Showing posts with label Kerala. Show all posts
Showing posts with label Kerala. Show all posts

Thursday, March 20, 2025

ಪುಟ್ಟ ಬಾಲಕಿಯ ಸಂಗೀತ ಪ್ರವಾಹಕ್ಕೆ ಖಾಕಿ ತಡೆ!

 ಪುಟ್ಟ ಬಾಲಕಿಯ ಸಂಗೀತ ಪ್ರವಾಹಕ್ಕೆ ಖಾಕಿ ತಡೆ!

ತ್ತು ವರುಷದ ಪುಟ್ಟ ಬಾಲಕಿ ಗಂಗಾ ಶಶಿಧರನ್‌ ಇತ್ತೀಚಿನ ದಿನಗಳಲ್ಲಿ ಬೆಳಕಿಗೆ ಬಂದಿರುವ ಅದ್ಭುತ ಸಂಗೀತ ಪ್ರತಿಭೆ. ಈಕೆಯ ಪಿಟೀಲು ವಾದನದ ಮಾಧುರ್ಯಕ್ಕೆ ತಲೆದೂಗದವರಿಲ್ಲ.

ಆದರೆ ಇತ್ತೀಚೆಗೆ ಕೇರಳದ ಅಲಪ್ಪುಳದ ಕೊಟ್ಟಂಕುಲಂಗರ ದೇವಸ್ಥಾನದಲ್ಲಿ ಈಕೆಯ ಭಕ್ತಿ ಸಂಗೀತಕ್ಕೆ ಪೊಲೀಸರ ತಡೆ ಬಿತ್ತು. ದೇವಸ್ಥಾನದಲ್ಲಿ ಇನ್ನೂ ಉತ್ಸವ ಮುಂದುವರೆದಿತ್ತು. ದೇವಸ್ಥಾನ ಸಮೀಪದ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಪುಟ್ಟ ಬಾಲಕಿ ಶಶಿ ಭಾವಪೂರ್ಣವಾಗಿ ಪಿಟೀಲು ವಾದನದಲ್ಲಿ ನಿರತಳಾಗಿದ್ದಳು.

ಆಕೆ ನುಡಿಸುತ್ತಿದ್ದ ʼಮರುತಮಲೈ ಮಾಮನಿಯೇ ಮುರುಗಯ್ಯʼ ತಮಿಳು ಹಾಡಿಗೆ ಅಲ್ಲಿ ನೆರೆದಿದ್ದ ಸಹಸ್ರಾರು ಮಂದಿ ತಲೆದೂಗುತ್ತಾ ಕುಳಿತಿದ್ದರು.

ಅಷ್ಟರಲ್ಲಿ ಅಲ್ಲಿಗೆ ಬಂದ ಕೆಲವರು ʼರಾತ್ರಿ ೧೦ ಗಂಟೆಯಾಗಿದೆ. ಕಚೇರಿ ನಿಲ್ಲಿಸುʼ ಎಂದು ಆಕೆಯ ಬಳಿಗೆ ವೇದಿಕೆಯೇರಿ ಬಂದು ಸೂಚಿಸಿದರು. ಈ ದಿಢೀರ್‌ ಸೂಚನೆಯಿಂದ ಪುಟ್ಟ ಬಾಲಕಿ ಆಘಾತಕ್ಕೆ ಒಳಗಾದಳು. ನೆರೆದಿದ್ದ ಜನರೂ ದಿಗ್ಭ್ರಮೆಗೊಂಡರು. ಪೊಲೀಸರೂ ಬಂದು ಸಂಗೀತ ಕಾರ್ಯಕ್ರಮ ನಿಲ್ಲಿಸಿದರು.

ಕೊನೆಗೆ ಆ ಪುಟ್ಟ ಬಾಲಕಿ ಕೊಠಡಿಯೊಂದರಲ್ತಲಿ ಪ್ರೀತಿಯ ಪಿಟೀಲನ್ನು ಹಿಡಿದುಕೊಂಡು ಕುಳಿತಿದ್ದ ದೃಶ್ಯವನ್ನು ಕೂಡಾ ಸೇರಿಸಿ ಮಲಯಾಳಂ ಮನೋರಮಾ ವರದಿ ಮಾಡಿದೆ.

ಪುಟ್ಟ ಬಾಲಕಿಯ ಪಿಟೀಲುವಾದನಕ್ಕೆ ತಡೆ ಹಾಕಿದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ವಿಡಿಯೋ ನೋಡಲು ಕೆಳಗೆ ಕ್ಲಿಕ್‌ ಮಾಡಿರಿ. 

ಈ ಘಟನೆ ಬಗ್ಗೆ ನಿಮಗೆ ಏನನ್ನಿಸಿತು? ಕಾಮೆಂಟ್ಸ್‌ ವಿಭಾಗದಲ್ಲಿ ಬರೆಯಿರಿ.

ಬಾಲಕಿಯ ಮಧುರವಾದ ಪಿಟೀಲು ಧ್ವನಿ ಆಲಿಸಲು ಈ ಕೆಳಗಿನ ಸುದ್ದಿಯಲ್ಲಿನ ವಿಡಿಯೋ ನೋಡಿರಿ:

ಪುಸ್ತಕಗಳ ಬಿಡುಗಡೆ ಹೀಗಾಯ್ತು ನೋಡಿ…

Thursday, May 30, 2024

ಕೇರಳಕ್ಕೆ ಬಂತು ಮುಂಗಾರು, ಭಾರೀ ಮಳೆ, ಯೆಲ್ಲೋ ಅಲರ್ಟ್‌

 ಕೇರಳಕ್ಕೆ ಬಂತು ಮುಂಗಾರು, ಭಾರೀ ಮಳೆ, ಯೆಲ್ಲೋ ಅಲರ್ಟ್‌

ತಿರುವನಂತಪುರಂ: ಕೇರಳ ಮತ್ತು ಈಶಾನ್ಯ ಭಾರತದ ಬಹುತೇಕ ಭಾಗಗಳಿಗೆ  ಈದಿನ (30 ಮೇ 2024) ನೈಋತ್ಯ ಮುಂಗಾರು ಆಗಮಿಸಿದೆ, ಕೇರಳದಲ್ಲಿ ಮತ್ತು ಮಣಿಪುರದಲ್ಲಿ ಭಾರೀ ಮಳೆ ಆರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಟಿಸಿದೆ.

ಮೇ 31 ರ ವೇಳೆಗೆ ಕೇರಳದ ಮೇಲೆ ಮುಂಗಾರು ಪ್ರಾರಂಭವಾಗಲಿದೆ ಎಂದು ಹವಾಮಾನ ಇಲಾಖೆ ಇದಕ್ಕೆ ಮುನ್ನ ಮೊದಲು ಘೋಷಿಸಿತ್ತು. ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ, ಇದರ ಪರಿಣಾಮವಾಗಿ ಮೇ ತಿಂಗಳಲ್ಲಿ ಹೆಚ್ಚುವರಿ ಮಳೆಯಾಗಿದೆ ಎಂದು ಹವಾಮಾನ ಕಚೇರಿಯ ಅಂಕಿಅಂಶಗಳು ಹೇಳಿವೆ.

ಕೇರಳಕ್ಕೆ ಸಾಮಾನ್ಯವಾಗಿ ನೈಋತ್ಯ ಮುಂಗಾರು ಜೂನ್‌ 1ರಂದು ಪ್ರಾರಂಭವಾಗುತ್ತದೆ. ಹಾಗೆಯೇ ಈಶಾನ್ಯ ಭಾರತದ  ಅರುಣಾಚಲ ಪ್ರದೇಶ, ತ್ರಿಪುರಾ, ನಾಗಾಲ್ಯಾಂಡ್, ಮೇಘಾಲಯ, ಮಿಜೋರಾಂ, ಮಣಿಪುರ ಮತ್ತು ಅಸ್ಸಾಂನಲ್ಲಿ ಜೂನ್ 5 ರಂದು ಮುಂಗಾರು ಆಗಮಿಸುವುದು ವಾಡಿಕೆಯಾಗಿದೆ..

ಮುಂಗಾರು ಆಗಮನದ ಹಿನ್ನೆಲೆಯಲ್ಲಿ ಐಎಂಡಿಯು ತನ್ನ ಮುನ್ಸೂಚನೆಯನ್ನು ಪರಿಷ್ಕರಿಸಿದೆ ಮತ್ತು ಗುರುವಾರ ಕೇರಳದ 14 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆಯನ್ನು ನೀಡಿದೆ. ಹಳದಿ ಎಚ್ಚರಿಕೆಯ ಪ್ರಕಾರ 64.5 ಎಂಎಂನಿಂದ 115.5 ಎಂಎಂವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ.

ಯಾವ ಯಾವ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ?

ಮೇ 31: ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್

ಜೂನ್ 1: ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು

ಜೂನ್ 2: ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು.

Wednesday, August 17, 2022

ಪಿಂಚಣಿ ಮುಂದೂಡಿದ ವೇತನ, ಪಿಂಚಣಿ ಹಕ್ಕು ಸಾಂವಿಧಾನಿಕ: ಕೇರಳ ಹೈಕೋರ್ಟ್

 ಪಿಂಚಣಿ ಮುಂದೂಡಿದ ವೇತನ, ಪಿಂಚಣಿ ಹಕ್ಕು ಸಾಂವಿಧಾನಿಕ: ಕೇರಳ ಹೈಕೋರ್ಟ್

ತಿರುವನಂತಪುರಂ: ಪಿಂಚಣಿಯು ಉದ್ಯೋಗದಾತರ ಇಚ್ಛೆಯಂತೆ ಪಾವತಿಸಬೇಕಾದ ವರದಾನವಲ್ಲ; ನಿಧಿಯ ಕೊರತೆಯನ್ನು ಸಮರ್ಥಿಸುವ ಮೂಲಕ ಉದ್ಯೋಗದಾತನು ಜವಾಬ್ದಾರಿಯಿಂದ ಹೊರಗುಳಿಯುವಂತಿಲ್ಲ.

ಪಿಂಚಣಿ ಪಡೆಯುವ ಹಕ್ಕು ಸಾಂವಿಧಾನಿಕ ಹಕ್ಕು. ಅದು ಉದ್ಯೋಗದಾತರ ಇಚ್ಛೆಯಂತ ನಿವೃತ್ತ ಉದ್ಯೋಗಿಗಳಿಗೆ ಪಾವತಿ ಮಾಡಬೇಕಾದ ವರದಾನ ಅಲ್ಲ. ನಿಧಿಯ ಕೊರತೆಯನ್ನು ಮುಂದಿಟ್ಟ ಉದ್ಯೋಗದಾತ ತನ್ನ ಜವಾಬ್ದಾರಿ ತಪ್ಪಿಸಿಕೊಳ್ಳುವಂತಿಲ್ಲ ಎಂದು ಕೇರಳ ಹೈಕೋರ್ಟ್‌ ತೀರ್ಪು ನೀಡಿದೆ.

೨೦೨೨ರ ಆಗಸ್ಟ್‌ ೫ರ ಶುಕ್ರವಾರ ಈ ಮಹತ್ವದ ತೀರ್ಪು ನೀಡಿದ ಕೇರಳ ಹೈಕೋರ್ಟ್‌ ನ್ಯಾಯಮೂರ್ತಿ ವಿ.ಜಿ. ಅರುಣ್‌ ಅವರು ʼನಿವೃತ್ತಿ ವೇತನವು ಮುಂದೂಡಿಕೆಯಾಗಿರುವ ವೇತನ. ನಿವೃತ್ತಿ ವೇತನದ ಹಕ್ಕು ಭಾರತೀಯ ಸಂವಿಧಾನದ ೩೦೦ ಎ ವಿಧಿಯ ಅಡಿಯಲ್ಲಿ ಇರುವ ಆಸ್ತಿ ಹಕ್ಕಿಗೆ ಹೋಲುತ್ತದೆ ಎಂದು ಹೇಳಿದರು.

"ಪಿಂಚಣಿಯು ಇನ್ನು ಮುಂದೆ ಉದ್ಯೋಗದಾತರ ಇಚ್ಛೆ ಮತ್ತು ಆಸೆಗಳಿಗೆ ಅನುಗುಣವಾಗಿ ಪಾವತಿಸಬೇಕಾದ ವರದಾನವಲ್ಲ. ಪಿಂಚಣಿಯು ಮುಂದೂಡಿಕೆಯಾಗಿರುವ  ಸಂಬಳವಾಗಿದೆ, ಇದು ಸಂವಿಧಾನದ 300 ಎ ಯಂತೆ ಇರುವ ಆಸ್ತಿ ಹಕ್ಕನ್ನು ಹೋಲುತ್ತದೆ. ಪಿಂಚಣಿ ಹಕ್ಕು, ಮೂಲಭೂತ ಹಕ್ಕಲ್ಲದಿದ್ದರೆ, ಖಂಡಿತವಾಗಿಯೂ ಒಂದು ಸಾಂವಿಧಾನಿಕ ಹಕ್ಕು. ಕಾನೂನಿನ ಅಧಿಕಾರವನ್ನು ಹೊರತುಪಡಿಸಿ ನಿವೃತ್ತ ಉದ್ಯೋಗಿಯು ಈ ಹಕ್ಕಿನಿಂದ ವಂಚಿತರಾಗಲು ಸಾಧ್ಯವಿಲ್ಲ." ಎಂದು ತೀರ್ಪು ಹೇಳಿದೆ.

ರಾಜ್ಯ ಸರ್ಕಾರದ ಸಂಪೂರ್ಣ ಸ್ವಾಮ್ಯದ ನೋಂದಾಯಿತ ಸೊಸೈಟಿಯಾದ ಕೇರಳ ಬುಕ್ಸ್ ಅಂಡ್ ಪಬ್ಲಿಕೇಷನ್ಸ್ ಸೊಸೈಟಿಯ (ಕೆಬಿಪಿಎಸ್) ಹಾಲಿ ಮತ್ತು ನಿವೃತ್ತ ನೌಕರರು ಸಲ್ಲಿಸಿದ ಅರ್ಜಿಗಳ ಸಮೂಹದ ವಿಚಾರಣೆ ನಡೆಸಿದ್ದ ನ್ಯಾಯಾಲಯವು ತೀರ್ಪು ನೀಡಿದೆ. ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್), ವಿವಿಧ ನಿಬಂಧನೆಗಳ ಕಾಯಿದೆ ಮತ್ತು ಉದ್ಯೋಗಿಗಳ ಪಿಂಚಣಿ ಯೋಜನೆಗಳನ್ನು ಕೆಬಿಪಿಎಸ್ ಉದ್ಯೋಗಿಗಳಿಗೆ ಅನ್ವಯಿಸುವಂತೆ ಮಾಡಲಾಗಿದೆ ಎಂದು ಅದು ಹೇಳಿದೆ.

ಕೆಬಿಪಿಎಸ್‌ ಸಂಪೂರ್ಣವಾಗಿ ಸರ್ಕಾರದ ಒಡೆತನದಲ್ಲಿ ಇದ್ದರೂ ಸರ್ಕಾರಿ ನೌಕರರು ಮತ್ತು ಕೆಬಿಪಿಎಸ್‌ ನೌಕರರ ನಡುವಿನ ಸಂಬಳ ಮತ್ತು ಪಿಂಚಣಿಗಳಲ್ಲಿನ ಗಮನಾರ್ಹ ವ್ಯತ್ಯಾಸ ಇರುವುದನ್ನು ಕಾರ್ಮಿಕ ಸಂಘಟನೆಗಳು ಎತ್ತಿ ತೋರಿಸಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಮಿಕ ನ್ಯಾಯಾಲಯದ ನಿರ್ದೇಶನದಂತೆ, ಕೆಬಿಪಿಎಸ್ ನೌಕರರಿಗೆ ಪ್ರತ್ಯೇಕ ಪಿಂಚಣಿ ನಿಧಿಯನ್ನು ರಚಿಸುವ ಸಾಧ್ಯತೆಯ ಬಗ್ಗೆ ವರದಿ ಸಲ್ಲಿಸಲು ತಜ್ಞರ ಸಮಿತಿಯನ್ನು ರಚಿಸಲಾಗಿತ್ತು.

ವರದಿಯು ಕೇರಳ ಸೇವಾ ನಿಯಮಗಳ ಭಾಗ III ರ ಅಡಿಯಲ್ಲಿ ಒದಗಿಸಲಾದ ಪಿಂಚಣಿ ಪಾವತಿಯನ್ನು ಸೂಚಿಸಿದೆ ಸರ್ಕಾರ ಮತ್ತು ರಾಜ್ಯದಿಂದ ಬಜೆಟ್ ಬೆಂಬಲದೊಂದಿಗೆ ಅಂತಿಮವಾಗಿ ಕೆಬಿಪಿಎಸ್‌ (KBPS) ನೌಕರರ ಕೊಡುಗೆ ಪಿಂಚಣಿ ಮತ್ತು ಸಾಮಾನ್ಯ ಭವಿಷ್ಯ ನಿಧಿ ನಿಯಮಗಳು, 2014 ಇವುಗಳನ್ನು ಪ್ರಕಟಿಸಲು ಮಂಜೂರಾತಿ ನೀಡಲಾಗಿತ್ತು..

ನ್ಯಾಯಾಲಯದಲ್ಲಿ ನಿವೃತ್ತ ನೌಕರರು ವಕೀಲರಾದ ಕಾಳೀಶ್ವರಂ ರಾಜ್ ಮತ್ತು ಟಿ.ಎಂ.ರಾಮನ್ ಕರ್ತಾ ಅವರ ಮೂಲಕ ವಾದ ಮಂಡಿಸಿದರು ಮತ್ತು ಪಿಂಚಣಿ ನಿಯಮಗಳಿಗೆ ಅನುಸಾರವಾಗಿ ನಿವೃತ್ತಿಯಾದ ದಿನಾಂಕದಿಂದ ಪೂರ್ಣ ಪಿಂಚಣಿ ಪಡೆಯಲು ನಿವೃತ್ತರು ಅರ್ಹರು ಎಂದು ವಕೀಲರು ವಾದಿಸಿದರು.

ಮತ್ತೊಂದೆಡೆ, ಹಾಲಿ ನೌಕರರು ವಕೀಲರಾದ ಪಿ. ರಾಮಕೃಷ್ಣನ್ ಮತ್ತು ಶೆರ್ರಿ ಜೆ. ಥಾಮಸ್ ಅವರ ಮೂಲಕ ಹಾಜರಾಗಿ, ಇಪಿಎಫ್ ಯೋಜನೆ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಉಲ್ಲೇಖಿಸಿ ಪಿಂಚಣಿ ನಿಯಮಾವಳಿಗಳನ್ನು ಸೂಚಿಸುವ ಸರ್ಕಾರಿ ಆದೇಶವನ್ನು ರದ್ದುಗೊಳಿಸಬೇಕು ಎಂದು ಪ್ರತಿಪಾದಿಸಿದರು.

ಕೆಬಿಪಿಎಸ್ ಪರ ವಕೀಲೆ ಲತಾ ಆನಂದ್ ವಾದ ಮಂಡಿಸಿ, ಸೊಸೈಟಿಯು ಭಾರೀ ಲಾಭದಲ್ಲಿ ನಡೆಯುತ್ತಿಲ್ಲ, ಯಾವುದೇ ಸಂದರ್ಭದಲ್ಲೂ ಸೊಸೈಟಿಯಿಂದ ಬರುವ ಆದಾಯವನ್ನು ನಿವೃತ್ತ ನೌಕರರಿಗೆ ಪಿಂಚಣಿ ಪಾವತಿಗೆ ಬಳಸಲಾಗದು. ಈಗಾಗಲೇ ನೀಡಿದ ಕೊಡುಗೆಯನ್ನು ಇಪಿಎಫ್ ಸಂಸ್ಥೆ ಮರುಪಾವತಿಸಿದರೆ ಅಥವಾ ಸರ್ಕಾರದಿಂದ ಬರಬೇಕಾದ ದೊಡ್ಡ ಮೊತ್ತವನ್ನು ಪಾವತಿಸಿದರೆ ಮಾತ್ರ ಪೂರ್ಣ ಪಿಂಚಣಿ ಪಾವತಿಸಬಹುದು ಎಂದು ಹೇಳಿದರು.

ಪಿಂಚಣಿ ನಿಯಮಾವಳಿಗಳ ಪ್ರಕಾರ, ನೌಕರನು ತನ್ನ ನಿವೃತ್ತಿಯ ಮರುದಿನದಿಂದ ಪಿಂಚಣಿಗೆ ಅರ್ಹನಾಗುತ್ತಾನೆ. ಪಿಂಚಣಿದಾರರಿಗೆ ನ್ಯಾಯಸಮ್ಮತವಾಗಿ ಪಾವತಿಸಬೇಕಾದ ಮೊತ್ತಕ್ಕಿಂತ ಕಡಿಮೆ ಮೊತ್ತವನ್ನು ಪಾವತಿಸಲು ಉದ್ಯೋಗದಾತರಿಗೆ ಅನುವು ಮಾಡಿಕೊಡುವ ಯಾವುದೇ ನಿಬಂಧನೆಗಳನ್ನು ನಿಯಮಾವಳಿಗಳು ಒಳಗೊಂಡಿಲ್ಲ ಎಂದು ನ್ಯಾಯಾಲಯವು ವಿಶ್ಲೇಷಿಸಿತು.  

"ಪಿಂಚಣಿ ಮೂಲ ನಿಧಿಯ ಒಂದು ಗಮನಾರ್ಹ ಭಾಗವು ಇಪಿಎಫ್ ಸಂಸ್ಥೆಯಿಂದ ಮರುಪಾವತಿಸಬೇಕಾದ ಮೊತ್ತವನ್ನು ಒಳಗೊಂಡಿರುತ್ತದೆ ಎಂಬುದು ನಿಜವಿರಬಹುದು. ವಾಸ್ತವವಾಗಿ ಇದುವರೆಗೆ ಯಾವುದೇ ಮೊತ್ತವನ್ನು ಮರುಪಾವತಿ ಮಾಡಲಾಗಿಲ್ಲ ಎಂಬ ಅಂಶವೂ ವಿವಾದಿತವಾಗಿಲ್ಲ. ಆಗಲೂ, ಈ ಹಿನ್ನೆಲೆಯಲ್ಲಿ ನಿವೃತ್ತ ನೌಕರರಿಗೆ ಪಿಂಚಣಿ ನಿರಾಕರಿಸಬಹುದೇ ಎಂಬುದೇ ಪ್ರಶ್ನೆ”.

ಸುಪ್ರೀಂ ಕೋರ್ಟ್ ಪೂರ್ವನಿದರ್ಶನಗಳನ್ನು ಅವಲೋಕಿಸಿದ ನಂತರ, ನ್ಯಾಯಮೂರ್ತಿ ಅರುಣ್ ಅವರು ಪಿಂಚಣಿ ಬಾಕಿಯನ್ನು ಪೂರ್ಣವಾಗಿ ಪಾವತಿಸಲು ಕೆಬಿಪಿಎಸ್‌ (KBPS) ಬದ್ಧವಾಗಿದೆ ಎಂದು ಹೇಳಿದರು.

"ಪಿಂಚಣಿ ನಿಯಮಗಳನ್ನು ರೂಪಿಸಿದ ನಂತರ ಮತ್ತು ಇಪಿಎಫ್ ಪಿಂಚಣಿ ನಿಧಿಗೆ ಕೊಡುಗೆ ಪಾವತಿಯನ್ನು ನಿಲ್ಲಿಸಿದ ನಂತರ, ಹಣದ ಕೊರತೆಯನ್ನು ಸಮರ್ಥಿಸುವ ಮೂಲಕ ಸೊಸೈಟಿಯು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ."

ಆದ್ದರಿಂದ, ಕೆಬಿಪಿಎಸ್ ತನ್ನ ಲಾಭ ಅಥವಾ ಆದಾಯದಿಂದ ಅಗತ್ಯವಿರುವ ಹಣವನ್ನು ನೀಡಬೇಕು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿತು. ಇಪಿಎಫ್ ಸಂಘಟನೆಯೊಂದಿಗಿನ ವಿವಾದ ಮತ್ತು ಇಪಿಎಫ್ ಕೊಡುಗೆಯನ್ನು ಮರಳಿ ಪಡೆಯುವಲ್ಲಿನ ವಿಳಂಬವು ನಿವೃತ್ತ ಉದ್ಯೋಗಿಗಳಿಗೆ ಅರ್ಹ ಪಿಂಚಣಿಗಳನ್ನು ಪಾವತಿಸದಿರುವುದಕ್ಕೆ ಸಕಾರಣವಾದ ಸ್ವೀಕಾರಾರ್ಹ ಕಾರಣವಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟ ಪಡಿಸಿತು.

ಅದರಂತೆ ನಿವೃತ್ತ ಹಾಗೂ ಹಾಲಿ ನೌಕರರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್‌ ಮಾನ್ಯ ಮಾಡಿತು.

ಇಪಿಎಫ್‌ ಪಿಂಚಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಮೇಲ್ಮನವಿಗಳ ಮೇಲಿನ ತನ್ನ ತೀರ್ಪನ್ನು ಸುಪ್ರೀಂಕೋರ್ಟ್‌ ತ್ರಿಸದಸ್ಯ ಪೀಠ ಕಾಯ್ದಿರಿಸಿದ ಬಳಿಕ ಕೇರಳ ಹೈಕೋರ್ಟ್‌ ಈ ತೀರ್ಪು ಬಂದಿರುವುದು ಗಮನಾರ್ಹವಾಗಿದೆ.

ಪ್ರಕರಣ:: ಅಭಿಲಾಷ್ ಕುಮಾರ್ ಆರ್. ವಿರುದ್ಧ ಕೇರಳ ಬುಕ್ಸ್ ಅಂಡ್ ಪಬ್ಲಿಕೇಷನ್ ಸೊಸೈಟಿ & ಆರ್ಸ್.

ತೀರ್ಪು:  5ನೇ ಆಗಸ್ಟ್ 2022 ಶುಕ್ರವಾರ.

Sunday, September 5, 2021

ನ್ಯಾಯಾಲಯಕ್ಕೆ ಸಾಧ್ಯವಾಗದ್ದು, ಪಂಚಾಯತಿಗೆ ಸಾಧ್ಯವಾಯಿತು..!

 ಈ ಗ್ರಾಮ ಪಂಚಾಯತಿಯಲ್ಲಿ ‘ಸರ್’  ‘ಮ್ಯಾಡಮ್’ ಪದ ಬಳಸುವಂತಿಲ್ಲ..

ನ್ಯಾಯಾಲಯಕ್ಕೆ ಸಾಧ್ಯವಾಗದ್ದು, ಪಂಚಾಯತಿಗೆ ಸಾಧ್ಯವಾಯಿತು..!

ಆರು ತಿಂಗಳ ಹಿಂದೆ ಸುಪ್ರೀಂಕೋರ್ಟಿನಲ್ಲಿ  ಭಾರತದ ಮುಖ್ಯ ನ್ಯಾಯಮೂರ್ತಿ  ಎಸ್ ಎ ಬೋಬಡೆ ಅವರು ಯುವ ವಕೀಲರೊಬ್ಬರು ತಮ್ಮನ್ನು ‘ಯುವರ್ ಆನರ್’ ಎಂಬುದಾಗಿ ಸಂಬೋಧಿಸಿದಾಗ ಸಿಟ್ಟಿಗೆದ್ದಿದ್ದರು.

‘ನಿಮ್ಮ ಮನಸ್ಸಿನಲ್ಲಿ ಏನಿದೆ? ನೀವು ಅಮೆರಿಕದ ಸುಪ್ರೀಂಕೋರ್ಟಿನಲ್ಲಿ ಇದ್ದೇನೆ ಅಂದುಕೊಂಡಿದ್ದೀರೋ ಅಥವಾ ಅಲ್ಲಿನ ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ಇದ್ದೇನೆ ಅಂದುಕೊಂಡಿದ್ದೀರೋ?’

ತತ್ ಕ್ಷಣವೇ ಕಾನೂನು ವಿದ್ಯಾರ್ಥಿಯಾಗಿದ್ದ ಯುವ ವಕೀಲರು  ನಾಲಿಗೆ ಕಚ್ಚಿಕೊಂಡರು. ‘ತಪ್ಪಾಯಿತು, ಕ್ಷಮಿಸಿ’ ಎಂದು ಕೇಳಿಕೊಂಡು ಯುವ ವಕೀಲರು ‘ಇನ್ನು ಮುಂದೆ  ‘ಮೈ ಲಾರ್ಡ್ಸ್ ಪದ ಬಳಸುತ್ತೇನೆ’ ಎಂದು ಉತ್ತರಿಸಿದರು.

‘ಏನಾದರೂ ಸರಿ. ನೀವು ಯಾವ ಪದ ಬಳಸುತ್ತೀರಿ ಎಂದೇ ನಾವು ಗಮನಿಸುತ್ತಿರುವುದಿಲ್ಲ, ಆದರೆ ತಪ್ಪು ಪದಗಳನ್ನು ಬಳಸಬೇಡಿ’ ಎಂದರು ಸಿಜೆಐ.

ಹಿಂದೆ, 2020ರ ಆಗಸ್ಟ್ ತಿಂಗಳಲ್ಲಿ ಕೂಡಾ ಇದೇ ರೀತಿ ನ್ಯಾಯಮೂರ್ತಿಗಳನ್ನು ಉದ್ದೇಶಿಸಿ ‘ಯುವರ್ ಆನರ್’ ಪದ ಬಳಸಿದಾಗ  ಸಿಜೆಐ ಬೋಬ್ಡೆ ಸಿಡಿಮಿಡಿಗೊಂಡಿದ್ದರು. ಆಗ ಕೂಡಾ  ‘ನೀವೇನು ಅಮೆರಿಕದ ಸುಪ್ರೀಂಕೋರ್ಟಿನ ಮುಂದೆ ಇದ್ದೀರೋ?’ ಎಂಬುದಾಗಿ ಅವರು ವಕೀಲರನ್ನು ಗದರಿದ್ದರು.

ಉನ್ನತ  ನ್ಯಾಯಾಲಯಗಳಲ್ಲಿ ಸಾಮಾನ್ಯವಾಗಿ ಬಳಸುವ  ‘ಮೈ ಲಾರ್ಡ್’, ‘ಯುವರ್ ಲಾರ್ಡ್ ಶಿಪ್’ ಮುಂತಾದ ಶಿಷ್ಟಾಚಾರದ ಪದಗಳು ನಮ್ಮ ದೇಶಕ್ಕೆ ಬ್ರಿಟಿಷ್ ಆಡಳಿತದ ಬಳುವಳಿಗಳು. ಈ ಪದಗಳ ಬಳಕೆಯನ್ನು ನಿಲ್ಲಿಸಬೇಕು ಎಂದು ಹಲವಾರು ವರ್ಷಗಳಿಂದಲೇ ಪ್ರಯತ್ನಗಳು ನಡೆಯುತ್ತಲೇ ಬಂದಿವೆ.

ಭಾರತದ ವಕೀಲರ ಸಂಘವಾದ ಬಾರ್ ಕೌನ್ಸಿಲ್ ಆಫ್ ಇಂಡಿಯಾಕ್ಕೆ  ಇಂತಹ ಪದಗಳ ಬಳಕೆ ಬಗ್ಗೆ ನಿಯಮಗಳನ್ನು ರೂಪಿಸಲು 1961ರ ವಕೀಲರ ಕಾಯ್ದೆಯ ಸೆಕ್ಷನ್ 49 (1)(ಸಿ) ಅಧಿಕಾರ ನೀಡಿದೆ.  2006ರಲ್ಲೇ  ಬಾರ್ ಕೌನ್ಸಿಲ್ ಆಫ್ ಇಂಡಿಯಾ , ‘ಮೈಲಾರ್ಡ್’ ‘ಯುವರ್ ಲಾರ್ಡ್ ಶಿಪ್’ ನಂತಹ ಪದಗಳನ್ನು  ಬಳಸಲು ಉತ್ತೇಜನ ನೀಡಬಾರದು ಎಂದು ನಿರ್ಣಯ ಕೈಗೊಂಡಿತ್ತು.

2014ರಲ್ಲಿ ಶಿವಸಾಗರ್ ತಿವಾರಿ ಎಂಬ ವಕೀಲರೊಬ್ಬರು, ಇಂತಹ ಪದಗಳು ದೇಶದ ಘನತೆಗೆ ಧಕ್ಕೆ ತರುತ್ತವೆ ಮತ್ತು ಇವು ಗುಲಾಮಿತನದ ಸಂಕೇತವಾದ್ದರಿಂದ ಅವುಗಳ ಬಳಕೆಯನ್ನು  ನಿಷೇಧಿಸಬೇಕು’ ಎಂದು ಸುಪ್ರೀಂಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಆದರೆ ನ್ಯಾಯಮೂರ್ತಿಗಳಾದ ಎಚ್.ಎಲ್. ದತ್ತು ಮತ್ತು ಬೋಬ್ಡೆ ಅವರ ಪೀಠವು ‘ಈ ಪದಗಳ ಬಳಕೆ ಎಂದಿಗೂ ಕಡ್ಡಾಯವಾಗಿಲ್ಲ’ ಎಂಬುದಾಗಿ ಹೇಳಿ ಅರ್ಜಿಯನ್ನು ತಿರಸ್ಕರಿಸಿತ್ತು.

‘ನ್ಯಾಯಾಲಯವನ್ನು ಗೌರವಯುತವಾಗಿ ಸಂಬೋಧಿಸಿ ಅಷ್ಟೆ. ನೀವು ‘ಸರ್’ ಎಂದರೂ ಒಪ್ಪುತ್ತೇವೆ, ‘ಯುವರ್ ಆನರ್’ ಎಂದರೂ  ಒಪ್ಪುತ್ತೇವೆ, ‘ಲಾರ್ಡ್ ಶಿಪ್’ ಎಂದು ಕರೆದರೂ ಒಪ್ಪುತ್ತೇವೆ.’ ಎಂದು ಪೀಠ ಹೇಳಿತ್ತು.

ಆದರೆ, 2019ರಲ್ಲಿ ರಾಜಸ್ಥಾನ ಹೈಕೋರ್ಟ್ ‘ಮೈಲಾರ್ಡ್’  ‘ಯುವರ್ ಲಾರ್ಡ್ ಶಿಪ್’ ಪದಗಳ ಬಳಕೆಯನ್ನು ನಿಷೇಧಿಸಿತ್ತು. ಸಂವಿಧಾನವು ಸಮಾನತೆಯನ್ನು ಪ್ರತಿಪಾದಿಸಿರುವಾಗ  ಇಂತಹ ಪದಗಳ ಬಳಕೆ ಸರಿಯಲ್ಲ ಎಂದು ರಾಜಸ್ಥಾನ ಹೈಕೋರ್ಟ್ ಸಾರಿತ್ತು.

ಆದರೂ ನ್ಯಾಯಾಲಯಗಳಲ್ಲಿ ಇಂತಹ ಪದಗಳ ಬಳಕೆ ನಿರಂತರವಾಗಿ ನಡೆಯುತ್ತಲೇ ಇದೆ.

ಬ್ರಿಟಿಷ್ ವಸಾಹತಿನ ಬಳುವಳಿ ಪದಗಳನ್ನು ನಿಷೇಧಿಸುವ ಬಗ್ಗೆ ನ್ಯಾಯಾಲಯಗಳೇ ಹೀಗೆ ದ್ವಂದ್ವದಲ್ಲಿ ಇರುವ ಹೊತ್ತಿನಲ್ಲಿ  ಕೇರಳದ ಪುಟ್ಟ ಗ್ರಾಮ ಪಂಚಾಯತಿಯೊಂದು ‘ಸರ್ ಮತ್ತು  ಮ್ಯಾಡಮ್’ ನಂತಹ ಬ್ರಿಟಿಷ್ ವಸಾಹತುಶಾಹಿಯ ಪದಗಳ ಬಳಕೆಯನ್ನು ನಿಷೇಧಿಸುವ ಮೂಲಕ  ಇಂತಹ ಪದಗಳ ಬಳಕೆಯನ್ನು ನಿಷೇಧಿಸಿದ ದೇಶದ ಮೊತ್ತ ಮೊದಲ ಗ್ರಾಮ ಪಂಚಾಯತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥುರ್ ಗ್ರಾಮ ಪಂಚಾಯತಿಯು 2021ರ ಆಗಸ್ಟ್ 31ರ ಮಂಗಳವಾರ  ‘ಸರ್ ಮತ್ತು ಮ್ಯಾಡಮ್’  ಪದಗಳ ಬಳಕೆಯನ್ನು ನಿಷೇಧಿಸುವ  ಚಾರಿತ್ರಿಕ ನಿರ್ಣಯವನ್ನು ಕೈಗೊಂಡು ಇತಿಹಾಸ  ಬರೆದಿದೆ.

16 ಸದಸ್ಯರ ಕಾಂಗ್ರೆಸ್ ಆಡಳಿತದ ಗ್ರಾಮ ಪಂಚಾಯಿತಿಯು ಈ ವಾರದ ಆರಂಭದಲ್ಲಿ ಅಂಗೀಕರಿಸಿದ ಸರ್ವಾನುಮತದ ನಿರ್ಣಯಕ್ಕೆ ಏಳು ಸಿಪಿಐ (ಎಂ) ನಾಮನಿರ್ದೇಶಿತರು ಮತ್ತು ಒಬ್ಬ ಬಿಜೆಪಿ ಸದಸ್ಯರ ಬೆಂಬಲ ಲಭಿಸಿದೆ. ಈ ವಿಚಾರದಲ್ಲಿ ಪಕ್ಷಗಳು ಯಾವುದೇ ರಾಜಕೀಯವನ್ನೂ ಎಳೆದುತರಲಿಲ್ಲ ಎಂಬುದೇ ವಿಶೇಷ.

ಸಾಮಾನ್ಯ ಜನರು, ಜನಪ್ರತಿನಿಧಿಗಳು ಮತ್ತು ನಾಗರಿಕ ಸಂಸ್ಥೆಯ ಅಧಿಕಾರಿಗಳ ನಡುವಣ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ  ಇಂತಹ ಕ್ರಮ ಕೈಗೊಂಡಿರುವ ಮಾಥುರ್ ಗ್ರಾಮ ಪಂಚಾಯತಿ ಇದನ್ನು ಪಂಚಾಯತಿಯ ಪ್ರಕಟಣಾ ಫಲಕದಲ್ಲಿ ಅಂಟಿಸುವ ಮೂಲಕ ಜಾರಿಗೂ ತಂದಿದೆ.

ಜನರು, ಪಂಚಾಯತಿನ ಯಾವುದೇ ಅಧಿಕಾರಿಯನ್ನು ಉದ್ದೇಶಿಸಿ ‘ಸರ್’ ಅಥವಾ ‘ಮ್ಯಾಡಮ್’ ಎಂಬುದಾಗಿ ಸಂಬೋಧಿಸಬೇಕಾಗಿಲ್ಲ.  ಅಧಿಕಾರಿಯ ಹುದ್ದೆ ಅಥವಾ ಹೆಸರಿನಿಂದಲೇ ಸಂಬೋಧಿಸಬಹುದು. ಅಧಿಕಾರಿಗಳು ವಯಸ್ಸಾದವರೋ  ಹಿರಿಯರೋ ಆಗಿದ್ದರೆ ಮಲಯಾಳಂನಲ್ಲಿ ‘ಚೇತಾ’/ ‘ಚೇತನ್’ (ಅಣ್ಣ) ಅಥವಾ ‘ಚೇಚಿ’ (ಅಕ್ಕ) ಇಂತಹ ಸ್ನೇಹಪರ ಪದಗಳನ್ನು ಬಳಸಬಹುದು.

‘ಸರ್’ ಅಥವಾ ‘ಮ್ಯಾಡಮ್’ ಪದ ಬಳಸದ್ದಕ್ಕಾಗಿ ಸೇವೆ ನೀಡಲು ಯಾರಾದರೂ ನಿರಾಕರಿಸಿದರೆ ಜನರು ಪಂಚಾಯತ್ ಅಧ್ಯಕ್ಷರು ಅಥವಾ ಕಾರ್ಯದರ್ಶಿಗೆ ದೂರು ನೀಡಬಹುದು.

ಪಂಚಾಯತಿ ನಿರ್ಣಯದ ಪರಿಣಾಮವಾಗಿ ಈಗ ಅಲ್ಲಿನ  ಅಧಿಕಾರಿಗಳು ತಮ್ಮ ಮೇಜಿನ ಮೇಲೆ ತಮ್ಮ ಹೆಸರು, ಹುದ್ದೆಗಳ ಫಲಕಗಳನ್ನೂ ಇಡುತ್ತಿದ್ದಾರೆ.

'ಸರ್' ಮತ್ತು 'ಮೇಡಂ' ಗೆ ಪರ್ಯಾಯ ಪದಗಳನ್ನು ನೀಡುವಂತೆ ಪಂಚಾಯತಿಯು ಅಧಿಕೃತ ಭಾಷಾ ಇಲಾಖೆಯನ್ನು  ಕೂಡಾ  ಕೋರಿದೆ.

ಪ್ರಜಾಪ್ರಭುತ್ವದಲ್ಲಿ ನಾಗರಿಕರೇ ಪ್ರಭುಗಳು. ನಾವೆಲ್ಲರೂ ಅವರಿಗೆ ಸೇವೆ ಒದಗಿಸುವ ಸೇವಕರು. ನಮ್ಮ ಸೇವೆ ಪಡೆಯಲು ಜನರು ನಮ್ಮನ್ನು ಅಂಗಲಾಚುವಂತೆ ಆಗಬಾರದು. ಇದಕ್ಕಾಗಿ, ಪಂಚಾಯತ್ ಪ್ರಸ್ತುತ 'ಅಪೇಕ್ಷಾ ನಮೂನೆ' (ಅರ್ಜಿ ನಮೂನೆ) ಯನ್ನು 'ಅವಕಾಶ ಪತ್ರಿಕೆ' (ಹಕ್ಕು ಪ್ರಮಾಣಪತ್ರ) ಆಗಿ ಬದಲಾಯಿಸಲೂ ಪಂಚಾಯತಿಯು ತೀರ್ಮಾನಿಸಿದೆ ಎಂದೂ ಪಂಚಾಯತಿಯ ಉಪಾಧ್ಯಕ್ಷರು ತಿಳಿಸಿದ್ದಾರೆ.

ಎಂತಹ ಅನುಕರಣೀಯ ಗ್ರಾಮ ಪಂಚಾಯತಿ ಇದು ಅಲ್ಲವೇ?

ವಿಡಿಯೋ ನೋಡಲು ಕೆಳಗೆ ಕ್ಲಿಕ್ ಮಾಡಿರಿ:


 -ನೆತ್ರಕೆರೆ ಉದಯಶಂಕರ


Saturday, December 26, 2020

ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣ: ಹೈಕೋರ್ಟಿಗೆ ಕಸ್ಟಮ್ಸ್ ?

 ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣ: ಹೈಕೋರ್ಟಿಗೆ ಕಸ್ಟಮ್ಸ್ ?

ತಿರುವನಂತಪುರ: ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸ್ವಪ್ನಾ ಸುರೇಶ್ ಭೇಟಿ ಮಾಡಲು ತನ್ನ ಅಧಿಕಾರಿಗಳಿಗೆ ಅವಕಾ ನಿರಾಕರಿಸಿರುವ ರಾಜ್ಯ ಜೈಲು ಇಲಾಖೆಯ ನಿರ್ಧಾರದ ವಿರುದ್ಧ ಕೇರಳ ಹೈಕೋರ್ಟ್ ಮೆಟ್ಟಿಲೇರಲು ಕಸ್ಟಮ್ಸ್ ಇಲಾಖೆ ಯೋಜಿಸುತ್ತಿದೆ ಎಂದು ಸುದ್ದಿ ಮೂಲಗಳು  2020 ಡಿಸೆಂಬರ್ 26ರ ಶನಿವಾರ ತಿಳಿಸಿವೆ.

ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ- ಕೋಫೆಪೊಸಾ ಅಡಿಯಲ್ಲಿ ರಾಜ್ಯ ರಾಜಧಾನಿಯಲ್ಲಿ ಮಹಿಳಾ ಸೆರೆಮನೆಯಲ್ಲಿ ಇರುವ ಚಿನ್ನ ಕಳ್ಳಸಾಗಣೆ ಪ್ರಕರಣದ ಮುಖ್ಯ ಆರೋಪಿಯನ್ನು ಭೇಟಿ ಮಾಡುವ ಯಾರೇ ವ್ಯಕ್ತಿಗಳ ಬಗ್ಗೆ ತನಗೆ ತಿಳಿಸಬೇಕು ಮತ್ತು ಕಸ್ಟಮ್ಸ್ ಅಧಿಕಾರಿಯೊಬ್ಬರು ಅಂತಹ ಸಂದರ್ಶಕರ ಜೊತೆಗಿರುತ್ತಾರೆ ಎಂದು ಕಸ್ಟಮ್ಸ್ ಇಲಾಖೆ ಇತ್ತೀಚೆಗೆ ಸೆರೆಮನೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಆದರೆ ಇದನ್ನು ನಿರಾಕರಿಸಿದ ಜೈಲು ಇಲಾಖೆ ಕಳೆದ ವಾರ ಆರೋಪಿಯ ಸಂಬಂಧಿಕರೊಂದಿಗೆ ಸೆರೆಮನೆಗೆ ಬಂದ ಕಸ್ಟಮ್ಸ್ ಅಧಿಕಾರಿಯನ್ನು ವಾಪಸ್ ಕಳುಹಿಸಿತ್ತು. ಇಂತಹ ಕ್ರಮವು ಹೊಸ ಪೂರ್ವನಿದರ್ಶನವನ್ನು ಸೃಷ್ಟಿಸುತ್ತದೆ ಮತ್ತು ಜೈಲು ಅಧಿಕಾರಿಗಳನ್ನು ಭ್ರಮ ನಿರಸನಗೊಳಿಸುತ್ತದೆ ಎಂದು ರಾಜ್ಯ ಜೈಲು ಮುಖ್ಯಸ್ಥ ರಿಷಿರಾಜ್ ಸಿಂಗ್ ಹೇಳಿದ್ದಾರೆ.

ಆದರೆ ಇದು ಉನ್ನತ ಮಟ್ಟದ ಪ್ರಕರಣವನ್ನು ದುರ್ಬಲಗೊಳಿಸುವ ಪ್ರಯತ್ನ ಎಂದು ಕಸ್ಟಮ್ಸ್ ಅಧಿಕಾರಿಗಳು ಭಯಪಡುತ್ತಾರೆ.

ನಾವು ಈಗಾಗಲೇ ಕೋಫೆಪೊಸಾ ಮಂಡಳಿಗೆ ಬಗ್ಗೆ ಮಾಹಿತಿ ನೀಡಿದ್ದೇವೆ. ನಾವು ಮುಂದಿನ ವಾರ ಹೈಕೋರ್ಟ್‌ಗೆ ಹೋಗುತ್ತೇವೆ. ಆಕೆ ಈಗಾಗಲೇ ಗಂಭೀರ ಬೆದರಿಕೆಗಳನ್ನು ಎದುರಿಸುತ್ತಿರುವುದಾಗಿ ದೂರು ನೀಡಿದ್ದಾರೆ ಮತ್ತು ಕೆಲವರು ಆಕೆಯನ್ನು ಜೈಲಿನಲ್ಲಿ ಭೇಟಿಯಾಗಿ ಹೇಳಿಕೆಯನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಇಲಾಖೆ ಸುಪ್ರೀಂ ಕೋರ್ಟಿನ ಮೊರೆ ಹೋಗಬೇಕಾಗಬಹುದು ಎಂದು ಅವರು ಹೇಳಿದರು.

ನಡೆಯುತ್ತಿರುವ ತನಿಖೆಗೆ ರಾಜ್ಯ ಪೊಲೀಸರು ಮತ್ತು ಜೈಲು ಅಧಿಕಾರಿಗಳು ಸಂಪೂರ್ಣವಾಗಿ ಸಹಕರಿಸುತ್ತಿಲ್ಲ ಎಂದೂ ಅವರು ಹೇಳಿದರು.

ಆದರೆ ಜೈಲು ಇಲಾಖೆ ಸಾಮಾನ್ಯ ಜೈಲು ಕಾರ್ಯವಿಧಾನಗಳು ಮತ್ತು ಕಾನೂನುಗಳು ಕೋಫೆಪೊಸಾ ಬಂಧಿತರಿಗೂ ಅನ್ವಯವಾಗುತ್ತವೆ ಮತ್ತು ಅಧಿಕಾರಿಗಳನ್ನು ಪ್ರತಿ ಬಾರಿ ಸಂದರ್ಶಕರೊಂದಿಗೆ ಅನುಮತಿಸಲಾಗುವುದಿಲ್ಲ ಎಂದು ಪ್ರತಿಪಾದಿಸಿದೆ.

ಡಿಸೆಂಬರ್ ಮೊದಲ ವಾರದಲ್ಲಿ, ಸ್ವಪ್ನಾ ಸುರೇಶ್ ತನ್ನ ಜೀವಕ್ಕೆ ಅಪಾಯವಿದೆ ಎಂದು ಕೊಚ್ಚಿಯಲ್ಲಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ತಿಳಿಸಿತ್ತು ಮತ್ತು ಜೈಲಿನಲ್ಲಿ ತನಗೆ ಮತ್ತು ತನ್ನ ಕುಟುಂಬ ಸದಸ್ಯರಿಗೂ ವಿಶೇಷ ರಕ್ಷಣೆ ಒದಗಿಸಬೇಕು ಕೋರಿದ್ದಾರೆ.

ದೊಡ್ಡ ಹೆಸರುಗಳನ್ನು ಹೇಳದಂತೆ ಆರೋಪಿಯ ಮೇಲೆ ಒತ್ತಡವಿದೆ ಮತ್ತು ವಿಷಯದಲ್ಲಿ ಕೆಲವು ಜನರು ಆಕೆಯನ್ನು ಜೈಲಿನಲ್ಲಿ ಭೇಟಿಯಾಗಿದ್ದರು. ನಂತರ ಜೈಲಿನಲ್ಲಿದ್ದ ಆಕೆಗೆ ಸಾಕಷ್ಟು ಭದ್ರತೆ ಒದಗಿಸುವಂತೆ ನ್ಯಾಯಾಲಯ ಜೈಲು ಇಲಾಖೆಗೆ ನಿರ್ದೇಶನ ನೀಡಿತ್ತು.

ನ್ಯಾಯಾಲಯದ ನಿರ್ದೇಶನದ ನಂತರ ಆಕೆ ಇರುವ ಸೆರೆಮನೆಗೆ ಹೆಚ್ಚಿನ ಭದ್ರತೆಯನ್ನು ಹಾಕಲಾಯಿತು.

ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಏಜೆನ್ಸಿಗಳು ಆಕೆ ಮಾಹಿತಿ ಬಹಿರಂಗ ಪಡಿಸಿದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು ಮತ್ತು ಬಳಿಕ ಆಕೆಯನ್ನು ಭೇಟಿ ಮಾಡುವ ಎಲ್ಲರ ಬಗ್ಗೆ ತನಗೆ ಮಾಹಿತಿ ನೀಡಬೇಕು ಮತ್ತು ಕಸ್ಟಮ್ಸ ಅಧಿಕಾರಿಯೊಬ್ಬರು ಸಂದರ್ಶಕರ ಜೊತೆಗೆ ಇರುತ್ತಾರೆ ಎಂದು ಕಸ್ಟಮ್ಸ್ ಇಲಾಖೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಆದರೆ ಇದಕ್ಕೆ ಅನುಮತಿ ಅನುಮತಿಸಲಾಗುವುದಿಲ್ಲ, ಅದು ತನ್ನ ಅಧಿಕಾರಿಗಳ ಸಮಗ್ರತೆಯನ್ನು ಪ್ರಶ್ನಿಸುತ್ತದೆ ಎಂದು ಜೈಲು ಇಲಾಖೆ ಹೇಳಿದೆ.

ಜುಲೈ ರಂದು ರಾಜ್ಯ ರಾಜಧಾನಿಯಲ್ಲಿರುವ ಯುಎಇ ದೂತಾವಾಸಕ್ಕೆ ರವಾನೆ ಮಾಡಾಗಿದ್ದ ಪ್ಯಾಕೇಜಿನಿಂದ ೩೦ ಕೆಜಿ ಚಿನ್ನವನ್ನು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡ ಬಳಿಕ ಚಿನ್ನದ ಕಳ್ಳಸಾಗಣೆ ಪ್ರಕರಣ ಬೆಳಕಿಗೆ ಬಂದಿತ್ತು. ನಂತರ ಪ್ಯಾಕೇಜ್ ಸ್ವೀಕರಿಸಲು ಬಂದ ದೂತಾವಾಸದ ಮಾಜಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಪಿ.ಎಸ್.ಸರೀತ್ ಕುಮಾರ್ ಅವರನ್ನು ಕಸ್ಟಮ್ಸ್ ಇಲಾಖೆ ಬಂಧಿಸಿತ್ತು.

ಐದು ದಿನಗಳ ನಂತರ ಇತರ ಇಬ್ಬರು ಶಂಕಿತರಾದ ಸ್ವಪ್ನಾ ಸುರೇಶ್ ಮತ್ತು ಅವರ ಸಹಚರ ಸಂದೀಪ್ ನಾಯರ್ ಅವರನ್ನು ಬೆಂಗಳೂರಿನಲ್ಲಿರುವ ಅಡಗುತಾಣದಿಂದ ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿತ್ತು. ಬಳಿಕ ಕೇರಳ ಮುಖ್ಯಮಂತ್ರಿಯವರ ಪ್ರಧಾನ ಕಾರ್‍ಯದರ್ಶಿ ಹಿರಿಯ ಐಎಎಸ್ ಅಧಿಕಾರಿ ಎಂ.ಶಿವಶಂಕರ್ ಅವರನ್ನು ಸ್ವಪ್ನಾ ಸುರೇಶ್ ಜೊತೆಗಿನ ಸಂಪರ್ಕಗಳ ವಿವರ ಹೊರಬಂದಾಗ ಬಂಧಿಸಲಾಗಿತ್ತು.

ತನಿಖೆಯ ಸಮಯದಲ್ಲಿ ಕಾನ್ಸುಲರ್ ಕಚೇರಿಯ ಮೂಲಕ ಕಳ್ಳಸಾಗಣೆ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ  ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಪ್ರಸ್ತುತ, ಐದು ಕೇಂದ್ರೀಯ ಏಜೆನ್ಸಿಗಳನ್ನು ಒಳಗೊಂಡ ಬಹು-ಏಜೆನ್ಸಿ ತಂಡವು ಪ್ರಕರಣದ ತನಿಖೆ ನಡೆಸುತ್ತಿದ್ದು, ೩೪ ಜನರನ್ನು ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮುಖ್ಯಮಂತ್ರಿಯ ಮತ್ತೊಬ್ಬ ಕಾರ್ಯದರ್ಶಿ ಸಿಎಂ ರವೀಂದ್ರನ್ ಮತ್ತು ರಾಜ್ಯ ಸಚಿವ ಕೆ ಟಿ ಜಲೀಲ್ ಅವರನ್ನು ಒಂದೆರಡು ಬಾರಿ ವಿಚಾರಣೆಗೆ ಗುರಿ ಪಡಿಸಿತ್ತು.

Advertisement