ಓದಿರಿ: 

ಪರಿಸರ ರಕ್ಷಣೆ: ಬಿರಡಹಳ್ಳಿಗೆ ರಾಷ್ಟ್ರೀಯ ಪ್ರಶಸ್ತಿ ಕಿರೀಟ
ರೆಸ್ಪಾನ್ಸಿವ್‌ ಗವರ್ನೆನ್ಸ್‌ ಗೆ ʼಸಂಪೂರ್ಣʼ ಸಹಕಾರ

ಮುಂದಿನ ಬಜೆಟಿಗೆ ಎನ್‌ಎಲ್‌ಟಿ: ಗೃಹ ಸಚಿವ ಪರಮೇಶ್ವರ್‌ ಭರವಸೆ
ಭ್ರಷ್ಟಾಚಾರಮಧ್ಯವರ್ತಿ ನಿವಾರಣೆಗೆ ತಂತ್ರಜ್ಞಾನ ಪರಿಹಾರ
ಗಾಂಧಿಗಿರಿಯ ʼಗುಲಾಬಿ ಗ್ಯಾಂಗ್‌ʼ ಕಥೆಗೆ ಇದೀಗ ಪುಸ್ತಕ ರೂಪ
ಏನಿದೆ ಈ ಪುಸ್ತಕಗಳಲ್ಲಿ?
ಪುಸ್ತಕಗಳ ಬಿಡುಗಡೆ ಸಮಾರಂಭ
ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ
ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ
ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕಂತು-2
ಸಾಮರ್ಥ್ಯ ವೃದ್ಧಿಗೆ ಡಿಜಿಟಲ್‌ ತಂತ್ರಜ್ಞಾನ ಬಳಕೆ ಹೇಗೆ?
ಇದೀಗ ಬಿಡುಗಡೆಯಾಗಿದೆ……
ಎನ್‌ಎಲ್‌ಟಿ ಬಳಕೆ: ಸಮಿತಿ ರಚನೆಗೆ ಸಚಿವ ಖರ್ಗೆ ನಿರ್ದೇಶನ
ಪಂಚಾಯಿತಿ ತರಬೇತಿಗೆ ದಿಕ್ಸೂಚಿ ಕಲಿಕಾ ತಂತ್ರಜ್ಞಾನ: ಕೇಂದ್ರ ಮನ್ನಣೆ
ದೇಶದಲ್ಲೇ ಮೊದಲು ಶಿವಮೊಗ್ಗದಲ್ಲಿ ದಿಕ್ಸೂಚಿ ಕಲಿಕಾ ತಂತ್ರಜ್ಞಾನ
ಗ್ರಾಮ ಪಂಚಾಯತಿಗಳಿಗೆ ತಂತ್ರಜ್ಞಾನ ಸಂಯೋಜನೆಗೆ ಇಸ್ರೋ ಆಸಕ್ತಿ

ಆತ್ಮ ನಿರ್ಭರ ಗ್ರಾಮ ಪಂಚಾಯ್ತಿ ಪುಸ್ತಕ ಮತ್ತು ಅದರ ಇಂಗ್ಲಿಷ್‌ ಆವೃತ್ತಿ ರಿಬೂಟಿಂಗ್‌ ಡೆಮಾಕ್ರಸಿ ಇನ್‌ ಗ್ರಾಮ ಪಂಚಾಯತ್ಸ್‌ ಪುಸ್ತಕದ ಡಿಜಿಟಲ್‌ ಆವೃತ್ತಿಯೂ ಇದೀಗ ಲಭ್ಯ. ಶೇಕಡಾ 50ರಷ್ಟು ದರ ಪಾವತಿಸಿ ಡಿಜಿಟಲ್‌ ಪುಸ್ತಕವನ್ನು ಪಡೆಯಬಹುದು. ಪುಸ್ತಕ ಪಡೆಯಲು ಸಂಪರ್ಕಿಸಿ: ಮೊಬೈಲ್‌ ನಂಬರ್‌ 9480215706 ಅಥವಾ 9845049970.
ಡಿಜಿಟಲ್‌ ಪುಸ್ತಕ ನೋಡಲು ಕೆಳಗಿನ ಚಿತ್ರಗಳನ್ನು ಕ್ಲಿಕ್‌ ಮಾಡಿರಿ:


Click the Image to view Digital Books

Monday, April 21, 2025

ಪರಿಸರ ರಕ್ಷಣೆ: ಬಿರಡಹಳ್ಳಿಗೆ ರಾಷ್ಟ್ರೀಯ ಪ್ರಶಸ್ತಿ ಕಿರೀಟ

 ಪರಿಸರ ರಕ್ಷಣೆ: ಬಿರಡಹಳ್ಳಿಗೆ ರಾಷ್ಟ್ರೀಯ ಪ್ರಶಸ್ತಿ ಕಿರೀಟ

ಬೆಂಗಳೂರು: ಪರಿಸರ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರದಿಂದ ನೀಡಲಾಗುವ ೨೦೨೫ರ ಸಾಲಿನ ರಾಷ್ಟ್ರೀಯ ಪಂಚಾಯಿತಿ ವಿಶೇಷ ಪ್ರಶಸ್ತಿಯ ಕಿರೀಟ ಕರ್ನಾಟಕದ ಹಾಸನ ಜಿಲ್ಲೆ ಸಕಲೇಶಪುರ ಬ್ಲಾಕಿನ ಬಿರಡಹಳ್ಳಿ ಗ್ರಾಮದ ಮುಡಿಗೆ ಏರಿದೆ.

ಕೇಂದ್ರ ಸರ್ಕಾರವು ವಿಶ್ವಸಂಸ್ಥೆಯು ನಿಗದಿ ಪಡಿಸಿರುವ ೧೭ ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಗ್ರಾಮ ಪಂಚಾಯಿತಿಗಳಿಗೆ ವಿವಿಧ ಪ್ರಶಸ್ತಿಗಳನ್ನು ನೀಡುತ್ತಿದ್ದು ಅದರಲ್ಲಿ ಹವಾಮಾನ/ ಪರಿಸರ ರಕ್ಷಣೆ ವಿಚಾರದಲ್ಲಿ ಮಾಡಿರುವ ಸಾಧನೆಗಾಗಿ ಬಿರಡಹಳ್ಳಿ ಗ್ರಾಮ ಪಂಚಾಯಿತಿ ವಿಶೇಷ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರವಾಗಿದೆ.

ಇಡೀ ಗ್ರಾಮದ ಕಚೇರಿ, ಮನೆ, ರಸ್ತೆಗಳಲ್ಲಿ ಸೌರ ದೀಪಗಳ ಅಳವಡಿಕೆ, ತೋಟಗಳಲ್ಲಿ ಮೋಟಾರುಗಳ ಚಾಲನೆಗೆ ಸೌರಶಕ್ತಿಯ ಬಳಕೆ, ಮನೆಗಳಲ್ಲಿ ಪರ್ಯಾಯ ಇಂಧನಕ್ಕಾಗಿ ಜೈವಿಕ ಅನಿಲದ ಬಳಕೆಯಂತಹ ಕ್ರಮಗಳ ಅನುಷ್ಠಾನಕ್ಕಾಗಿ ಬಿರಡಹಳ್ಳಿ ಗ್ರಾಮಕ್ಕೆ ಕೇಂದ್ರದ ಈ ಪುರಸ್ಕಾರ ಲಭ್ಯವಾಗಿದೆ.  

ಬಡತನ ಮುಕ್ತ ಮತ್ತು ವರ್ಧಿತ ಜೀವನೋಪಾಯ ಪಂಚಾಯತ್, ಆರೋಗ್ಯಪೂರ್ಣ ಪಂಚಾಯತ್, ಮಕ್ಕಳ ಸ್ನೇಹಿ ಪಂಚಾಯತ್, ಜಲ ಸಮೃದ್ಧ ಪಂಚಾಯತ್, ಸ್ವಚ್ಛ ಮತ್ತು ಹಸಿರು ಪಂಚಾಯತ್, ಪಂಚಾಯಿತಿಯಲ್ಲಿ ಸ್ವಾವಲಂಬಿ ಮೂಲಸೌಕರ್ಯ, ಸಾಮಾಜಿಕವಾಗಿ ನ್ಯಾಯಯುತ ಮತ್ತು ಸಾಮಾಜಿಕವಾಗಿ ಸುರಕ್ಷಿತ ಪಂಚಾಯತ್, ಉತ್ತಮ ಆಡಳಿತವುಳ್ಳ ಪಂಚಾಯತ್ ಹಾಗೂ ಮಹಿಳಾ ಸ್ನೇಹಿ ಪಂಚಾಯತ್- ಈ ೯ ವಿಷಯಗಳಲ್ಲಿ ಯಾವುದಾದರೂ ವಿಷಯದಲ್ಲಿ ವಿಶೇಷ ಸಾಧನೆ ಮಾಡಿದ ಪಂಚಾಯಿತಿಗಳಿಗೆ ೭ ವಿಶೇಷ ವರ್ಗದ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ನೀಡುತ್ತದೆ.

ಮೇಲೆ ಹೇಳಿದ ೯ ವಿಷಯಗಳಲ್ಲಿ ಉನ್ನತ ಸಾಧನೆ ಮಾಡಿದ ೩ ಗ್ರಾಮ ಪಂಚಾಯಿಗಳಿಗೆ ದೀ ದಯಾಳ್ ಉಪಾಧ್ಯಾಯ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ.

ಲ್ಲ ವಿಷಯಗಳ ಅಡಿಯಲ್ಲಿ ಅತ್ಯಧಿಕ ಸರಾಸರಿ ಅಂಕಗಳನ್ನು ಪಡೆದು ಉನ್ನತ ಸಾಧನೆ ಮಾಡಿದ ಮೂರು 3 ಗ್ರಾಮ ಪಂಚಾಯತಿಗಳು, ಬ್ಲಾಕ್‌ ಪಂಚಾಯಿತಿಗಳು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ನಾನಾಜಿ ದೇಶಮುಖ್ ಸರ್ವೋತ್ತಮ್ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ,

ಸ್ವತಃ ಆದಾಯದ ಮೂಲವನ್ನು (OSR) ಸಜ್ಜುಗೊಳಿಸಲು ಮತ್ತು ವೃದ್ಧಿಸಲು ಮಾಡಿದ ಪ್ರಯತ್ನಗಳಿಗಾಗಿ 3 ಗ್ರಾಮ ಪಂಚಾಯತಿಗಳಿಗೆ ಆತ್ಮ ನಿರ್ಭರ್ ಪಂಚಾಯತ್ ವಿಶೇಷ ಪ್ರಶಸ್ತಿ,

ನಿವ್ವಳ-ಶೂನ್ಯ ಇಂಗಾಲದ ಹೊರಸೂಸುವಿಕೆ ಮತ್ತು ನವೀಕರಿಸಬಹುದಾದ ಇಂಧನ ಮೂಲದ ಬಳಕೆಯನ್ನು ಸಾಧಿಸಿದ 3 ಗ್ರಾಮ ಪಂಚಾಯತಿಗಳಿಗೆ ಹವಾಮಾನ ಕ್ರಮ ಅಥವಾ ಪರಿಸರ ರಕ್ಷಣಾ ವಿಶೇಷ ಪ್ರಶಸ್ತಿ,

ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವಲ್ಲಿ ಗ್ರಾಮ ಪಂಚಾಯತಿಗಳಿಗೆ ಸಾಂಸ್ಥಿಕ ಬೆಂಬಲವನ್ನು ನೀಡಿದ 3 ಸಂಸ್ಥೆಗಳಿಗೆ ಪಂಚಾಯತ್ ಕ್ಷಮತಾ ನಿರ್ಮಾಣ್ ಸರ್ವೋತ್ತಮ್ ಸಂಸ್ಥಾನ ಪುರಸ್ಕಾರ,

ನಂತರದ ವರ್ಷಗಳಲ್ಲಿ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳಿಗೆ ಅರ್ಹತೆ ಪಡೆದ ಮತ್ತು ಶಾರ್ಟ್‌ಲಿಸ್ಟ್ ಮಾಡಲಾದ ಒಂದು ಗ್ರಾಮ ಪಂಚಾಯತಿಗೆ ನಾನಾಜಿ ದೇಶಮುಖ್ ಸರ್ವೋತ್ತಮ್ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ,

ಹಾಗೂ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿಗಳಿಂದ ಶೇಕಡಾ ೯೦ಕ್ಕಿಂತ ಉತ್ತಮ ಪಾಲ್ಗೊಳ್ಳುವಿಕೆಗಾಗಿ ಒಂದು ಪಂಚಾಯಿತಿಗೆ  ಅತ್ಯುತ್ತಮ ಪಾಲ್ಗೊಳ್ಳುವಿಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ.

ಕೇಂದ್ರ ಸರ್ಕಾರ ನೀಡುತ್ತಿರುವ ಈ ಪ್ರಶಸ್ತಿಗಳಲ್ಲಿ ಹವಾಮಾನ ಕ್ರಮ ಅಥವಾ ಪರಿಸರ ರಕ್ಷಣೆಗಾಗಿ ನೀಡುವ ಇನ್ನೆರಡು ಪ್ರಶಸ್ತಿಗಳನ್ನು ಮಹಾರಾಷ್ಟ್ರದ ಡವ್ವಾ ಎಸ್‌ ಗ್ರಾಮ ಪಂಚಾಯಿತಿ ಮತ್ತು ಬಿಹಾರಿನ ಮೋತಿಪುರ ಗ್ರಾಮ ಪಂಚಾಯಿತಿ ಹಂಚಿಕೊಂಡಿವೆ.

ಆತ್ಮ ನಿರ್ಭರ ಗ್ರಾಮ ಪಂಚಾಯಿತಿ ಪ್ರಶಸ್ತಿಯನ್ನು ತೆಲಂಗಾಣದ ಮಾಲ್‌ ಗ್ರಾಮ ಪಂಚಾಯಿತಿ, ಒಡಿಶಾದ ಹತ್ಬದ್ರಾ ಗ್ರಾಮ ಪಂಚಾಯಿತಿ, ಆಂದ್ರ ಪ್ರದೇಶದ ಗೊಲ್ಲಪುಡಿ ಗ್ರಾಮ ಪಂಚಾಯಿತಿ ಪಡೆದುಕೊಂಡಿವೆ.

ಪಂಚಾಯತ್‌ ಕ್ಷಮತಾ ನಿರ್ಮಾಣ ಸರ್ವೋತ್ತಮ ಸಂಸ್ಥಾನ ಪುರಸ್ಕಾರಕ್ಕೆ  ಕೇರಳದ ಸ್ಥಳೀಯ ಆಡಳಿತ ಸಂಸ್ಥೆ, ಒಡಿಶಾದ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಮತ್ತು ಅಸ್ಸಾಮಿನ ರಾಜ್ಯ ಪಂಚಾಯತ್‌ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಪಾತ್ರವಾಗಿದೆ.

ಅಭಿನಂದನೆ

ಆತ್ಮ ನಿರ್ಭರ ಗ್ರಾಮ ಪಂಚಾಯಿತಿಗಳ ಸಲುವಾಗಿ ಶ್ರಮಿಸುತ್ತಿರುವ ಹಾಗೂ ಇದಕ್ಕಾಗಿಯೇ ಪುಸ್ತಕಗಳನ್ನು ಬರೆದಿರುವ ಬೆಂಗಳೂರಿನ ಸಂಪೂರ್ಣ ಸ್ವರಾಜ್‌ ಫೌಂಡೇಶನ್‌ ಸಂಸ್ಥಾಪಕ ಡಾ. ಶಂಕರ ಕೆ ಪ್ರಸಾದ್‌ ಹಾಗೂ ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿಗಳ ಸಾಮರ್ಥ್ಯ ವೃದ್ಧಿಗಾಗಿ ಶ್ರಮಿಸುತ್ತಿರುವ ರೆಸ್‌ ಗೌ (ಫೌಂಡೇಶನ್‌ ಫಾರ್‌ ರೆಸ್ಪಾನ್ಸಿವ್‌ ಗವರ್ನೆನ್ಸ್‌) ಸಂಸ್ಥೆಯ ಹಿರಿಯ ರಾಜ್ಯ ಒಡನಾಡಿ ಶೈಲಜಾ ಎಸ್‌ ಅವರು ಬಿರಡಹಳ್ಳಿ ಗ್ರಾಮ ಪಂಚಾಯಿತಿಯನ್ನು ಈ ಸಾಧನೆಗಾಗಿ ಅಭಿನಂದಿಸಿದ್ದಾರೆ.

ಇವುಗಳನ್ನೂ ಓದಿರಿ: 

ರೆಸ್ಪಾನ್ಸಿವ್‌ ಗವರ್ನೆನ್ಸ್‌ ಗೆ ʼಸಂಪೂರ್ಣʼ ಸಹಕಾರ
ಮುಂದಿನ ಬಜೆಟಿಗೆ ಎನ್‌ಎಲ್‌ಟಿ: ಗೃಹ ಸಚಿವ ಪರಮೇಶ್ವರ್‌ ಭರವಸೆ
ಭ್ರಷ್ಟಾಚಾರಮಧ್ಯವರ್ತಿ ನಿವಾರಣೆಗೆ ತಂತ್ರಜ್ಞಾನ ಪರಿಹಾರ
ಗಾಂಧಿಗಿರಿಯ ʼಗುಲಾಬಿ ಗ್ಯಾಂಗ್‌ʼ ಕಥೆಗೆ ಇದೀಗ ಪುಸ್ತಕ ರೂಪ
ಏನಿದೆ ಈ ಪುಸ್ತಕಗಳಲ್ಲಿ?
ಪುಸ್ತಕಗಳ ಬಿಡುಗಡೆ ಸಮಾರಂಭ
ರೇಡಿಯೋ ಶಿವಮೊಗ್ಗದಲ್ಲಿ ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ
ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ
ಶಿವಮೊಗ್ಗ ಬಾನುಲಿಯಲ್ಲಿ ಬಂತು ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕಂತು-2
ಸಾಮರ್ಥ್ಯ ವೃದ್ಧಿಗೆ ಡಿಜಿಟಲ್‌ ತಂತ್ರಜ್ಞಾನ ಬಳಕೆ ಹೇಗೆ?
ಇದೀಗ ಬಿಡುಗಡೆಯಾಗಿದೆ……
ಎನ್‌ಎಲ್‌ಟಿ ಬಳಕೆ: ಸಮಿತಿ ರಚನೆಗೆ ಸಚಿವ ಖರ್ಗೆ ನಿರ್ದೇಶನ
ಪಂಚಾಯಿತಿ ತರಬೇತಿಗೆ ದಿಕ್ಸೂಚಿ ಕಲಿಕಾ ತಂತ್ರಜ್ಞಾನ: ಕೇಂದ್ರ ಮನ್ನಣೆ
ದೇಶದಲ್ಲೇ ಮೊದಲು ಶಿವಮೊಗ್ಗದಲ್ಲಿ ದಿಕ್ಸೂಚಿ ಕಲಿಕಾ ತಂತ್ರಜ್ಞಾನ
ಗ್ರಾಮ ಪಂಚಾಯತಿಗಳಿಗೆ ತಂತ್ರಜ್ಞಾನ ಸಂಯೋಜನೆಗೆ ಇಸ್ರೋ ಆಸಕ್ತಿ

ಆತ್ಮ ನಿರ್ಭರ ಗ್ರಾಮ ಪಂಚಾಯ್ತಿ ಪುಸ್ತಕ ಮತ್ತು ಅದರ ಇಂಗ್ಲಿಷ್‌ ಆವೃತ್ತಿ ರಿಬೂಟಿಂಗ್‌ ಡೆಮಾಕ್ರಸಿ ಇನ್‌ ಗ್ರಾಮ ಪಂಚಾಯತ್ಸ್‌ ಪುಸ್ತಕದ ಡಿಜಿಟಲ್‌ ಆವೃತ್ತಿಯೂ ಇದೀಗ ಲಭ್ಯ. ಶೇಕಡಾ 50ರಷ್ಟು ದರ ಪಾವತಿಸಿ ಡಿಜಿಟಲ್‌ ಪುಸ್ತಕವನ್ನು ಪಡೆಯಬಹುದು. ಪುಸ್ತಕ ಪಡೆಯಲು ಸಂಪರ್ಕಿಸಿ: ಮೊಬೈಲ್‌ ನಂಬರ್‌ 9480215706 ಅಥವಾ 9845049970.
ಡಿಜಿಟಲ್‌ ಪುಸ್ತಕ ನೋಡಲು ಕೆಳಗಿನ ಚಿತ್ರಗಳನ್ನು ಕ್ಲಿಕ್‌ ಮಾಡಿರಿ:


Click the Image to view Digital Books

Advertisement